ಮಾನನಷ್ಟ ಮೊಕದ್ದಮೆ : ಸ್ಮೃತಿ ಇರಾನಿಗೆ ಸುಪ್ರೀಂಕೋರ್ಟಿನಿಂದ ನೋಟಿಸ್
ನವದೆಹಲಿ, ಏಪ್ರಿಲ್ 22: ಕಿರುತೆರೆಯ ಮಾಜಿ ಸ್ಟಾರ್, ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಹಾಗೂ ಕಾಂಗ್ರೆಸ್ ಕಾರ್ಯದರ್ಶಿ ಸಂಜಯ್ ನಿರುಪಮ್ ನಡುವಿನ ಮಾನನಷ್ಟ ಮೊಕದ್ದಮೆ ಪ್ರಕರಣ ಮತ್ತೊಮ್ಮೆ ಸುದ್ದಿಯಲ್ಲಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸ್ಮೃತಿ ಅವರ ಹಿನ್ನೆಲೆ ಬಗ್ಗೆ ಹೇಳ ಹೊರಟ ಸಂಜಯ್ ಅವರು "Till some time ago you were dancing on TV screens and now you have become a psephologist." ಎಂದು ಹೇಳಿ ನಗಾಡಿದ್ದರು.
ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವುದನ್ನು ಸಹಿಸದೆ ಈ ರೀತಿ ಹೇಳಿಕೆ ನೀಡುವ ಸದಸ್ಯರನ್ನು ಕಾಂಗ್ರೆಸ್ ನಿಂದ ಉಚ್ಚಾಟಿಸಬೇಕು ಎಂದು ಬಿಜೆಪಿ ಅಗ್ರಹಿಸಿತ್ತು. ಕಾಂಗ್ರೆಸ್ ನಲ್ಲೂ ನಿರುಪಮ್ ಅವರ ಹೇಳಿಕೆ ವಿರುದ್ಧ ಕೂಗು ಎದ್ದಿದೆ. ಕಾಂಗ್ರೆಸ್ ವಕ್ತಾರೆ ರೇಣುಕಾ ಚೌಧುರಿ ಮಾತನಾಡಿ, ಸಂಜಯ್ ಅವರು ಈ ರೀತಿ ಹೇಳಿಕೆ ನೀಡಿರುವುದು ದುರದೃಷ್ಟಕರ. ಈ ರೀತಿ ಮನಸ್ಥಿತಿ ಅನೇಕ ಪುರುಷರಲ್ಲಿ ಇದೆ ಇದರ ವಿರುದ್ಧ ಹೋರಾಟ ಅಗತ್ಯ ಎಂದಿದ್ದರು.

ಮಾಜಿ ಸಂಸದ ಸಂಜಯ್ ನಿರುಪಮ್ ವಿರುದ್ಧ ಸ್ಮೃತಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳಹಂತದ ನ್ಯಾಯಾಲಯವು ಸಂಜಯ್ ನಿರುಪಮ್ ಗೆ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ವಜಾಗೊಳಿಸುವಂತೆ ಕೋರಿ ಸಂಜಯ್ ಅವರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು(ಏಪ್ರಿಲ್ 22) ಸ್ಮೃತಿ ಇರಾನಿಗೆ ನೋಟಿಸ್ ನೀಡಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಅವರಿರುವ ನ್ಯಾಯಪೀಠವು, ಈ ಪ್ರಕರಣದ ಬಗ್ಗೆ ಸ್ಮೃತಿ ಅವರಿಂದ ಸ್ಪಷ್ಟನೆ ಕೇಳಿದೆ.ಸಂಜಯ್ ನಿರುಪಮ್ ಅವರು ಸ್ಮೃತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, ಈ ಪ್ರಕರಣದಲ್ಲಿ ಸ್ಮೃತಿ ವಿರುದ್ಧ ಜಾರಿಗೊಂಡಿದ್ದ ಸಮನ್ಸ್ ಅನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications