ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತೂ ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ಕೂಡಿ ಬಂತು ಕಾಲ

|
Google Oneindia Kannada News

Recommended Video

ಅನರ್ಹ ಶಾಸಕರಿಗೆ ಇಂದು ಸಿಹಿ ಸುದ್ದಿ ಕೊಡುತ್ತಾ ಸುಪ್ರೀಂ ಕೋರ್ಟ್..? | Rebel MLA's

ನವದೆಹಲಿ, ಸೆಪ್ಟೆಂಬರ್ 17: ಅನರ್ಹ ಶಾಸಕರ ಅರ್ಜಿ ವಿಚಾರಣೆ ಇಂದು(ಸೆ.17)ನಡೆಯಲಿದ್ದು, ನ್ಯಾ. ಎನ್.ವಿ ರಮಣ, ನ್ಯಾ.ಮೋಹನ್ ಶಾಂತನಗೌಡ ಮತ್ತು ನ್ಯಾ.ಅಜಯ್ ರಸ್ತೋಗಿ ಅವರಿರುವ ತ್ರಿಸದಸ್ಯ ಪೀಠ ಈ ಅನರ್ಹ ಶಾಸಕ ಸಲ್ಲಿಸಿರುವ ಒಟ್ಟು 9 ರಿಟ್ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿದ್ದ ಸ್ಪೀಕರ್ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ 17 ಅನರ್ಹ ಶಾಸಕರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳಿಗೆ ಕೊನೆಗೂ ವಿಚಾರಣೆ ಕಾಲ ಕೂಡಿಬಂದಿದೆ.

ಅನರ್ಹ ಶಾಸಕರಿಗೆ ನಿರಾಸೆ ಮೂಡಿಸಿದ ಸುಪ್ರೀಂಕೋರ್ಟ್ಅನರ್ಹ ಶಾಸಕರಿಗೆ ನಿರಾಸೆ ಮೂಡಿಸಿದ ಸುಪ್ರೀಂಕೋರ್ಟ್

ಈ ಮೂಲಕ ಕಳೆದ ಒಂದೂವರೆ ತಿಂಗಳಿನಿಂದ ಸುಪ್ರೀಂಕೋರ್ಟ್‌ ವಿಚಾರಣೆಗೆ ಕಾಯುತ್ತಿದ್ದ ಅನರ್ಹ ಶಾಸಕರಿಗೆ ಸ್ವಲ್ಪ ನೆಮ್ಮದಿ ಸಿಕ್ಕಂತಾಗಿದೆ.

 ಅನರ್ಹ ಶಾಸಕರ ವಾದವೇನು?

ಅನರ್ಹ ಶಾಸಕರ ವಾದವೇನು?

ಸ್ಪೀಕರ್ ಅವರು ನಮ್ಮ ಸದಸ್ಯತ್ವವನ್ನು ರದ್ದುಪಡಿಸಿರುವುದು ಸಂಪೂರ್ಣ ಕಾನೂನು ಬಾಹಿರ, ದುರುದ್ದೇಶದ ಮತ್ತು ನಿರಂಕುಶ ಆದೇಶವನ್ನು ಹೊರಡಿಸಿದ್ದಾರೆ. ಪಕ್ಷ ವಿರೋಧಿ ನಡೆಗಾಗಿ ಸದಸ್ಯತ್ವವನ್ನು ರದ್ದು ಪಡಿಸುವ ಸಂವಿಧಾನದ 10ನೇ ಪರಿಚ್ಛೇದವನ್ನು ಅನಾವಶ್ಯಕವಾಗಿ ಸ್ಪೀಕರ್ ಈ ಪ್ರಕರಣದಲ್ಲಿ ಎಳೆದು ತಂದಿದ್ದಾರೆ ಎಂದು ಅರ್ಜಿಯಲ್ಲಿ ದೂರಿದ್ದಾರೆ.

ಅನರ್ಹ ಶಾಸಕರಿಗೆ ತುಸು ನೆಮ್ಮದಿ ನೀಡಿದ ಸುಪ್ರೀಂಕೋರ್ಟ್ಅನರ್ಹ ಶಾಸಕರಿಗೆ ತುಸು ನೆಮ್ಮದಿ ನೀಡಿದ ಸುಪ್ರೀಂಕೋರ್ಟ್

 ಎಲ್ಲರೂ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೆವು

ಎಲ್ಲರೂ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೆವು

ಎಲ್ಲರೂ ಜು.6ರಂದು ಸ್ವ ಇಚ್ಛೆಯಿಂದ , ನೈಜವಾಗಿ ಸ್ಪೀಕರ್ ಕಚೇರಿಗೆ ರಾಜೀನಾಮೆ ಸಲ್ಲಿಸಿದ ಸಂದರ್ಭದಲ್ಲಿ ನಮ್ಮ ಮೇಲೆ ಯಾವುದೇ ಅನರ್ಹತೆಯ ದೂರಿರಲಿಲ್ಲ. ಬಳಿಕ ಜು.12ರಂದು ಅನರ್ಹತೆಯ ದೂರು ಸಲ್ಲಿಸಲಾಗಿತ್ತು ಎಂದು ಜೆಡಿಎಸ್ ಶಾಸಕ ಎಚ್. ವಿಶ್ವನಾಥ್ , ನಾರಾಯಣಗೌಡ, ಗೋಪಾಲಯ್ಯ ಹೇಳಿದ್ದಾರೆ.

 ಸುಧಾಕರ್, ಎಂಟಿಬಿ ನಾಗರಾಜ್ ಹೇಳುವುದೇ ಬೇರೆ

ಸುಧಾಕರ್, ಎಂಟಿಬಿ ನಾಗರಾಜ್ ಹೇಳುವುದೇ ಬೇರೆ

ಜು.10ರಂದು ಅನರ್ಹತೆಯ ದೂರು ಸಲ್ಲಿಕೆಯಾಗಿತ್ತು ಎಂದು ಕಾಂಗ್ರೆಸ್ ಶಾಸಕರಾದ ಸುಧಾಕರ್, ಎಂಟಿಬಿ ನಾಗರಾಜ್, ಬಿಸಿ ಪಾಟೀಲ್, ಶಿವರಾಮ್ ಹೆಬ್ಬಾರ್, ರೋಷನ್ ಬೇಗ್, ಪ್ರತಾಪ್ ಗೌಡ ಪಾಟೀಲ್, ಆರ್ ಶಂಕರ್, ಆನಂದ್ ಸಿಂಗ್, ಮುನಿರತ್ನ, ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ.

ಅನರ್ಹ ಶಾಸಕರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂಕೋರ್ಟ್ಅನರ್ಹ ಶಾಸಕರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂಕೋರ್ಟ್

 ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ನಿರಾಸೆ ಮೂಡಿಸಿತ್ತು

ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ನಿರಾಸೆ ಮೂಡಿಸಿತ್ತು

ಕರ್ನಾಟಕದ 17 ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ನಿರಾಸೆ ಮೂಡಿಸಿದೆ. ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದೂಡಲಾಗುತ್ತಿದೆ.

ಸೆ. 11ರ ಬುಧವಾರ 14 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿತ್ತು. ನ್ಯಾಯಮೂರ್ತಿಗಳಾದ ಎನ್‌. ವಿ. ರಮಣ, ಅಜಯ್ ರಸ್ತೋಗಿ ಪೀಠದಲ್ಲಿ ವಿಚಾರಣೆ ನಡೆಯಬೇಕಿತ್ತು.

ಅನರ್ಹ ಶಾಸಕರಿಗೆ ತುಸು ನೆಮ್ಮದಿ ನೀಡಿದ ಸುಪ್ರೀಂಕೋರ್ಟ್ ಆದರೆ, ಮಂಗಳವಾರ ಸಂಜೆ ಪ್ರಕರಣಗಳ ಲಿಸ್ಟ್ ಹಾಕುವಾಗ ಅನರ್ಹ ಶಾಸಕರ ಅರ್ಜಿಯ ವಿಚಾರಣೆಯನ್ನು ಸೆ. 17ಕ್ಕೆ ಮುಂದೂಡಲಾಗಿತ್ತು.

English summary
Supreme Court Agreed to consider an urgent plea made by several disqualified Karnataka MLA Today(September 17) .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X