ಅತ್ಯಾಚಾರ ಸಂತ್ರಸ್ತೆಗೆ 26 ವಾರಗಳ ನಂತರ ಗರ್ಭಪಾತ? ವರದಿ ಕೇಳಿದ ಸುಪ್ರೀಂ
ನವದೆಹಲಿ, ಮಾರ್ಚ್ 02: ಹದಿನಾಲ್ಕು ವರ್ಷದ ಅತ್ಯಾಚಾರ ಸಂತ್ರಸ್ತೆಗೆ, ಗರ್ಭಧಾರಣೆಯ 26 ವಾರಗಳ ನಂತರ ಗರ್ಭಪಾತ ಮಾಡುವುದು ಸುರಕ್ಷಿತವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಹರಿಯಾಣದ ಕರ್ನಾಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯು ವೈದ್ಯಕೀಯ ಸಮಿತಿ ರಚಿಸಬೇಕಾಗಿ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಸಿಜೆಐ ಎಸ್.ಎ.ಬೊಬ್ಡೆ, ಎ.ಎಸ್.ಬೋಪಣ್ಣ ಹಾಗೂ ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ಪೀಠವು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಮೂವರು ವೈದ್ಯರನ್ನೊಳಗೊಂಡ ವೈದ್ಯಕೀಯ ಸಮಿತಿ ರಚಿಸಬೇಕು ಹಾಗೂ ಬಾಲಕಿಗೆ 26 ವಾರಗಳ ನಂತರ ಗರ್ಭಪಾತ ಮಾಡುವುದು ಸುರಕ್ಷಿತವೇ ಎಂದು ವಿಶ್ಲೇಷಣೆ ನಡೆಸಿ ಶುಕ್ರವಾರದ ಒಳಗೆ ವರದಿ ನೀಡಬೇಕು ಎಂದು ಆದೇಶಿಸಿದೆ.
ಗರ್ಭಪಾತಕ್ಕೆ ಅನುಮತಿ ಕೋರಿ ಬಾಲಕಿ ಅರ್ಜಿ ಸಲ್ಲಿಸಿದ್ದಾಳೆ. ಹರಿಯಾಣದ 14 ವರ್ಷದ ಬಾಲಕಿ ತನ್ನ ಸೋದರ ಸಂಬಂಧಿಯಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದು, ಗರ್ಭಿಣಿಯಾಗಿದ್ದಾಳೆ. ಆದರೆ ಗರ್ಭಧಾರಣೆಯಿಂದ ಮಗು ಹಾಗೂ ಬಾಲಕಿಯಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಗೋಚರಿಸುತ್ತಿದ್ದು, ಬಾಲಕಿ ಮಾನಸಿಕ ಸಮಸ್ಯೆಗೂ ಒಳಗಾಗುವ ಸಾಧ್ಯತೆಯಿದೆ ಎಂದು ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ವೈದ್ಯಕೀಯ ಗರ್ಭಪಾತ ಕಾಯ್ದೆಯ 3 (2) (b) ಸೆಕ್ಷನ್ ಪ್ರಕಾರ, ನ್ಯಾಯಾಲಯದ ಸಮ್ಮತಿಯಿಲ್ಲದೇ 20 ವಾರಗಳ ನಂತರ ಗರ್ಭಪಾತ ಮಾಡುವುದು ನಿಷೇಧಿತ. ಶುಕ್ರವಾರದ ಒಳಗೆ ಈ ಸಂಬಂಧ ಉತ್ತರ ನೀಡಬೇಕೆಂದು ಹರಿಯಾಣ ಸರ್ಕಾರಕ್ಕೂ ನ್ಯಾಯಾಲಯ ನೋಟಿಸ್ ನೀಡಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications