ಚೆನ್ನೈನ ಆಶ್ರಯ ಮನೆಯಲ್ಲಿನ 35 ಮಕ್ಕಳಿಗೆ ಕೊರೊನಾ ಪಾಸಿಟಿವ್: ಸರ್ಕಾರದಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್
ನವದೆಹಲಿ ಜೂನ್ 11: ಚೆನ್ನೈನ ಆಶ್ರಯ ಮನೆಯೊಂದರ 35 ಮಕ್ಕಳಿಗೆ ಕೋವಿಡ್ -19 ಪಾಸಿಟಿವ್ ವರದಿ ಬಂದ ಬಳಿಕ ಸುಪ್ರೀಂ ಕೋರ್ಟ್ ಗುರುವಾರ ತಮಿಳುನಾಡು ಸರ್ಕಾರದಿಂದ ಸದ್ಯದ ಸ್ಥಿತಿ ಮತ್ತು ಉತ್ತರವನ್ನು ಕೋರಿದೆ.
Recommended Video
ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು "ತಮಿಳುನಾಡಿನ ಆಶ್ರಯ ಮನೆಯಲ್ಲಿ 35 ಮಕ್ಕಳನ್ನು ಕೋವಿಡ್ ಪಾಸಿಟಿವ್ ಪತ್ತೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ತಮಿಳುನಾಡು ರಾಜ್ಯ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ವಾರ್ಡನ್, ಕೋವಿಡ್ ಪಾಸಿಟಿವ್ ಆಗಿದ್ದರಿಂದ ನಿಮಗೆ ಇದನ್ನು ತಿಳಿಸಲಾಗಿದೆ.
15 ದಿನದಲ್ಲಿ ವಲಸೆ ಕಾರ್ಮಿಕರನ್ನು ಊರುಗಳಿಗೆ ಕಳುಹಿಸಬೇಕು- ಸುಪ್ರೀಂಕೋರ್ಟ್
ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಎಸ್.ರವೀಂದ್ರ ಭಟ್ ಅವರನ್ನೂ ಒಳಗೊಂಡ ನ್ಯಾಯಪೀಠ, ಆಶ್ರಯ ಮನೆಯಲ್ಲಿ ಕೋವಿಡ್ -19 ಹರಡುವಿಕೆ ಮತ್ತು ಇತರರ ಆರೋಗ್ಯ ಸಂರಕ್ಷಿಸಲು ಕೈಗೊಂಡ ಕ್ರಮಗಳ ಕುರಿತು ಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಆರೋಗ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಆದೇಶಿಸಿದೆ.
ಈ ಪ್ರಕರಣವನ್ನು ಮುಂದಿನ ಜೂನ್ 15 ರಂದು ವಿಚಾರಣೆ ನಡೆಸಲಾಗುವುದು.
ಸುಪ್ರೀಂಕೋರ್ಟ್ ಆದೇಶದಿಂದ ನಿಟ್ಟುಸಿರು ಬಿಟ್ಟ ವಲಸೆ ಕಾರ್ಮಿಕರು
ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ದೇಶಾದ್ಯಂತ ಆಶ್ರಯ ಮನೆಗಳಲ್ಲಿ ವಾಸಿಸುವ ಮಕ್ಕಳ ಸುರಕ್ಷತೆಯ ದೊಡ್ಡ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಉನ್ನತ ನ್ಯಾಯಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆಗಳನ್ನು ಕೋರಿದೆ.