ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಂಗ್ ದಂಗೆ ಅಪರಾಧಿ ಸಜ್ಜನ್‌ಗೆ ಜಾಮೀನು, ಸಿಬಿಐಗೆ ಸುಪ್ರೀಂ ನೋಟಿಸ್

|
Google Oneindia Kannada News

ನವದೆಹಲಿ, ಆಗಸ್ಟ್ 25: ಸಿಖ್ ಹತ್ಯಾಕಾಂಡ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ಸಿನ ಮಾಜಿ ಮುಖಂಡ ಸಜ್ಜನ್ ಕುಮಾರ್ (77) ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪದೇ ಪದೇ ತಿರಸ್ಕರಿಸಿದೆ. ವೈದ್ಯಕೀಯ ಕಾರಣಕ್ಕೆ ಜಾಮೀನು ಅರ್ಜಿ ಕೋರಲಾಗಿದೆ. ಸಜ್ಜನ್ ಕುಮಾರ್ ಅವರು ಆಸ್ಪತ್ರೆಯಲ್ಲಿ ದಾಖಲಾಗುವ ಅಗತ್ಯವಿಲ್ಲ ಎಂದು ವರದಿ ಬಂದಿದೆ ಹೀಗಾಗಿ ಜಾಮೀನು ನೀಡುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

2018ರ ಡಿಸೆಂಬರ್ ತಿಂಗಳಿನಿಂದ ಜೈಲಿನಲ್ಲಿರುವ ಸಜ್ಜನ್ ಕುಮಾರ್ ಅವರು ಸುಮಾರು 8 ರಿಂದ 10 ಕೆ.ಜಿ ತೂಕ ಕಳೆದುಕೊಂಡಿದ್ದಾರೆ, ಮಧ್ಯಂತರ ಜಾಮೀನು ನೀಡಬೇಕು ಎಂದು ಸಜ್ಜನ್ ಕುಮಾರ್ ಪರ ವಕೀಲ ವಿಕಾಸ್ ಸಿಂಗ್ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಕೇಂದ್ರ ತನಿಖಾ ತಂಡ ಸಿಬಿಐಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾ. ಹೃಷಿಕೇಶ್ ರಾಯ್ ಅವರಿದ್ದ ನ್ಯಾಯಪೀಠವು ಸಿಬಿಐಗೆ ಈ ಬಗ್ಗೆ ಪ್ರತಿಕ್ರಿಯಿಸಲು ಸೂಚಿಸಿದೆ.

ಸಿಖ್ ಹತ್ಯಾಕಾಂಡ : ಒಬ್ಬರಿಗೆ ಗಲ್ಲು, ಮತ್ತೊಬ್ಬರಿಗೆ ಜೀವಾವಧಿ ಶಿಕ್ಷೆಸಿಖ್ ಹತ್ಯಾಕಾಂಡ : ಒಬ್ಬರಿಗೆ ಗಲ್ಲು, ಮತ್ತೊಬ್ಬರಿಗೆ ಜೀವಾವಧಿ ಶಿಕ್ಷೆ

ವೈದ್ಯಕೀಯ ಕಾರಣಕ್ಕಾಗಿ ಶಿಕ್ಷೆ ಪ್ರಮಾಣ ಕಡಿತ, ಮಧ್ಯಂತರ ಜಾಮೀನು ಕುರಿತಂತೆ ತನಿಖಾ ತಂಡದ ಪ್ರತಿಕ್ರಿಯೆ ಅಗತ್ಯ ಎಂದು ಸುಪ್ರೀಂಕೋರ್ಟ್ ಪರಿಗಣಿಸಿದೆ.

ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ

ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ

''ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 77 ವರ್ಷ ವಯಸ್ಸಿನ ಸಜ್ಜನ್ ಕುಮಾರ್ ಆರೋಗ್ಯ ಕ್ಷೀಣಿಸುತ್ತಿದೆ ಎಂದು ವಕೀಲರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಸಿಬಿಐ ಪರಿಶೀಲನೆ ನಡೆಸಿ ಇನ್ನೊಂದು ವಾರದಲ್ಲಿ ತನ್ನ ಅಫಿಡವಿಟ್ ಸಲ್ಲಿಸಲಿ,'' ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

ಸಫ್ದರ್ಜಂಗ್ ಆಸ್ಪತ್ರೆ ಐಸಿಯುವಿನಲ್ಲಿರುವ ಸಜ್ಜನ್ ಅವರಿಗೆ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಬೇಕು, ಅವರ ಆರೈಕೆಗೆ ಒಬ್ಬರ ನೆರವಿನ ಅಗತ್ಯವಿದೆ, ಪ್ರತಿನಿತ್ಯ ಸ್ನಾನ, ಶೌಚಾಲಯ, ಆಹಾರ ಸೇವನೆಗೂ ಇನ್ನೊಬ್ಬರ ಮೇಲೆ ಅವಲಂಬಿತರಾಗಬೇಕಾಗುತ್ತದೆ ಎಂದು ಸಜ್ಜನ್ ಕುಮಾರ್ ಪರ ವಕೀಲ ಅಜಯ್ ಮರ್ವಾಹ್ ಅರ್ಜಿಯಲ್ಲಿ ತಿಳಿಸಿದ್ದರು.

1984ರ ಸಿಖ್ ದಂಗೆ:ಕಾಂಗ್ರೆಸ್ಸಿನ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ1984ರ ಸಿಖ್ ದಂಗೆ:ಕಾಂಗ್ರೆಸ್ಸಿನ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ

ಹಿರಿಯ ವಕೀಲ ವಿಕಾಸ್ ಸಿಂಗ್ ವಾದ

ಹಿರಿಯ ವಕೀಲ ವಿಕಾಸ್ ಸಿಂಗ್ ವಾದ

ಮತ್ತೊಬ್ಬ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಏಕೆ ಬೇಕು ಎಂಬುದಕ್ಕೆ ದಾಖಲೆ ಒದಗಿಸಿ, colonoscopy ಇರುವುದು ಮೇದಾಂತದಲ್ಲಿ ಮಾತ್ರ ಎಂದಿದ್ದಾರೆ. ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಲು ಕುಟುಂಬಸ್ಥರು ಬಯಸಿದ್ದಾರೆ. ಇದಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದಿದ್ದಾರೆ.

ಆದರೆ, ಪ್ರತಿ ವಾದ ಮಂಡಿಸಿದ ಸಂತ್ರಸ್ತರ ಪರ ವಕೀಲ ದುಶ್ಯಂತ್ ದವೆ, ಮಾರ್ಚ್ ತಿಂಗಳಲ್ಲಿ ಏಮ್ಸ್ ವೈದ್ಯರು ನೀಡಿದ ವರದಿ ಪ್ರಕಾರ ಸಜ್ಜನ್ ಕುಮಾರ್ ಅವರಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಅಥವಾ ಬೇರೆ ಆಸ್ಪತ್ರೆ ಅಗತ್ಯವಿಲ್ಲ ಹೀಗಾಗಿ ಮೇದಾಂತಕ್ಕೆ ಶಿಫ್ಟ್ ಮಾಡುವುದು ಅನಗತ್ಯ ಎಂದಿದ್ದಾರೆ.

ಸಿಖ್ಖರ ಹತ್ಯಾಕಾಂಡದ ಅಪರಾಧಿ: ಯಾರು ಈ ಸಜ್ಜನ್ ಕುಮಾರ್?ಸಿಖ್ಖರ ಹತ್ಯಾಕಾಂಡದ ಅಪರಾಧಿ: ಯಾರು ಈ ಸಜ್ಜನ್ ಕುಮಾರ್?

ಸಿಖ್ ನರಮೇಧ ಪ್ರಕರಣ:

ಸಿಖ್ ನರಮೇಧ ಪ್ರಕರಣ:

1984ರ ಅಕ್ಟೋಬರ್ 31ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್ ಕುಮಾರ್ ಅವರು ಪ್ರಮುಖ ಆರೋಪಿಯಾಗಿದ್ದರು. ಅವರು ದೆಹಲಿಯ ಕಂಟೋನ್ಮೆಂಟ್ ಬಳಿ ಸಿಖ್ ಧರ್ಮೀಯರ ಮೇಲೆ ತಮ್ಮ ಬೆಂಬಲಿಗರಿಂದ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಹಿಂಸಾಚಾರಕ್ಕೆ ಬೆಂಬಲ ನೀಡಿದ ಆರೋಪದ ಎರಡು ಪ್ರಕರಣವನ್ನೂ ಅವರು ಎದುರಿಸುತ್ತಿದ್ದರು. ಆರೋಪಿಗಳ ವಿರುದ್ಧ ಕ್ರಿಮಿನಲ್ ಸಂಚು, ಗಲಭೆ, ಅಕ್ರಮ ಶಸ್ತ್ರಾಸ್ತ್ರ, ಕೊಲೆ, ಕೊಲೆ ಯತ್ನ ಸೇರಿದಂತೆ ಐಪಿಸಿ ಸೆಕ್ಷನ್ 452,302,307,324,395,436 ಹಾಗೂ 149 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

1984 ಸಿಖ್ ಹತ್ಯಾಕಾಂಡ : ಸೀಮೆಎಣ್ಣೆ ಸುರಿದು ಸರ್ದಾರ್ಜಿಗೆ ಬೆಂಕಿ ಹಚ್ಚಿದ್ದ ದುರುಳರು1984 ಸಿಖ್ ಹತ್ಯಾಕಾಂಡ : ಸೀಮೆಎಣ್ಣೆ ಸುರಿದು ಸರ್ದಾರ್ಜಿಗೆ ಬೆಂಕಿ ಹಚ್ಚಿದ್ದ ದುರುಳರು

ನೆಹರೂ-ಇಂದಿರಾ ಗಾಂಧಿ ಕುಟುಂಬದ ನಿಷ್ಠಾವಂತ ಸಜ್ಜನ್

ನೆಹರೂ-ಇಂದಿರಾ ಗಾಂಧಿ ಕುಟುಂಬದ ನಿಷ್ಠಾವಂತ ಸಜ್ಜನ್

1984ರಲ್ಲಿ ದೆಹಲಿಯ ಮಹಿಪಾಲ್ಪುರ್ ಪ್ರದೇಶದಲ್ಲಿ ಇಬ್ಬರು ಸಿಖ್ಖರನ್ನು ಕೊಂದ ಆರೋಪದ ಮೇಲೆ ಯಶ್ ಪಾಲ್ ಸಿಂಗ್ ಎಂಬ ಅಪರಾಧಿಗೆ ಗಲ್ಲು ಶಿಕ್ಷೆ ಘೋಷಿಸಲಾಗಿತ್ತು. ಮತ್ತೊಬ್ಬ ಅಪರಾಧಿ ನರೇಶ್ ಸೆಹ್ರಾವತ್‌ಗೆ ಜೀವಾವಧಿ ಶಿಕ್ಷೆ ನೀಡಲಾಗಿತ್ತು.

ಸಜ್ಜನ್ ಕುಮಾರ್ ಅವರೊಂದಿಗೆ ಕ್ಯಾ.ಭಾಗ್ಮಲ್, ಗಿರಿದರ್ ಲಾಲ್ ಮತ್ತು ಕಾಂಗ್ರೆಸ್ಸಿನ ಮಾಜಿ ಕೌನ್ಸೆಲರ್ ಬಲ್ವಾನ್ ಖೋಖರ್ ಅವರನ್ನೂ ದೋಷಿಗಳೆಂದು ಪರಿಗಣಿಸಿ, ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಿಶನ್ ಖೊಕ್ಕರ್ಮತ್ತು ಮಾಜಿ ಶಾಸಕ ಮಹೇಂದರ್ ಯಾದವ್ ಅವರಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ಹೊರ ವಲಯದಲ್ಲಿ ಹುಟ್ಟಿ ಬೆಳೆದ ಸಜ್ಜನ್ ಕುಮಾರ್, ನೆಹರೂ-ಇಂದಿರಾ ಗಾಂಧಿ ಕುಟುಂಬದ ನಿಷ್ಠಾವಂತ. ಕಾಂಗ್ರೆಸ್‌ನ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರು ಜಾಟ್ ಸಮುದಾಯದ ಪ್ರಭಾವಿ ಮುಖಂಡರೂ ಹೌದು.

English summary
A bench of Justices Sanjay Kishan Kaul and Hrishikesh Roy issued notice to the CBI on an application filed by Kumar who is undergoing a life term following his conviction in the 1984 Delhi anti-Sikh riots by the Delhi high court in December 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X