ಸೌದಿಯಲ್ಲಿ ತಮಿಳು ಮಹಿಳೆ ಕೈ ಕಟ್, ಭಾರತದಿಂದ ಪ್ರತಿಭಟನೆ
ರಿಯಾದ್, ಅ.10: ಸೌದಿ ಪ್ರಜೆಯೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದ ತಮಿಳುನಾಡು ಮೂಲದ ಭಾರತೀಯ ಮಹಿಳೆಯ ಕೈ ಕತ್ತರಿಸಿದ್ದ ಮನೆ ಒಡತಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಅದರೆ, ಈ ಪ್ರಕರಣದ ಬಗ್ಗೆ ಹೆಚ್ಚಿನ ಸ್ಪಷ್ಟನೆ ಅಗತ್ಯ, ಈ ಅಮಾನವೀಯ ಕೃತ್ಯದ ವಿರುದ್ಧ ಭಾರತ ತನ್ನ ಪ್ರತಿಭಟನೆ ಮುಂದುವರೆಸಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಶುಕ್ರವಾರ ಹೇಳಿದ್ದಾರೆ.
ತಮಿಳುನಾಡು ಮೂಲದ 55ರ ಹರೆಯದ ಭಾರತೀಯ ಮಹಿಳೆ ಕಸ್ತೂರಿ ಮುನಿರತ್ನಂ ಅವರ ಕೈಯನ್ನು ಕಸೌದಿ ಮಹಿಳೆ ಕತ್ತರಿಸಿದ್ದರು. ಕಸ್ತೂರಿ ಅವರಿಗೆ ರಿಯಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಸ್ತೂರಿ ಅವರು ಆಸ್ಪತ್ರೆಯಲ್ಲಿ ಮಲಗಿರುವ ವಿಡಿಯೊ ದೃಶ್ಯ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿ ಭಾರಿ ಕೋಲಾಹಲ ಉಂಟಾಗಿತು. ಕಸ್ತೂರಿಯವರನ್ನು ಭಾರತಕ್ಕೆ ಕರೆತರಲು ರಾಯಭಾರ ಕಚೇರಿ ಮೇಲೆ ಒತ್ತಡ ಹೇರಲಾಗಿತ್ತು.[ರೇಪ್ ಆರೋಪಿತ ರಾಯಭಾರಿ ಭಾರತದಿಂದ ಪರಾರಿ?]

'ಸೌದಿ ಪ್ರಜೆಯೊಬ್ಬರ ನಿವಾಸದಲ್ಲಿ ಕಸ್ತೂರಿ ಮನೆಗೆಲಸ ಮಾಡಿಕೊಂಡಿದ್ದರು. ತಿಂಗಳಿಗೆ ಸುಮಾರು 180 ಡಾಲರ್ ನಷ್ಟು ಸಂಬಳ ನೀಡುವ ಭರವಸೆ ಸಿಕ್ಕಿತ್ತು. ಆದರೆ, ಕಸ್ತೂರಿಗೆ ಸರಿಯಾದ ಊಟ, ನೀಡುತ್ತಿರಲಿಲ್ಲ, ನಿರಂತರವಾಗಿ ಕಿರುಕುಳ ನೀಡಲಾಗುತ್ತಿತ್ತು. ದೌರ್ಜನ್ಯದಿಂದ ಪಾರಾಗಲು ಕಸ್ತೂರಿ ಯತ್ನಿಸಿದ್ದರು. ಈ ಬಗ್ಗೆ ಅಧಿಕಾರಿಗಳಿಗೆ ದೂರನ್ನೂ ಸಲ್ಲಿಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಸೌದಿ ಮಹಿಳೆ ಮನೆಗೆಲಸದಾಕೆಯ ಕೈಯನ್ನೇ ಕತ್ತರಿಸಿದ್ದಾರೆ' ಎಂದು ಕಸ್ತೂರಿ ಅವರ ಸೋದರಿ ವಿಜಯಕುಮಾರಿ ಹೇಳಿದ್ದಾರೆ.
Chopping of hand of Indian lady - We are very much disturbed over the brutal manner in which Indian lady has been treated in Saudi Arabia.
— Sushma Swaraj (@SushmaSwaraj) October 9, 2015 'ಸೌದಿ ಅರೇಬಿಯದಲ್ಲಿ ಭಾರತೀಯ ಮೂಲದ ಮನೆಗೆಲಸದಾಕೆಯ ಕೈಕತ್ತರಿಸಿರುವುದು ಅತ್ಯಂತ ಅಮಾನವೀಯ ಕೃತ್ಯ, ಈ ಬಗ್ಗೆ ಈಗಾಗಲೇ ಸೌದಿ ಅರೇಬಿಯಾ ರಾಯಭಾರಿ ಕಚೇರಿ ಜೊತೆ ಮಾತುಕತೆ ನಡೆಸಲಾಗಿದೆ.ಭಾರತೀಯ ರಾಯಭಾರಿ ಅಧಿಕಾರಿಗಳು ಸಂತ್ರಸ್ತ ಮಹಿಳೆಯ ಜೊತೆ ಸತತ ಸಂಪರ್ಕದಲ್ಲಿದ್ದು, ಸ್ವದೇಶಕ್ಕೆ ಕರೆತರುವ ವ್ಯವಸ್ಥೆ ಮಾಡಲಾಗುತ್ತಿದೆ' ಎಂದು ವಿದೇಶಾಂಗ ಕಚೇರಿ ವಕ್ತಾರ ವಿಕಾಸ್ ಸ್ವರೂಪ್ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗೆ ನೇಪಾಳಿ ಮಹಿಳೆಯ ಮೇಲೆ ಅತ್ಯಾಚಾರ ಹೊತ್ತ ಭಾರತದಲ್ಲಿರುವ ಸೌದಿ ಅರೇಬಿಯಾ ರಾಯಭಾರಿ ಪರಾರಿಯಾಗಿರುವ ಘಟನೆ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications