5 ತಾಸು ತಡವಾದರೂ ಪಾಕಿಸ್ತಾನದಿಂದ ದೆಹಲಿ ತಲುಪಿದ ಸಂಜೋತಾ ಎಕ್ಸ್ಪ್ರೆಸ್
ನವದೆಹಲಿ, ಆಗಸ್ಟ್ 9: ಪಾಕಿಸ್ತಾನ ಅತ್ತಾರಿಯಿಂದ ಹೊರಟಿದ್ದ ಸಂಜೋತಾ ಎಕ್ಸ್ಪ್ರೆಸ್ ಅಂತೂ ದೆಹಲಿ ಬಂದು ತಲುಪಿದೆ.
ಗುರುವಾರ ಹೊರಟಿದ್ದ ಸಂಜೋತಾ ಎಕ್ಸ್ಪ್ರೆಸ್ ನ್ನು ಮಾರ್ಗಮಧ್ಯದಲ್ಲೇ ನಿಲ್ಲಿಸಲಾಗಿತ್ತು. ಸಂಜೌತಾ ಎಕ್ಸ್ಪ್ರೆಸ್ನ್ನು ಶಾಶ್ವತವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪಾಕಿಸ್ತಾನ ರೈಲ್ವೆ ಸಚಿವ ಪರಶಿದ್ ಅಹ್ಮದ್ ಖಾನ್ ಗುರುವಾರ ಟ್ವೀಟ್ ಮಾಡಿದ್ದರು.
ಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು 35 ಎ ಕುರಿತು ಭಾರತದ ನಿರ್ಧಾರದ ನಂತರ ಸಂಜೋತಾ ಎಕ್ಸ್ಪ್ರೆಸ್ ಮತ್ತೆ ಚರ್ಚೆಯ ವಿಷಯವಾಗಿದೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಚರಿಸುತ್ತಿರುವ ಸಂಜೋತಾ ಎಕ್ಸ್ಪ್ರೆಸ್ ಅತ್ತಾರಿಯಿಂದ ಸುಮಾರು ಐದು ಗಂಟೆಗಳ ವಿಳಂಬವಾಗಿ ಹೊರಟಿದ್ದು, ಇಂದು ಬೆಳಿಗ್ಗೆ 8 ಗಂಟೆಗೆ ದೆಹಲಿಯನ್ನು ತಲುಪಿತು. ಇದು ಅತ್ತಾರಿಯಿಂದ ದೆಹಲಿಗೆ ಒಂದೂವರೆ ಗಂಟೆಗೆ ಹೊರಟಿತ್ತು.

ದೆಹಲಿ ಮತ್ತು ಲಾಹೋರ್ಗೆ ಸಂಪರ್ಕ ಕಲ್ಪಿಸುವ ರೈಲು ಸೇವೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಗಡಿಯ ಎರಡೂ ಬದಿಗಳಲ್ಲಿ ನೂರಾರು ಪ್ರಯಾಣಿಕರು ಭದ್ರತಾ ಅನುಮತಿಗಾಗಿ ಹಲವು ಗಂಟೆಗಳ ಕಾಲ ಕಾಯುತ್ತಿದ್ದರು. ಹಲವಾರು ಗಂಟೆಗಳ ನಂತರ, ಲಾಹೋರ್ಗೆ ಸಂಜೋತಾ ಎಕ್ಸ್ಪ್ರೆಸ್ ಸಂಜೆ 6.41 ಕ್ಕೆ ಅತ್ತಾರಿಯಿಂದ ಹೊರಟಿತು.
ಸಂಜೋತಾ ಎಕ್ಸ್ಪ್ರೆಸ್ ಮೂಲಕ ಒಟ್ಟು 117 ಪ್ರಯಾಣಿಕರು ದೆಹಲಿಯನ್ನು ತಲುಪಿದ್ದಾರೆ. ಇವರಲ್ಲಿ 76 ಭಾರತೀಯರು ಮತ್ತು 41 ಪಾಕಿಸ್ತಾನಿ ಪ್ರಜೆಗಳು ಸೇರಿದ್ದಾರೆ. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಸಂಜೋತಾ ಎಕ್ಸ್ಪ್ರೆಸ್ ಅನ್ನು ವಾಗಾ ಗಡಿಯಲ್ಲಿ ನಿಲ್ಲಿಸಲಾಗಿತ್ತು. ಬಳಿಕ ಮುಂದೆ ಸಾಗಲು ಅವಕಾಶ ಮಾಡಿಕೊಡಲಾಯಿತು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ರದ್ದುಗೊಳಿಸುವ ಭಾರತದ ಕ್ರಮವನ್ನು ಉಲ್ಲೇಖಿಸಿ ಪಾಕಿಸ್ತಾನವು ಭಾರತೀಯ ಹೈಕಮಿಷನರ್ ಅವರನ್ನು ವಾಪಸ್ ಕಳುಹಿಸಲಾಗುವುದು ಮತ್ತು ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸುವುದಾಗಿ ಹೇಳಿಕೆ ನೀಡಿದೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications