ಜಯಲಲಿತಾಗೆ ಜಾಮೀನು ಸಿಕ್ಕಿದ್ದೇಕೆ? ಆದೇಶ ಪ್ರತಿ ಓದಿ
ನವದೆಹಲಿ, ಅ.17: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಕ್ಕೆ ಅನುಭವಿಸಿದ ಜೈಲು ಶಿಕ್ಷೆ ಸದ್ಯಕ್ಕೆ ಕೊನೆಗೊಳ್ಳಲಿದ್ದು, ಪರಪ್ಪನ ಅಗ್ರಹಾರರಿಂದ ಹೊರ ಬೀಳುವ ಕ್ಷಣ ಎದುರಾಗಿದೆ.. ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಪೀಠ ಜಯಲಲಿತಾ ಹಾಗೂ ಮೂವರಿಗೆ ಜಾಮೀನು ನೀಡಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯ ನೀಡಿದ 4 ವರ್ಷಗಳ ಜೈಲುಶಿಕ್ಷೆ ಆದೇಶವನ್ನೂ ಸುಪ್ರೀಂಕೋರ್ಟ್ ಅಮಾನತಿನಲ್ಲಿಟ್ಟಿದೆ.
ಜಯಲಲಿತಾ ಅವರ ಪರ ಫಾಲಿ ನಾರಿಮನ್ ಅವರು ಮಂಡಿಸಿದ ವಾದವನ್ನು ಪುರಸ್ಕರಿಸಿದ ನ್ಯಾ. ದತ್ತು, ಮದನ್ ಬಿ ಲಾಕೂರ್ ಹಾಗೂ ನ್ಯಾ ಎ.ಕೆ ಶಿಕ್ರಿಹಾದ್ ಅವರಿದ್ದ ನ್ಯಾಯಪೀಠ 21 ದಿನಗಳ ಜೈಲು ವಾಸದ ನಂತರ ಬಿಡುಗಡೆ ಭಾಗ್ಯ ನೀಡಿದ್ದಾರೆ. ಜಯಾ ಅವರ ಬಿಡುಗಡೆಗೆ ಅನಾರೋಗ್ಯ ಮುಖ್ಯ ಕಾರಣ ಎನ್ನಲಾಗಿದೆ. [ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಟೈಮ್ ಲೈನ್]
ನನ್ನ ಕಕ್ಷಿದಾರರಾದ ಜಯಾ ಅವರು ಗೃಹ ಬಂಧನದಲ್ಲಿರಲು ಸಿದ್ದರಿದ್ದಾರೆ ಎಂದು ಜಯಾ ಪರ ಫಾಲಿ ನಾರಿಮನ್ ವಾದಿಸುತ್ತಿದ್ದಂತೆ ನ್ಯಾ. ದತ್ತು ಅವರು ಇದೇನು ಈ ರೀತಿ ವಾದ ಮಂಡಿಸುತ್ತಿದ್ದೀರಾ? ಎಂದು ಗರಂ ಆಗಿದ್ದಾರೆ. ಸುಬ್ರಮಣ್ಯಂ ಸ್ವಾಮಿ ಅವರು ನ್ಯಾ. ಮೈಕಲ್ ಕುನ್ಹಾ ಅವರ ಹೆಸರು ಪ್ರಸ್ತಾಪಿಸಿ ಅವರು ಸೆ.27ರಂದು ಜಯಾ ಅವರಿಗೆ ಜೈಲು ಶಿಕ್ಷೆ ವಿಧಿಸಿದ್ದಕ್ಕೆ ಎಐಎಡಿಎಂಕೆ ಕಾರ್ಯಕರ್ತರು ಕೋಪಗೊಂಡು ಕನ್ನಡಿಗರು, ಹೈಕೋರ್ಟ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ವಾದಿಸಿದ್ದಾರೆ. ಈ ಸಮಯದಲ್ಲಿ ನಾನು ಕೂಡಾ ಕನ್ನಡಿಗನೇ ಎಂದು ದತ್ತು ಎಚ್ಚರಿಸಿದ್ದಾರೆ. [ಜಯಲಲಿತಾಗೆ ಜಾಮೀನು ಮಂಜೂರು]

ಮುಖ್ಯ ನ್ಯಾಯಮೂರ್ತಿ ದತ್ತು ಅವರಿದ್ದ ಪೀಠ
ಜಯಲಲಿತಾ ಅವರ ಪರ ಫಾಲಿ ನಾರಿಮನ್ ಅವರು ಮಂಡಿಸಿದ ವಾದವನ್ನು ಪುರಸ್ಕರಿಸಿದ ನ್ಯಾ. ದತ್ತು, ಮದನ್ ಬಿ ಲಾಕೂರ್ ಹಾಗೂ ನ್ಯಾ ಎ.ಕೆ ಶಿಕ್ರಿಹಾದ್ ಅವರಿದ್ದ ನ್ಯಾಯಪೀಠ 21 ದಿನಗಳ ಜೈಲು ವಾಸದ ನಂತರ ಬಿಡುಗಡೆ ಭಾಗ್ಯ ನೀಡಿದ್ದಾರೆ. ಜಯಾ ಅವರ ಬಿಡುಗಡೆಗೆ ಅನಾರೋಗ್ಯ ಮುಖ್ಯ ಕಾರಣ ಎನ್ನಲಾಗಿದೆ. ಜೊತೆಗೆ ಸಾಕಷ್ಟು ಷರತ್ತುಗಳನ್ನು ವಿಧಿಸಲಾಗಿದ್ದು, ಷರತ್ತು ಮೀರಿದರೆ ಜಾಮೀನು ರದ್ದಾಗಲಿದೆ

ಗೃಹಬಂಧನದಲ್ಲಿರಲು ರೆಡಿ ಎಂದ ನಾರಿಮನ್
ನನ್ನ ಕಕ್ಷಿದಾರರಾದ ಜಯಾ ಅವರು ಗೃಹ ಬಂಧನದಲ್ಲಿರಲು ಸಿದ್ದರಿದ್ದಾರೆ ಎಂದು ಜಯಾ ಪರ ಫಾಲಿ ನಾರಿಮನ್ ವಾದಿಸುತ್ತಿದ್ದಂತೆ ನ್ಯಾ. ದತ್ತು ಅವರು ಇದೇನು ಈ ರೀತಿ ವಾದ ಮಂಡಿಸುತ್ತಿದ್ದೀರಾ? ಎಂದು ಗರಂ ಆಗಿದ್ದಾರೆ.

ಸ್ವಾಮಿ ದೂರುದಾರರಾಗಲು ಒಪ್ಪಿಗೆ
ಸುಬ್ರಮಣ್ಯಂ ಸ್ವಾಮಿ ಅವರನ್ನು ದೂರುದಾರರಾಗಲು ಸುಪ್ರೀಂಕೋರ್ಟ್ ನ್ಯಾಯಪೀಠ ಒಪ್ಪಿಗೆ ಸೂಚಿಸಿತು. ನಂತರ ಸ್ವಾಮಿ ಅವರು ವಾದ ಮಂಡಿಸಿ ನ್ಯಾ. ಮೈಕಲ್ ಕುನ್ಹಾ ಅವರ ಹೆಸರು ಪ್ರಸ್ತಾಪಿಸಿ ಅವರು ಸೆ.27ರಂದು ಜಯಾ ಅವರಿಗೆ ಜೈಲು ಶಿಕ್ಷೆ ವಿಧಿಸಿದ್ದಕ್ಕೆ ಎಐಎಡಿಎಂಕೆ ಕಾರ್ಯಕರ್ತರು ಕೋಪಗೊಂಡು ಕನ್ನಡಿಗರು, ಹೈಕೋರ್ಟ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ವಾದಿಸಿದ್ದಾರೆ. ಈ ಸಮಯದಲ್ಲಿ ನಾನು ಕೂಡಾ ಕನ್ನಡಿಗನೇ ಎಂದು ದತ್ತು ಎಚ್ಚರಿಸಿದರು. [ಜಯಲಲಿತಾಗೆ ಜಾಮೀನು ಮಂಜೂರು]

ಯಾವಾಗ ಜೈಲಿನಿಂದ ಹೊರಕ್ಕೆಬರಬಹುದು?
ಆಲ್ ಇಂಡಿಯಾ ಅಣ್ಣಾ ಡಿಎಂಕೆ ಪಕ್ಷ ತನ್ನ 43ನೇ ಸ್ಥಾಪನಾ ದಿನಾಚರಣೆಯನ್ನು ಶುಕ್ರವಾರ ಆಚರಿಸಿಕೊಳ್ಳುತ್ತಿದೆ. ಸುಪ್ರೀಂಕೋರ್ಟ್ ತೀರ್ಪಿನ ಸಾರಾಂಶವುಳ್ಳ ಆದೇಶ ಪ್ರತಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ್ಯಾ. ಮೈಕಲ್ ಕುನ್ಹಾ ಕೈ ಸೇರಬೇಕು. ಅವರು ಒಪ್ಪಿಗೆ ಸೂಚಿಸಿದ ಮೇಲೆ ಪ್ರತಿಯನ್ನು ಜಯಾ ಪರ ವಕೀಲರು ಜೈಲರ್ ಜಯಸಿಂಹ ಕೈಗೆ ನೀಡುತ್ತಾರೆ ನಂತರ ಜಯಲಲಿತಾ, ಇಳವರಸಿ, ಶಶಿಕಲಾ, ಸುಧಾಕರನ್ ಅವರ ಬಿಡುಗಡೆಯಾಗಲಿದೆ. ಬಹುಶಃ ನಾಳೆ ಮಧ್ಯಾಹ್ನದವರೆಗೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಸದ್ಯಕ್ಕೆ ಆದೇಶದ ಪ್ರತಿ ಓದಿಕೊಳ್ಳಿ
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications