ಮೊದಲ ಸಲಿಂಗಿ ನ್ಯಾಯಮೂರ್ತಿ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ ಸೌರಭ್ ಕೃಪಾಲ್
ನವದೆಹಲಿ, ನವೆಂಬರ್ 16: ದೆಹಲಿ ಹೈಕೋರ್ಟ್ಗೆ ಶೀಘ್ರದಲ್ಲೇ ಮೊದಲ ಸಲಿಂಗಿ ನ್ಯಾಯಮೂರ್ತಿ ನೇಮಕವಾಗಲಿದೆ.
ದೇಶದ ಸಂವಿಧಾನಾತ್ಮಕ ಕೋರ್ಟ್ಗೆ ತಾನು ಸಲಿಂಗಿ ಎಂದು ಘೋಷಿಸಿಕೊಂಡಿರುವ ವ್ಯಕ್ತಿಯೊಬ್ಬರು ನ್ಯಾಯಮೂರ್ತಿಯಾಗುವ ಸಾಧ್ಯತೆ ಇದೀಗ ನಿಚ್ಚಳವಾಗಿದೆ.
ಹಿರಿಯ ವಕೀಲ ಸೌರಭ್ ಕೃಪಾಲ್ ಅವರನ್ನು ದೆಹಲಿ ಹೈಕೋರ್ಟ್ಗೆ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ್ದು, ಕೃಪಾಲ್ ಅವರ ಪ್ರಸ್ತಾವಿತ ಬಡ್ತಿಗೆ ಕೇಂದ್ರ ಸರ್ಕಾರ ಮಾಡಿದ್ದ ಪ್ರಾಥಮಿಕ ಆಕ್ಷೇಪವನ್ನು ಕೊಲಿಜಿಯಂ ತಳ್ಳಿ ಹಾಕಿದೆ.

ನವೆಂಬರ್ 11ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಸೌರಭ್ ಕೃಪಾಲ್ ಅವರನ್ನು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ನೀಡುವ ಪ್ರಸ್ತಾವವನ್ನು ಅನುಮೋದಿಸಲಾಗಿದೆ ಎಂಬ ಕೊಲಿಜಿಯಂ ನಿರ್ಣಯವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
2017ರ ಅಕ್ಟೋಬರ್ನಲ್ಲಿ ದೆಹಲಿ ಹೈಕೋರ್ಟ್ ಕೃಪಾಲ್ ಅವರ ನೇಮಕಕ್ಕೆ ಅವಿರೋಧ ಶಿಫಾರಸು ಮಾಡಿತ್ತು, ಆದಾಗ್ಯೂ ಕೃಪಾಲ್ ಅವರ ಹಿನ್ನೆಲೆಯಲ್ಲಿ ಪರಿಶೀಲಿಸಲು ಗುಪ್ತಚರ ಬ್ಯೂರೋಗೆ ಸೂಚಿಸಲಾಗಿತ್ತು. ಆದರೆ 2018 ಹಾಗೂ 2019ರಲ್ಲಿ ವ್ಯತಿರಿಕ್ತ ವರದಿ ವರದಿ ನೀಡಿದ್ದ ಐಬಿ, ಕೃಪಾಲ್ ಅವರ ಸಂಗಾತಿ ವಿದೇಶಿಯರಾಗಿದ್ದು, ಇದು ಭದ್ರತಾ ಅಪಾಯ ಸಾಧ್ಯತೆಗೆ ಕಾರಣವಾಗಬಹುದು ಎಂದು ಅಭಿಪ್ರಾಯಪಟ್ಟಿತ್ತು.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನೇತೃತ್ವದ ಕೊಲಿಜಿಯಂ 49 ವರ್ಷದ ಕೃಪಾಲ್ ಅವರನ್ನು ಶಿಫಾರಸ್ಸು ಮಾಡಿದೆ. ಕೃಪಾಲ್ ಅವರು ಐತಿಹಾಸಿಕ ನವತೇಜ್ ಸಿಂಗ್ ಜೊಹಾರ್ ಪ್ರಕರಣದಲ್ಲಿ ಮುಂಚೂಣಿ ವಕೀಲರಾಗಿದ್ದು, 2018ರ ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸಲಿಂಗಕಾಮವನ್ನು ಅಪರಾಧಮುಕ್ತಗೊಳಿಸಿತ್ತು.
ನ್ಯಾಯಮೂರ್ತಿ ಉದಯ್ ಯು ಲಲಿತ್, ಎಎಂ ಖನ್ವೀಲ್ಕರ್, ಡಿವೈ ಚಂದ್ರಚೂಡ್ ಹಾಗೂ ಎಲ್ ನಾಗೇಶ್ವರ್ ರಾವ್ ಅವರು ಕೊಲಿಜಿಯಂನಲ್ಲಿದ್ದರು.
ಕೃಪಾಲ್ ಅವರ ಬಡ್ತಿ ಸುದೀರ್ಘ ಕಾಲದಿಂದ ಬಾಕಿ ಇದೆ, ಸಲಿಂಗಕಾಮವನ್ನು ಅಪರಾಧ ಕೃತ್ಯ ಎಂದು ಪರಿಗಣಿಸುವ ಭಾರತೀಯ ದಂಡಸಂಹಿತೆಯ ಸೆಕ್ಷನ್ 377ನ್ನು ರದ್ದುಪಡಿಸಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ನಿಜವಾದ ಗೌರವ ಸಿಕ್ಕಿದೆ ಎಂದು ಅಟಾರ್ನಿ ಜನರಲ್ ಹಾಗೂ ಹಿರಿಯ ವಕೀಲ ಮುಕುಲ್ ಹೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications