ಇವಿಎಂ ಜೊತೆ ಶೇ.100 ವಿವಿಪ್ಯಾಟ್ ತಾಳೆ, ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್
ನವದೆಹಲಿ, ಮೇ 21: ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶದ ನಂತರ 100 ಪ್ರತಿಶತ ವಿವಿಪ್ಯಾಟ್ ಗಳನ್ನು ಇವಿಎಂ ಜೊತೆ ತಾಳೆ ಮಾಡಬೇಕು ಎಂದು ತಂತ್ರಜ್ಞರ ತಂಡವೊಂದು ಹೂಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
"ಇವಿಎಂ(ವಿದ್ಯುನ್ಮಾನ ಮತಯಂತ್ರ) ಮತ್ತು ವಿವಿಪ್ಯಾಟ್ (ಮತ ಖಾತ್ರಿ ಯಂತ್ರ)ಗಳನ್ನು ಶೇ.100 ರಷ್ಟು ತಾಳೆ ಮಾಡುವ ಅಗತ್ಯವಿಲ್ಲ. ಜನರ ಆಯ್ಕೆಯನ್ನು ಅನುಮಾನಿಸುವುದಕ್ಕೆ ಸಾಧ್ಯವಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶದಲ್ಲಿ ಮತ್ತೊಮ್ಮೆ ಎನ್ ಡಿಎ ಸರ್ಕಾರವೇ ಅಧಿಕಾರಕ್ಕೆ ಬರುವುದು ಖಚಿತವಾದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳೂ ಇವಿಎಂ ಮತ್ತು ವಿವಿಪ್ಯಾಟ್ ಬಗ್ಗೆ ಕ್ಯಾತೆ ತೆಗೆದಿವೆ. ಶೇ.50 ರಷ್ಟು ವಿವಿಪ್ಯಾಟ್ ಸ್ಲಿಪ್ ಗಳನ್ನು ಲೆಕ್ಕ ಮಾಡುವುದಕ್ಕೆ ಅನುಮತಿ ನೀಡಬೇಕು ಎಂದು ವಿಪಕ್ಷಗಳು ಮಾಡಿದ್ದ ಮನವಿಯನ್ನೂ ಚುನಾವಣಾ ಆಯೋಗ ತಿರಸ್ಕರಿಸಿತ್ತು. ಈಗಾಗಲೇ ಶೇ.5 ರಷ್ಟು ವಿವಿಪ್ಯಾಟ್ ಗಳನ್ನು ಇವಿಎಂ ಜೊತೆ ತಾಳೆ ಮಾಡಲಾಗುತ್ತಿದ್ದು, ಅದರಿಂದಲೇ ಫಲಿತಾಂಶ ಸುಮಾರು ಒಂದು ದಿನ ತಡವಾಗಿ ಬರಬಹುದು ಎನ್ನಲಾಗಿದೆ. ಶೇ.50 ರಷ್ಟನ್ನು ಲೆಕ್ಕ ಮಾಡುತ್ತ ಕೂತರೆ ಫಲಿತಾಂಶ ಪ್ರಕಟವಾಗುವುದಕ್ಕೆ ಹಲವು ದಿನೇ ಬೇಕಾಗಬಹುದು ಎಂದು ಚುನಾವಣಾ ಆಯೋಗ ಹೇಳಿದೆ. ಅದೂ ಅಲ್ಲದೆ ಇವಿಎಂ ಕಾರ್ಯದಕ್ಷತೆಯ ಬಗ್ಗೆ ಯಾವುದೇ ಅನುಮಾನವಿಲ್ಲದ ಕಾರಣ ವಿವಿಪ್ಯಾಟ್ ತಾಳೆ ಮಾಡುವ ಅಗತ್ಯವಿಲ್ಲ ಎಂದು ಅದು ಹೇಳಿದೆ.

ಲೋಕಸಭೆ ಚುನಾವಣೆ ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ನಡೆದಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications