ಜಯಲಲಿತಾಗೆ ಜಾಮೀನು ಸಿಕ್ಕಿದ್ದೇಕೆ? ಆದೇಶ ಪ್ರತಿ ಓದಿ
ನವದೆಹಲಿ, ಅ.17: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಕ್ಕೆ ಅನುಭವಿಸಿದ ಜೈಲು ಶಿಕ್ಷೆ ಸದ್ಯಕ್ಕೆ ಕೊನೆಗೊಳ್ಳಲಿದ್ದು, ಪರಪ್ಪನ ಅಗ್ರಹಾರರಿಂದ ಹೊರ ಬೀಳುವ ಕ್ಷಣ ಎದುರಾಗಿದೆ.. ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಪೀಠ ಜಯಲಲಿತಾ ಹಾಗೂ ಮೂವರಿಗೆ ಜಾಮೀನು ನೀಡಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯ ನೀಡಿದ 4 ವರ್ಷಗಳ ಜೈಲುಶಿಕ್ಷೆ ಆದೇಶವನ್ನೂ ಸುಪ್ರೀಂಕೋರ್ಟ್ ಅಮಾನತಿನಲ್ಲಿಟ್ಟಿದೆ.
ಜಯಲಲಿತಾ ಅವರ ಪರ ಫಾಲಿ ನಾರಿಮನ್ ಅವರು ಮಂಡಿಸಿದ ವಾದವನ್ನು ಪುರಸ್ಕರಿಸಿದ ನ್ಯಾ. ದತ್ತು, ಮದನ್ ಬಿ ಲಾಕೂರ್ ಹಾಗೂ ನ್ಯಾ ಎ.ಕೆ ಶಿಕ್ರಿಹಾದ್ ಅವರಿದ್ದ ನ್ಯಾಯಪೀಠ 21 ದಿನಗಳ ಜೈಲು ವಾಸದ ನಂತರ ಬಿಡುಗಡೆ ಭಾಗ್ಯ ನೀಡಿದ್ದಾರೆ. ಜಯಾ ಅವರ ಬಿಡುಗಡೆಗೆ ಅನಾರೋಗ್ಯ ಮುಖ್ಯ ಕಾರಣ ಎನ್ನಲಾಗಿದೆ. [ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಟೈಮ್ ಲೈನ್]
ನನ್ನ ಕಕ್ಷಿದಾರರಾದ ಜಯಾ ಅವರು ಗೃಹ ಬಂಧನದಲ್ಲಿರಲು ಸಿದ್ದರಿದ್ದಾರೆ ಎಂದು ಜಯಾ ಪರ ಫಾಲಿ ನಾರಿಮನ್ ವಾದಿಸುತ್ತಿದ್ದಂತೆ ನ್ಯಾ. ದತ್ತು ಅವರು ಇದೇನು ಈ ರೀತಿ ವಾದ ಮಂಡಿಸುತ್ತಿದ್ದೀರಾ? ಎಂದು ಗರಂ ಆಗಿದ್ದಾರೆ. ಸುಬ್ರಮಣ್ಯಂ ಸ್ವಾಮಿ ಅವರು ನ್ಯಾ. ಮೈಕಲ್ ಕುನ್ಹಾ ಅವರ ಹೆಸರು ಪ್ರಸ್ತಾಪಿಸಿ ಅವರು ಸೆ.27ರಂದು ಜಯಾ ಅವರಿಗೆ ಜೈಲು ಶಿಕ್ಷೆ ವಿಧಿಸಿದ್ದಕ್ಕೆ ಎಐಎಡಿಎಂಕೆ ಕಾರ್ಯಕರ್ತರು ಕೋಪಗೊಂಡು ಕನ್ನಡಿಗರು, ಹೈಕೋರ್ಟ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ವಾದಿಸಿದ್ದಾರೆ. ಈ ಸಮಯದಲ್ಲಿ ನಾನು ಕೂಡಾ ಕನ್ನಡಿಗನೇ ಎಂದು ದತ್ತು ಎಚ್ಚರಿಸಿದ್ದಾರೆ. [ಜಯಲಲಿತಾಗೆ ಜಾಮೀನು ಮಂಜೂರು]

ಮುಖ್ಯ ನ್ಯಾಯಮೂರ್ತಿ ದತ್ತು ಅವರಿದ್ದ ಪೀಠ
ಜಯಲಲಿತಾ ಅವರ ಪರ ಫಾಲಿ ನಾರಿಮನ್ ಅವರು ಮಂಡಿಸಿದ ವಾದವನ್ನು ಪುರಸ್ಕರಿಸಿದ ನ್ಯಾ. ದತ್ತು, ಮದನ್ ಬಿ ಲಾಕೂರ್ ಹಾಗೂ ನ್ಯಾ ಎ.ಕೆ ಶಿಕ್ರಿಹಾದ್ ಅವರಿದ್ದ ನ್ಯಾಯಪೀಠ 21 ದಿನಗಳ ಜೈಲು ವಾಸದ ನಂತರ ಬಿಡುಗಡೆ ಭಾಗ್ಯ ನೀಡಿದ್ದಾರೆ. ಜಯಾ ಅವರ ಬಿಡುಗಡೆಗೆ ಅನಾರೋಗ್ಯ ಮುಖ್ಯ ಕಾರಣ ಎನ್ನಲಾಗಿದೆ. ಜೊತೆಗೆ ಸಾಕಷ್ಟು ಷರತ್ತುಗಳನ್ನು ವಿಧಿಸಲಾಗಿದ್ದು, ಷರತ್ತು ಮೀರಿದರೆ ಜಾಮೀನು ರದ್ದಾಗಲಿದೆ

ಗೃಹಬಂಧನದಲ್ಲಿರಲು ರೆಡಿ ಎಂದ ನಾರಿಮನ್
ನನ್ನ ಕಕ್ಷಿದಾರರಾದ ಜಯಾ ಅವರು ಗೃಹ ಬಂಧನದಲ್ಲಿರಲು ಸಿದ್ದರಿದ್ದಾರೆ ಎಂದು ಜಯಾ ಪರ ಫಾಲಿ ನಾರಿಮನ್ ವಾದಿಸುತ್ತಿದ್ದಂತೆ ನ್ಯಾ. ದತ್ತು ಅವರು ಇದೇನು ಈ ರೀತಿ ವಾದ ಮಂಡಿಸುತ್ತಿದ್ದೀರಾ? ಎಂದು ಗರಂ ಆಗಿದ್ದಾರೆ.

ಸ್ವಾಮಿ ದೂರುದಾರರಾಗಲು ಒಪ್ಪಿಗೆ
ಸುಬ್ರಮಣ್ಯಂ ಸ್ವಾಮಿ ಅವರನ್ನು ದೂರುದಾರರಾಗಲು ಸುಪ್ರೀಂಕೋರ್ಟ್ ನ್ಯಾಯಪೀಠ ಒಪ್ಪಿಗೆ ಸೂಚಿಸಿತು. ನಂತರ ಸ್ವಾಮಿ ಅವರು ವಾದ ಮಂಡಿಸಿ ನ್ಯಾ. ಮೈಕಲ್ ಕುನ್ಹಾ ಅವರ ಹೆಸರು ಪ್ರಸ್ತಾಪಿಸಿ ಅವರು ಸೆ.27ರಂದು ಜಯಾ ಅವರಿಗೆ ಜೈಲು ಶಿಕ್ಷೆ ವಿಧಿಸಿದ್ದಕ್ಕೆ ಎಐಎಡಿಎಂಕೆ ಕಾರ್ಯಕರ್ತರು ಕೋಪಗೊಂಡು ಕನ್ನಡಿಗರು, ಹೈಕೋರ್ಟ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ವಾದಿಸಿದ್ದಾರೆ. ಈ ಸಮಯದಲ್ಲಿ ನಾನು ಕೂಡಾ ಕನ್ನಡಿಗನೇ ಎಂದು ದತ್ತು ಎಚ್ಚರಿಸಿದರು. [ಜಯಲಲಿತಾಗೆ ಜಾಮೀನು ಮಂಜೂರು]

ಯಾವಾಗ ಜೈಲಿನಿಂದ ಹೊರಕ್ಕೆಬರಬಹುದು?
ಆಲ್ ಇಂಡಿಯಾ ಅಣ್ಣಾ ಡಿಎಂಕೆ ಪಕ್ಷ ತನ್ನ 43ನೇ ಸ್ಥಾಪನಾ ದಿನಾಚರಣೆಯನ್ನು ಶುಕ್ರವಾರ ಆಚರಿಸಿಕೊಳ್ಳುತ್ತಿದೆ. ಸುಪ್ರೀಂಕೋರ್ಟ್ ತೀರ್ಪಿನ ಸಾರಾಂಶವುಳ್ಳ ಆದೇಶ ಪ್ರತಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ್ಯಾ. ಮೈಕಲ್ ಕುನ್ಹಾ ಕೈ ಸೇರಬೇಕು. ಅವರು ಒಪ್ಪಿಗೆ ಸೂಚಿಸಿದ ಮೇಲೆ ಪ್ರತಿಯನ್ನು ಜಯಾ ಪರ ವಕೀಲರು ಜೈಲರ್ ಜಯಸಿಂಹ ಕೈಗೆ ನೀಡುತ್ತಾರೆ ನಂತರ ಜಯಲಲಿತಾ, ಇಳವರಸಿ, ಶಶಿಕಲಾ, ಸುಧಾಕರನ್ ಅವರ ಬಿಡುಗಡೆಯಾಗಲಿದೆ. ಬಹುಶಃ ನಾಳೆ ಮಧ್ಯಾಹ್ನದವರೆಗೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಸದ್ಯಕ್ಕೆ ಆದೇಶದ ಪ್ರತಿ ಓದಿಕೊಳ್ಳಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications