ಶಾಲೆಗಳಲ್ಲಿ ಸಂಸ್ಕೃತ ಶ್ಲೋಕ ಧಾರ್ಮಿಕ ಹಕ್ಕಿನ ಉಲ್ಲಂಘನೆಯೇ?
ನವದೆಹಲಿ, ಜನವರಿ 29: ದೇಶದಾದ್ಯಂತ ಕೇಂದ್ರೀಯ ವಿದ್ಯಾಲಯದ ಶಾಲೆಗಳಲ್ಲಿ ಹಿಂದೂ ಶ್ಲೋಕಗಳಾದ 'ಅಸತೋ ಮಾ ಸದ್ಗಮಯಾ' ಮತ್ತು 'ಓಂ ಸಹನಾ ವವತು' ಹೇಳುವುದನ್ನು ಕಡ್ಡಾಯಗೊಳಿಸಿರುವುದು ಅಲ್ಪಸಂಖ್ಯಾತ ಧರ್ಮೀಯರ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆಯೇ?
ಹೀಗೊಂದು ತಕರಾರಿನೊಂದಿಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಿರುವ ಸುಪ್ರೀಂಕೋರ್ಟ್ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
ಕೇಂದ್ರೀಯ ವಿದ್ಯಾಲಯಗಳಲ್ಲಿ ಸಂಸ್ಕೃತ ಶ್ಲೋಕಗಳ ಪಠಣವನ್ನು ಕಡ್ಡಾಯಗೊಳಿಸಿರುವುದು ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘನೆ ಮಾಡುವುದು ಮಾತ್ರವಲ್ಲದೆ ನಾಸ್ತಿಕರು, ಸಂದೇಹವಾದಿಗಳು, ವಿಚಾರವಾದಿಗಳು ಮತ್ತು ಈ ಪ್ರಾರ್ಥನಾ ವ್ಯವಸ್ಥೆಯಲ್ಲಿ ನಂಬಿಕೆ ಇರದ ಇತರರ ಹಕ್ಕುಗಳನ್ನೂ ಉಲ್ಲಂಘಿಸಿದಂತಾಗುತ್ತದೆ ಎಂದು ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ನಿವಾಸಿ ವಿನಾಯಕ್ ಶಾ ಎಂಬುವವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಕೇಂದ್ರೀಯ ವಿದ್ಯಾಲಯಗಳಲ್ಲಿ ಪಠಿಸುವ ಶ್ಲೋಕಗಳು ಹಿಂದೂ ಧರ್ಮದ ಪ್ರಚಾರ ಮಾಡುತ್ತವೆ. ಇದು ಸಂವಿಧಾನದ 19 ಮತ್ತು 28 (1) ಪರಿಚ್ಛೇದಗಳ ಉಲ್ಲಂಘನೆಯಾಗಿದೆ. ಈ ಪ್ರಾರ್ಥನೆಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಅಡ್ಡಿಯಾಗಿವೆ. ಮಕ್ಕಳು ಸಮಸ್ಯೆಗಳಿಗೆ ವಾಸ್ತವಿಕ ಪರಿಹಾರ ಕಂಡುಕೊಳ್ಳುವ ಬದಲು ಅವುಗಳ ಪರಿಹಾರಕ್ಕೆ ದೇವರನ್ನು ಪ್ರಾರ್ಥಿಸುವ ಅಭ್ಯಾಸವನ್ನೇ ಬೆಳೆಸಿಕೊಳ್ಳುವಂತೆ ಇದು ಮಾಡುತ್ತದೆ ಎಂದು ಅವರು ವಾದಿಸಿದ್ದಾರೆ.
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಶ್ಲೋಕಗಳು ಹಿಂದೂ ಧರ್ಮಗ್ರಂಥಗಳಿಂದ ಬಂದಿರುವುದು ನಿಜ. ಆದರೆ, ಇವು ಸಾರ್ವತ್ರಿಕ ಸತ್ಯಗಳನ್ನು ಒಳಗೊಂಡಿವೆ. ಹೀಗಾಗಿ ಅವುಗಳ ಗುಣದಲ್ಲಿ ಧಾರ್ಮಿಕತೆಯಿದೆ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಸಂಸ್ಕೃತದಲ್ಲಿ ಇರುವುದೆಲ್ಲವೂ ಗುಣದಲ್ಲಿ ಧಾರ್ಮಿಕತೆಯನ್ನು ಹೊಂದಿಲ್ಲ. ನಾಳೆ ಮತ್ತೊಬ್ಬರು, ಶಾಲೆಗಳಲ್ಲಿ ಬೋಧಿಸುವ 'ಪ್ರಾಮಾಣಿಕತೆ ಅತ್ಯುತ್ತಮ ನೀತಿ' ಎಂಬ ವಾಕ್ಯವು ಇಂಗ್ಲಿಷ್ನಿಂದ ಬಂದಿರುವುದರಿಂದ ಅದು ಕ್ರೈಸ್ತ ಧರ್ಮವನ್ನು ಬಿಂಬಿಸುತ್ತದೆ ಎಂದು ವಾದಿಸಬಹುದು ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ನ ಲಾಂಛನವನ್ನು ಉಲ್ಲೇಖಿಸಿ ಗಮನ ಸೆಳೆದ ಮೆಹ್ತಾ, 'ಇವು ಭಗವದ್ಗೀತೆ ಮತ್ತು ಮಹಾಭಾರತದಿಂದ ಹುಟ್ಟಿಕೊಂಡಿರುವವು. ಹಿಂದೂ ಧರ್ಮಗ್ರಂಥದಿಂದ ಪಡೆದುಕೊಂಡ ಲಾಂಛನವನ್ನು ಬಳಸಿರುವುದರಿಂದ ಸುಪ್ರೀಂಕೋರ್ಟ್ ಜಾತ್ಯಾತೀತ ಅಲ್ಲ ಎಂದಾಗುತ್ತದೆಯೇ? ಸಾರ್ವತ್ರಿಕ ಸತ್ಯಗಳು ಅದರ ಮೂಲ ಮತ್ತು ಹುಟ್ಟನ್ನು ಗಮನಿಸದೆ ಜೀವನದಲ್ಲಿ ಅಳವಡಿಸಿಕೊಳ್ಳುವಂತಹವು. ಹೈಕೋರ್ಟ್ಗಳ ಲಾಂಛನಗಳಲ್ಲಿ ಸತ್ಯಮೇವ ಜಯತೇ ಎಂಬ ಸಾಲಿದೆ. ಇದು ಕೂಡ ಹಿಂದೂ ಕೃತಿಗಳಿಂದ ಹುಟ್ಟಿದ ಶ್ಲೋಕ ಎಂದು ಮೆಹ್ತಾ ವಾದಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications