73ನೇ ಗಣರಾಜ್ಯೋತ್ಸವ: ದೆಹಲಿಯಲ್ಲಿ ಡ್ರೋನ್ ದಾಳಿ ಬೆದರಿಕೆ ಹಿನ್ನೆಲೆ ಬಿಗಿ ಭದ್ರತೆ
ನವದೆಹಲಿ, ಜನವರಿ 26: ಭಾರತವು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿದೆ. ಇದರ ನಡುವೆ ಅಪಾಯಕಾರಿ ಡ್ರೋನ್ ದಾಳಿ ನಡೆಸುವ ಉಗ್ರರ ಬೆದರಿಕೆ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ನವದೆಹಲಿಯಲ್ಲಿ ಡ್ರೋನ್-ಹಾರಾಟವನ್ನು ಪತ್ತೆ ಮಾಡುವ ಹಾಗೂ ಸಂಶಯಾಸ್ಪದ ವ್ಯಕ್ತಿಗಳನ್ನು ಗುರುತಿಸುವ ನಿಟ್ಟಿನಲ್ಲಿ ಆಂಟಿ-ಡ್ರೋನ್ ವ್ಯವಸ್ಥೆಯನ್ನು ಮಾಡಲಾಗಿದೆ. ಗುಪ್ತಚರ ಇಲಾಖೆ ಮತ್ತು ಭದ್ರತಾ ಸಿಬ್ಬಂದಿಯು ನವದೆಹಲಿಯಲ್ಲಿ ಡ್ರೋನ್ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದವು.
ದೆಹಲಿಯಲ್ಲಿ ಡ್ರೋನ್ ಮಾರಾಟಗಾರರ ಮೇಲೂ ಒಂದು ಕಣ್ಣಿಡುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಭದ್ರತಾ ವ್ಯವಸ್ಥೆ ಬಗ್ಗೆ ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತನಾ ಮಾಹಿತಿ ನೀಡಿದ್ದಾರೆ.

ಮೂರು ವಲಯಗಳಾಗಿ ವಿಂಗಡನೆ:
ಡ್ರೋನ್ ಮಾರಾಟ ಮತ್ತು ಬಳಕೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾದರಿ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ದೆಹಲಿಯಲ್ಲಿ ಈ ಹಿಂದೆ ಡ್ರೋನ್ ಬಳಕೆಗೆ ಮೂರು ಪ್ರಮುಖ ವಲಯಗಳಾಗಿ ವಿಂಗಡಿಸಲಾಗಿದ್ದು, ದೆಹಲಿಯ ಹೊರವಲಯವನ್ನು ಗ್ರೀನ್ ಜೋನ್ ಎಂದು ಗುರುತಿಸಲಾಗಿದೆ. ಎಲ್ಲೋ ಜೋನ್ ನಲ್ಲಿ ಕೆಲವು ನಿರ್ಬಂಧಗಳಡಿ ಡ್ರೋನ್ ಹಾರಾಟವನ್ನು ನಡೆಸಲಾಗುತ್ತದೆ. ಆದರೆ ರೆಡ್ ಜೋನ್ ಪ್ರದೇಶದಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ದೆಹಲಿಯಲ್ಲಿ ಗಣರಾಜ್ಯೋತ್ಸವ ಸೇರಿದಂತೆ ಪ್ರಮುಖ ಕಾರ್ಯಕ್ರಮ ಮತ್ತು ಆಚರಣೆ ಸಂದರ್ಭಗಳಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರಮುಖ ಆಚರಣೆಗಳು ಮತ್ತು ಕಾರ್ಯಕ್ರಮಗಳ ಸಂದರ್ಭದಲ್ಲಿ ಡ್ರೋನ್ ದಾಳಿ ಅಪಾಯ ಹೆಚ್ಚಾಗಿರುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಜಮ್ಮುವಿನಿಂದ ದೆಹಲಿಗೆ ಶಂಕಿತರು:
ದೆಹಲಿಯ ಗಾಜಿಪುರ್ ಪೂಲ್ ಮಂಡಿ ಬಳಿ ಇತ್ತೀಚೆಗಷ್ಟೇ ಬಾಂಬ್ ಪತ್ತೆಯಾಗಿದ್ದು, ಇದರ ಹಿಂದೆ ಪಾಕಿಸ್ತಾನದ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಇದರ ಮಧ್ಯೆ ಜಮ್ಮುವಿನಿಂದ ರಸ್ತೆ ಮಾರ್ಗವಾಗಿ ಕೆಲವು ಶಂಕಿತರು ದೆಹಲಿಗೆ ಆಗಮಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಹಿನ್ನೆಲೆ ಶಂಕಿತರಿಗಾಗಿ ದೆಹಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನವದೆಹಲಿ ನಾಲ್ಕೂ ದಿಕ್ಕುಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪ್ರತಿಯೊಂದು ವಾಹನ ಮತ್ತು ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.
ದೆಹಲಿಯಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ:
ಭಾರತ ಬುಧವಾರ ತನ್ನ 73ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ಆಚರಣೆಯ ಪ್ರಮುಖ ಲಕ್ಷಣವೆಂದರೆ ನವದೆಹಲಿಯ ರಾಜ್ಪಥ್ನಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್, ಅಲ್ಲಿ ಭಾರತದ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ಅನೇಕ ವಿಶಿಷ್ಟತೆಗಳನ್ನು ಪ್ರದರ್ಶಿಸಲಾಗುತ್ತದೆ.
ಗಣರಾಜ್ಯೋತ್ಸವದ ಪರೇಡ್ ಸಮಾರಂಭವು ಕಳೆದ ವರ್ಷದಂತೆ 90 ನಿಮಿಷಗಳ ಅವಧಿವರೆಗೂ ನಡೆಯುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂಡಿಯಾ ಗೇಟ್ ಬಳಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ತದನಂತರ ಸೇನಾ ತುಕಡಿಗಳ ಮಾರ್ಚ್ ಪಾಸ್ ಶುರುವಾಗುತ್ತವೆ. ಮೆರವಣಿಗೆಯಲ್ಲಿ ಸಾಂಸ್ಕೃತಿಕ ವೈವಿಧ್ಯತೆ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯನ್ನು ಪ್ರತಿನಿಧಿಸುವ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಐತಿಹಾಸಿಕ ಗಣರಾಜ್ಯೋತ್ಸವ ಪರೇಡ್ ರಾಷ್ಟ್ರಪತಿ ಭವನದಿಂದ ಆರಂಭವಾಗಿ ಇಂಡಿಯಾ ಗೇಟ್ನಲ್ಲಿ ಕೊನೆಗೊಳ್ಳಲಿದೆ. ಈ ನಡುವೆ ವಿಜಯ್ ಚೌಕ್ನಿಂದ ರಾಜ್ಪಥ್, ಅಮರ್ ಜವಾನ್ ಜ್ಯೋತಿ, ಇಂಡಿಯಾ ಗೇಟ್ ಪ್ರಿನ್ಸೆಸ್ ಪ್ಯಾಲೇಸ್, ತಿಲಕ್ ಮಾರ್ಗ್ ಮೂಲಕ ಸಾಗಲಿರುವ ಪರೇಡ್ ಅಂತಿಮವಾಗಿ ಇಂಡಿಯಾ ಗೇಟ್ಗೆ ತಲುಪಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications