ಎಟಿಎಂಗಳಲ್ಲಿ ಶೀಘ್ರ ರೂ.50 ರೂ.20ರೂ. ನೋಟುಗಳು
ಚಿಲ್ಲರೆ ಸಮಸ್ಯೆ ಪರಿಹಾರಕ್ಕಾಗಿ ಇನ್ನು ಮುಂದೆ ಎಟಿಎಂ ಗಳಲ್ಲಿ ರೂ.50 ಹಾಗು ರೂ20 ಮುಖಬೆಲೆಯ ನೋಟುಗಳನ್ನು ಪರಿಚಯಿಸಲು ಭಾರತೀಯ ಸ್ಟೇಟ್ ಬ್ಯಾಂಕ್ ಮುಂದಾಗಿದೆ.
ನವದೆಹಲಿ, ನವೆಂಬರ್, 14: ಚಿಲ್ಲರೆ ಸಮಸ್ಯೆ ಪರಿಹರಿಸಲು ಎಟಿಎಂಗಳ ಮೂಲಕ 50 ಹಾಗೂ 20ರೂ. ಮುಖಬೆಲೆಯ ನೋಟುಗಳನ್ನು ಪರಿಚಯಿಸುವುದಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಘೋಷಿಸಿದೆ.
ನವೆಂಬರ್ 8ರಂದು ಪ್ರಧಾನಿ ಮೋದಿ ಅವರು ರೂ.500 ಹಾಗೂ ರೂ.1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ ನಂತರ ದೇಶದಾದ್ಯಂತ ಚಿಲ್ಲರೆ ಸಮಸ್ಯೆ ವಿಪರೀತವಾಗಿ ತಲೆದೋರಿರುವುದರಿಂದ ಎಸ್ ಬಿ ಐ ಈ ಕ್ರಮ ಕೈಗೊಂಡಿರುವುದಾಗಿ ಹೇಳಿದೆ.[ನಾಳೆಯಿಂದ ಎಟಿಎಂಗಳಲ್ಲಿ 2 ಸಾವಿರ ರೂ. ನೋಟು]

ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್ ಬಿ ಐ ಚೇರ್ಮನ್ ಅರುಂಧತಿ ಭಟ್ಟಾಚಾರ್ಯ ಅವರು "ಚಿಲ್ಲರೆ ಸಮಸ್ಯೆ ಪರಿಹಾರಕ್ಕಾಗಿ ಇನ್ನು ಮುಂದೆ ಎಸ್ ಬಿ ಐ ಎಟಿಂಎಂಗಳಲ್ಲಿ 50 ಹಾಗೂ 20 ರೂ ಮುಖಬೆಲೆಯ ನೋಟುಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ.
ಐದು ದಿನದಲ್ಲಿ 83 ಸಾವಿರ ಕೋಟಿ ಸಂಗ್ರಹ
ನೋಟು ನಿಷೇಧ ಕ್ರಮ ಘೋಷಣೆಯಾದ ನಂತರ ಕೇವಲ ಐದು ದಿನಗಳಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಗೆ ಒಟ್ಟು 83.702 ಕೋಟಿ ರೂ. ಠೇವಣಿ ಸಂಗ್ರಹವಾಗಿದೆ ಎಂದು ಬ್ಯಾಂಕ್ ಘೋಷಿಸಿದೆ.[ಹಳೆ ನೋಟುಗಳ ನಿಷೇಧ ಫೋನ್ ಕೊಳ್ಳುವವರಿಗೆ ವರದಾನ]
ನವೆಂಬರ್ 10ರಿಂದ 14ರ ವರೆಗೆ ಕೇವಲ ನಾಲ್ಕು ದಿನಗಳಲ್ಲಿ 4.146 ಹಳೆ ನಿಷೇಧಿತ ನೋಟುಗಳು ವಿನಿಮಯವಾಗಿವೆ ಎಂದು ಬ್ಯಾಂಕ್ ತಿಳಿಸಿದೆ.
ಸೋಮವಾರ ಗುರುನಾನಕ್ ಜಯಂತಿ ನಿಮಿತ್ತ ಸಾರ್ವತ್ರಿಕ ರಜೆ ಘೋಷಿಸಿದ್ದರಿಂದ ಭಾರತೀಯ ಸ್ಟೇಟ್ ಬ್ಯಂಕ್ ನ ಹಲು ಕಚೇರಿಗಳು ಸೋಮವಾರ ತೆರೆದಿರಲಿಲ್ಲ ಇಲ್ಲದಿದ್ದರೆ ಇನ್ನಷ್ಟು ವಹಿವಾಟು ನಡೆಯುವ ಸಾಧ್ಯತೆ ಇತ್ತು ಎನ್ನಲಾಗಿದೆ.
ನವೆಂಬರ್ 10ರಿಂದ ಒಟ್ಟು 9.342 ಕೋಟಿರೂ. ಹಣವನ್ನು ಗ್ರಾಹಕರು ವಿತ್ ಡ್ರಾ ಮಾಡಿದ್ದಾರೆ. ಕೇವಲ ಎಟಿಎಂ ಗಳ ಮೂಲಕ ಒಟ್ಟು 1,958ಕೋಟಿ ರೂ. ವಿತ್ ಡ್ರಾ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications