ಬೆಂಗಳೂರು ಅಕ್ರಮ-ಸಕ್ರಮ ಯೋಜನೆ: ಸುಪ್ರೀಂ ಶೀಘ್ರ ವಿಚಾರಣೆ
ನವದೆಹಲಿ, ಜನವರಿ 12: ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ಬೆಂಗಳೂರಿನ ಅಕ್ರಮ-ಸಕ್ರಮ ಪ್ರಕರಣದ ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್ ಕೊನೆಗೂ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಬೆಂಗಳೂರಿನಲ್ಲಿರುವ ಕಟ್ಟಡಗಳಲ್ಲಿನ ಅಕ್ರಮವನ್ನು ಸಕ್ರಮ ಮಾಡಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ನಮ್ಮ ಬೆಂಗಳೂರು ಫೌಂಡೇಶನ್ ಮೇಲ್ಮನವಿ ಸಲ್ಲಿಸಿತ್ತು. ಆದರೆ ಪ್ರಕರಣದ ವಿಚಾರಣೆ ವಿಳಂಬವಾಗಿತ್ತು. ಹೀಗಾಗಿ ಬಿಬಿಎಂಪಿ ಪ್ರಕರಣದ ಶೀಘ್ರ ವಿಚಾರಣೆಗೆ ಮನವಿ ಮಾಡಿತ್ತು. ಇದಕ್ಕೆ ಒಪ್ಪಿದ ಸುಪ್ರೀಂಕೋರ್ಟ್ ಶೀಘ್ರ ವಿಚಾರಣೆಗೆ ಮುಂದಾಗಿದೆ.
ಕರ್ನಾಟಕ ಟೌನ್ ಮತ್ತು ಕಂಟ್ರಿ ಪ್ಲಾನಿಂಗ್ ಕಾಯ್ದೆಗೆ ತಿದ್ದುಪಡಿ ಕಟ್ಟಡ ನಿರ್ಮಾಣದಲ್ಲಿನ ಶೇ.50 ರಷ್ಟು ಅಕ್ರಮವನ್ನು ಸಕ್ರಮಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ನಮ್ಮ ಬೆಂಗಳೂರು ಪ್ರತಿಷ್ಠಾನ ಕೋರಿಕೆಯಂತೆ ರಾಜ್ಯ ಹೈಕೋರ್ಟ್ ಆದೇಶಕ್ಕೆ ಕಳೆದ ವರ್ಷದ ಜನವರಿಯಲ್ಲಿ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು.

ಇದೀಗ ಪ್ರಕರಣದ ತ್ವರಿತ ಇತ್ಯರ್ಥ ಮಾಡಿ ಎಂದು ಸುಪ್ರೀಂಕೋರ್ಟ್ ಗೆ ಬಿಬಿಎಂಪಿ ಮನವಿ ಮಾಡಿತ್ತು. ಕುರಿತು ಸುಪ್ರೀಂ ಕೋರ್ಟ್ ಶೀಘ್ರ ವಿಚಾರಣೆ ನಡೆಸಲಿದೆ. ಮಾರ್ಚ್ 21 ರಿಂದ ಅಂತಿಮವಾಗಿ ವಿಚಾರಣೆ ನಡೆಸುವುದಾಗಿ ನ್ಯಾ. ಸೀಪಕ್ ಮಿಶ್ರಾ ಅವರ ಪೀಠ ಹೇಳಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ










Click it and Unblock the Notifications