ಅಜಿತ್ ದೋವಲ್ ಮನೆ ಭದ್ರತಾ ಲೋಪ: 3 SSG ಕಮಾಂಡೋ ವಜಾ
ನವದೆಹಲಿ, ಆಗಸ್ಟ್ 18: ರಾಷ್ಟ್ರೀಯ ಭದ್ರತಾ ಸಲಹೆಗಾರ(NSA) ಅಜಿತ್ ದೋವಲ್ ಅವರ ನವದೆಹಲಿಯ ನಿವಾಸದಲ್ಲಿ ನಡೆದಿದ್ದ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಮೂವರು ಸಿಐಎಸ್ಎಫ್ SSG ಕಮಾಂಡೋಗಳನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಹಾಗೂ ಇಬ್ಬರು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. 2022ರ ಫೆಬ್ರವರಿ ತಿಂಗಳಿನಲ್ಲಿ ವ್ಯಕ್ತಿಯೊಬ್ಬ ದೋವಲ್ ಮನೆಗೆ ನುಗ್ಗಲು ವಿಫಲ ಯತ್ನ ನಡೆಸಿದ್ದಾಗ ಈ ಮೂವರು ಕಮ್ಯಾಂಡೋಗಳು ಕರ್ತವ್ಯ ನಿರತರಾಗಿದ್ದರು.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ಗೆ ಸಚಿವರ ಶ್ರೇಣಿಯ ಭದ್ರತೆ ಇದ್ದು, ಸಿಐಎಸ್ಎಫ್ನ SSG ಕಮ್ಯಾಂಡೋ, ದೆಹಲಿ ಪೊಲೀಸರು ಅವರ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದಾರೆ.ವಿಐಪಿಗಳಿಗೆ ಸಿಗುವ ಝಡ್ ಪ್ಲಸ್ ಸೆಕ್ಯುರಿಟಿಯನ್ನು ಅಜಿತ್ ದೋವಲ್ ಹೊಂದಿದ್ದಾರೆ.
2022ರ ಫೆಬ್ರವರಿ 16ರಂದು ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಕೆಂಪು ಬಣ್ಣದ SUV ಮೂಲಕ ವೇಗವಾಗಿ ಚಲಿಸುತ್ತಾ ಅಜಿತ್ ದೋವಲ್ ಮನೆಗೆ ನುಗ್ಗಲು ಯತ್ನಿಸಿದ್ದ, ಆದರೆ, ಭದ್ರತಾ ಸಿಬ್ಬಂದಿ ಆತನನ್ನು ತಡೆದಿದ್ದರು. ಆರೋಪಿಯನ್ನು ಶಂತನು ರೆಡ್ಡಿ ಎಂದು ಗುರುತಿಸಲಾಗಿತ್ತು,ನೋಯ್ಡಾದಿಂದ SUV ಬಾಡಿಗೆಗೆ ಪಡೆದು ದೆಹಲಿಗೆ ಬಂದಿದ್ದ, ಅಜಿತ್ ದೋವಲ್ ಮನೆಗೆ ನುಗ್ಗಲು ವಿಫಲ ಯತ್ನ ನಡೆಸಿ ಸಿಕ್ಕಿಬಿದ್ದಿದ್ದ.

ದೆಹಲಿ ಪೊಲೀಸ್ ವಿಶೇಷ ವಿಭಾಗದ ಸಿಬ್ಬಂದಿಗಳು ವ್ಯಕ್ತಿಯ ವಿಚಾರಣೆ ನಡೆಸಿದ್ದರು. ಆರೋಪಿ ಮಾನಸಿಕವಾಗಿ ಅಸ್ವಸ್ಥ ಎಂದು ಪೊಲೀಸರು ವರದಿ ನೀಡಿದ್ದರು. ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF) ಕೂಡಾ ಈ ಬಗ್ಗೆ ತನಿಖೆ ನಡೆಸಿ, ತನ್ನ ಸಿಬ್ಬಂದಿಯ ಭದ್ರತಾ ವೈಫಲ್ಯವು ಸಾಬೀತಾಗಿರುವುದನ್ನು ಉಲ್ಲೇಖಿಸಿ ವರದಿ ನೀಡಿತ್ತು. ಜೊತೆಗೆ ಮೂವರು ಕಮಾಂಡೋಗಳನ್ನು ವಜಾಗೊಳಿಸಲು ಸೂಚಿಸಿತ್ತು.
ವಿಶೇಷ ಭದ್ರತಾ ಗುಂಪಿನ (ಎಸ್ಎಸ್ಜಿ) ಮೂವರು ಕಮಾಂಡೋಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಈ ವಿವಿಐಪಿ ಭದ್ರತಾ ಘಟಕದ ಮುಖ್ಯಸ್ಥರಾಗಿರುವ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ (ಡಿಐಜಿ) ಕೌಶಿಕ್ ಗಂಗೂಲಿ ಮತ್ತು ಅವರ ಎರಡನೇ ಕಮಾಂಡ್, ಹಿರಿಯ ಕಮಾಂಡೆಂಟ್ ಶ್ರೇಣಿಯ ಅಧಿಕಾರಿ ನವದೀಪ್ ಸಿಂಗ್ ಹೀರಾ ಅವರನ್ನು ವಜಾಗೊಳಿಸಲಾಗಿದೆ. ಇಬ್ಬರ ಬದಲಿ ಅಧಿಕಾರಿಗಳನ್ನು ಇತ್ತೀಚೆಗೆ ಎಸ್ಎಸ್ಜಿಗೆ ನಿಯೋಜಿಸಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications