ಯೋಧರ ಬಗ್ಗೆ ಸುಳ್ಳು ಆರೋಪ: ಶೆಹ್ಲಾ ರಶೀದ್ ವಿರುದ್ಧ ಕ್ರಿಮಿನಲ್ ಕೇಸ್
ಶ್ರೀನಗರ, ಆಗಸ್ಟ್ 19: ಜಮ್ಮು ಕಾಶ್ಮೀರದಲ್ಲಿ ಯೋಧರು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿರುವ ಶೆಹ್ಲಾ ರಶೀದ್ ವಿರುದ್ಧ ಸುಪ್ರೀಂಕೋರ್ಟ್ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಕ್ರಿಮಿನಲ್ ದೂರು ದಾಖಲಿಸಿದ್ದಾರೆ.
ಜಮ್ಮು ಕಾಶ್ಮೀರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಗಲಾಟೆ ನಡೆಯುತ್ತಿದೆ ಎಂದು ನಿಮಗೆ ಯಾರು ಹೇಳಿದ್ದು ಎಂದು ಭಾರತೀಯ ಯೋಧರು ಶೆಹ್ಲಾ ರಶೀದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಸಾರ್ವಜನಿಕರಿಗೆ ಹಿಂಸೆ ನೀಡಲಾಗುತ್ತಿದೆ ಎಂದು ಶೆಹ್ಲಾ ರಶೀದ್ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸೇನೆ ಹೇಳಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಭಾರತ ರದ್ದುಗೊಳಿಸಿದ ಬೆನ್ನಲ್ಲೇ ಜಮ್ಮು ಕಾಶ್ಮೀರದ ಪರಿಸ್ಥಿತಿ ಕುರಿತು ಸಾಕಷ್ಟು ತಪ್ಪು ಮಾಹಿತಿಗಳು ಲಭ್ಯವಾಗುತ್ತಿದೆ.

ಕೆಲವೇ ದಿನಗಳ ಹಿಂದೆ ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ 10 ಸಾವಿರಕ್ಕೂ ಹೆಚ್ಚು ಮಂದಿಯಿಂದ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ಮತ್ತೆ ಅಂಥದ್ದೇ ತಪ್ಪು ಮಾಹಿತಿ ನೀಡಿ ಜನರನ್ನು ಹೆದರಿಸುವ ಪ್ರಯತ್ನವಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.
ಸುಪ್ರೀಂಕೋರ್ಟ್ ವಕೀಲ ಅಲಖ್ ಅಲೋಕ್ ಶ್ರೀವಸ್ತವ್ ಅವರು ಶೆಹ್ಲಾ ವಿರುದ್ಧ ದೂರು ದಾಖಲಿಸಿದ್ದಾರೆ.
ಶಾಪಿಯನ್ನಲ್ಲಿ ಯೋಧರು ಒಂದು ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಶೆಹ್ಲಾ ಅವರು ಹೇಳಿರುವ ಪ್ರಕಾರ ಜಮ್ಮು ಕಾಶ್ಮೀರದಲ್ಲಿ ಪೆಟ್ರೋಲ್, ಡೀಸೆಲ್ ದೊರೆಯುತ್ತಿದೆ. ಸಾರ್ವಜನಿಕರು ನೆಮ್ಮದಿಯಿಂದ ಎಂದಿನಂತೆ ಓಡಾಡಬಹುದಾಗಿದೆ ಎಂದು ಹೇಳಿ ಜನರ ದಾರಿ ತಪ್ಪಿಸಲು ಪ್ರಯತ್ನ ಪಟ್ಟಿದ್ದರು.
ಜಮ್ಮು ಮತ್ತು ಕಾಶ್ಮೀರದ ಪೊಲೀಸರಿಗೆ ಕಾನೂನು ಸುವ್ಯವಸ್ಥೆಯ ಮೇಲೆ ಯಾವುದೇ ಅಧಿಕಾರ ಇಲ್ಲ ಎಂದು ಜನರು ಹೇಳುತ್ತಿದ್ದಾರೆ. ಅವರನ್ನು ಅಧಿಕಾರಹೀನರನ್ನಾಗಿ ಮಾಡಲಾಗಿದೆ.
ಎಲ್ಲವೂ ಸಂಸದೀಯ ಶಕ್ತಿಗಳ ಕೈಯಲ್ಲಿವೆ. ಸಿಆರ್ಪಿಎಫ್ ಸಿಬ್ಬಂದಿಯೊಬ್ಬರ ದೂರಿನ ಮೇರೆಗೆ ಒಬ್ಬ ಸ್ಟೇಷನ್ ಹೌಸ್ ಮಾಸ್ಟರ್ (ಎಸ್ಎಚ್ಓ) ಅವರನ್ನು ವರ್ಗಾವಣೆ ಮಾಡಲಾಗಿದೆ. ಎಸ್ಎಚ್ಓಗಳು ಲಾಠಿಗಳನ್ನು ಹಿಡಿದು ಓಡಾಡುತ್ತಿದ್ದಾರೆ. ಅವರ ಬಳಿ ಸರ್ವೀಸ್ ರಿವಾಲ್ವರ್ಗಳು ಕಾಣಿಸುತ್ತಿಲ್ಲ' ಎಂದು ಹೇಳಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications