ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀದೇವಿ ಸಾವಿನ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

|
Google Oneindia Kannada News

ನವದೆಹಲಿ, ಮೇ 11: ಬಾಲಿವುಡ್ ನಟಿ ಶ್ರೀದೇವಿ ಅವರ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಯಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಫೆಬ್ರವರಿ 24 ರಂದು ದುಬೈನ ಹೊಟೆಲ್ ವೊಂದರಲ್ಲಿ ಸಾವಿಗೀಡಾದ ಶ್ರೀದೇವಿ ಅವರ ಹತ್ಯೆ ಅನುಮಾನಾಸ್ಪದವಾಗಿದ್ದು, ಈ ಕುರಿತು ತನಿಖೆ ನಡೆಯಬೇಕೆಂದು ಸುನಿಲ್ ಸಿಂಗ್ ಎಂಬುವವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಬಾಲಿವುಡ್ ನಟಿ ಶ್ರೀದೇವಿ ಸಾವು : ಉತ್ತರ ಸಿಕ್ಕದ 5 ಪ್ರಶ್ನೆಗಳುಬಾಲಿವುಡ್ ನಟಿ ಶ್ರೀದೇವಿ ಸಾವು : ಉತ್ತರ ಸಿಕ್ಕದ 5 ಪ್ರಶ್ನೆಗಳು

ಈ ಕುರಿತು ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠ, ಅರ್ಜಿ ಯಾವುದೇ ರೀತಿಯಲ್ಲೂ ಸಮರ್ಪಕವಲ್ಲದ ಕಾರಣ ಅದನ್ನು ವಜಾಗೊಳಿಸಿದೆ.

SC dismisses petition seeking probe into Sridevis death

ಶ್ರೀದೇವಿ ಹೆಸರಿನಲ್ಲಿದ್ದ 240 ಕೋಟಿ ರೂ. ವಿಮೆಯ ಕುರಿತು ಉಲ್ಲೇಖಿಸಿರುವ ಸಿಂಗ್ ಅವರ ಸಾವು ಸಹಜವಾದ್ದಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದರು.

ಪತ್ನಿ ಶ್ರೀದೇವಿ ಬಗ್ಗೆ ಭಾವುಕರಾಗಿ ಪತ್ರ ಬರೆದ ಬೋನಿಕಪೂರ್ಪತ್ನಿ ಶ್ರೀದೇವಿ ಬಗ್ಗೆ ಭಾವುಕರಾಗಿ ಪತ್ರ ಬರೆದ ಬೋನಿಕಪೂರ್

ದುಬೈಯ ಹೊಟೇಲ್ ವೊಂದರಲ್ಲಿ ತಂಗಿದ್ದ 54 ವರ್ಷದ ಶ್ರೀದೇವಿ ಬಾತ್ ಟಬ್ಬಿನಲ್ಲಿ ಮುಳುಗಿ ಸಾವಿಗೀಡಾಗಿದ್ದರು. ಅವರು ಆಕಸ್ಮಿಕವಾಗಿ ಮುಳುಗಿ ಸಾವಿಗೀಡಾಗಿದ್ದರೆಂದು ಮರಣೋತ್ತರ ಪರೀಕ್ಷೆಯ ವರದಿಗಳೂ ಹೇಳಿದ್ದವು.

English summary
Supreme Court on Friday dismissed the petition seeking a probe into Bollywood actress Sridevi's death.A three-judge bench of the apex court, headed by Chief Justice of India (CJI) Dipak Misra, dismissed the petition filed by Sunil Singh, the petitioner in the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X