ದೇಶದ್ರೋಹದ ಪ್ರಕರಣ: SC ತೀರ್ಪುಗೆ ಕಿರಣ್ ರಿಜಿಜು ಪ್ರತಿಕ್ರಿಯೆ
ನವದೆಹಲಿ ಮೇ 11: ಬುಧವಾರ ದೇಶದ್ರೋಹದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಸರ್ಕಾರವು ಪರಿಶೀಲಿಸುವುದರಿಂದ ಅದನ್ನು ತಡೆಹಿಡಿಯಲಾಗುವುದು ಮತ್ತು ಜೈಲಿನಲ್ಲಿರುವವರು ಜಾಮೀನು ಕೋರಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ನ್ಯಾಯಾಲಯ ಇಂದು ಆದೇಶಿಸಿದೆ.
ಆದೇಶದ ನಂತರ, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು "ನ್ಯಾಯಾಲಯ ಮತ್ತು ಅದರ ಸ್ವಾತಂತ್ರ್ಯವನ್ನು ಗೌರವಿಸುತ್ತೇವೆ" ಎಂದು ಹೇಳಿದರು. ಆದರೆ "ಲಕ್ಷ್ಮಣ ರೇಖಾ" ಇದೆ. ಅದನ್ನು ದಾಟಲು ಸಾಧ್ಯವಿಲ್ಲ. ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ ಮತ್ತು ನಮ್ಮ ಪ್ರಧಾನಿ (ಪ್ರಧಾನಿ ನರೇಂದ್ರ ಮೋದಿ) ಅವರ ಉದ್ದೇಶದ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಿದ್ದೇವೆ ಎಂದು ಅವರು ಹೇಳಿದರು. ನಾವು ನ್ಯಾಯಾಲಯ ಮತ್ತು ಅದರ ಸ್ವಾತಂತ್ರ್ಯವನ್ನು ಗೌರವಿಸುತ್ತೇವೆ. ಆದರೆ ಎಲ್ಲವನ್ನೂ ಗೌರವಿಸಬೇಕಾದ 'ಲಕ್ಷ್ಮಣ ರೇಖಾ' ಇದೆ ಎಂದಿದ್ದಾರೆ.
ಸರಕಾರದ ವಿರುದ್ಧ ಹೇಳಿಕೆ ಕೊಡುವವರ ಮೇಲೆ ದೇಶದ್ರೋಹ ಪ್ರಕರಣ ದಾಖಲೆಯಿಂದ ಕೆಲ ಮಾಧ್ಯಮಗಳು ಸರಕಾರಿ ವಿರೋಧಿ ವರದಿಗಳನ್ನು ಪ್ರಕಟಿಸಲು ಹಿಂಜರಿಯುವಂಥ ಸನ್ನಿವೇಶಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕಾಯ್ದೆಯು ವಾಕ್ ಸ್ವಾತಂತ್ರ್ಯ ಕಸಿದುಕೊಳ್ಳುತ್ತದೆ ಎಂಬ ಆತಂಕ ಹೆಚ್ಚಾದ ಹಿನ್ನಲೆಯಲ್ಲಿ ದೇಶದ್ರೋಹ ಕಾಯ್ದೆ ವಿರುದ್ಧ ಬಹಳ ಮಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ವಿರೋಧಗಳ ನಂತರ ಇದೀಗ ಕೇಂದ್ರ ಸರಕಾರ ಈ ದೇಶದ್ರೋಹ ಕಾನೂನನ್ನು ಪರಾಮರ್ಶಿಸುವುದಾಗಿ ಹೇಳಿದೆ.

ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ಸರಕಾರ, ಈ ದೇಶದ್ರೋಹ ಕಾಯ್ದೆಯಲ್ಲಿ ಸೂಕ್ತ ಬದಲಾವಣೆಗಳನ್ನು ತರುವುದಾಗಿ ಹೇಳಿದ್ದು ಇಂದು ಮಹತ್ವದ ತೀರ್ಪು ನೀಡಿದೆ. ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಸರ್ಕಾರವು ಪರಿಶೀಲಿಸುವುದರಿಂದ ಅದನ್ನು ತಡೆಹಿಡಿಯಲಾಗುವುದು ಮತ್ತು ಜೈಲಿನಲ್ಲಿರುವವರು ಜಾಮೀನು ಕೋರಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಆದೇಶಿಸಿದೆ.
We've made our positions very clear & also informed the court about intention of our PM. We respect the court & its independence. But there's a 'Lakshman Rekha' (line) that must be respected by all organs of the state in letter & spirit:Law Min Kiren Rijiju on SC staying sedition pic.twitter.com/Z4vR0FUmvt
— ANI (@ANI) May 11, 2022
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, 'ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುವುದಾಗಿ ಹೇಳಿದ್ದಾರೆ. ಜೊತೆಗೆ ಎಲ್ಲವನ್ನೂ ಗೌರವಿಸಬೇಕಾದ 'ಲಕ್ಷ್ಮಣ ರೇಖೆ'ಯೂ ಇದೆ ಎಂದಿದ್ದಾರೆ. 'ನಾವು ಭಾರತೀಯ ಸಂವಿಧಾನದ ನಿಬಂಧನೆಗಳನ್ನು ಮತ್ತು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳಬೇಕು' ಎಂದು ಹೇಳಿದರು.

ಈ ಕಾನೂನಿನ ಸೆಕ್ಷನ್ 124 ಎ ಅಡಿಯಲ್ಲಿ ಜೈಲಿನಲ್ಲಿರುವವರು ಜಾಮೀನಿಗಾಗಿ ನ್ಯಾಯಾಲಯಕ್ಕೆ ಹೋಗಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ವಿಚಾರಣೆಯಲ್ಲಿ ಹೇಳಿದೆ. ಇದಕ್ಕೂ ಮೊದಲು, ದೇಶದ್ರೋಹದ ನಿಬಂಧನೆಯಡಿಯಲ್ಲಿ ಕಾಗ್ನಿಜಬಲ್ ಅಪರಾಧಗಳನ್ನು ದಾಖಲಿಸುವುದನ್ನು ಸರ್ಕಾರವು ತಡೆಯಲು ಸಾಧ್ಯವಿಲ್ಲ, ಆದರೆ 124 ಎ ಪ್ರಕರಣಗಳನ್ನು ಸಮರ್ಥ ಅಧಿಕಾರಿ (ಎಸ್ಪಿ ಶ್ರೇಣಿ) ಶಿಫಾರಸು ಮಾಡಿದ ನಂತರವೇ ದಾಖಲಿಸಬೇಕು ಎಂದು ಸಾಲಿಸಿಟರ್ ಜನರಲ್ ಹೇಳಿದರು. ಅಲ್ಲದೆ ಬಾಕಿ ಉಳಿದಿರುವ ದೇಶದ್ರೋಹ ಪ್ರಕರಣಗಳನ್ನು ಪರಿಶೀಲಿಸಬಹುದು ಎಂದು ಹೇಳಿದರು. ಜೊತೆಗೆ 124A ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ, ಜಾಮೀನನ್ನು ಆದಷ್ಟು ಬೇಗ ಪರಿಗಣಿಸಬಹುದು ಎಂದು ಹೇಳಿದರು.
ಈ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಮೂರು ಪ್ರಮುಖ ವಿಷಯಗಳನ್ನು ಹೇಳಿದೆ. ಸದ್ಯ ಈ ಪ್ರಕರಣದಲ್ಲಿ ಯಾವುದೇ ಪ್ರಕರಣ ದಾಖಲಾಗುವುದಿಲ್ಲ. ಎರಡನೇಯದು ಬಾಕಿ ಪ್ರಕರಣಗಳಲ್ಲಿ ಈ ಸೆಕ್ಷನ್ ಅಡಿಯಲ್ಲಿ ದಾಖಲಾಗುವ ಪ್ರಕರಣಗಳನ್ನು ಕೋಲ್ಡ್ ಸ್ಟೋರೇಜ್ನಲ್ಲಿ ಇಡಲಾಗುತ್ತದೆ. ನ್ಯಾಯಾಲಯವು ಯಾವುದೇ ಮುಂದಿನ ಆದೇಶವನ್ನು ನೀಡುವವರೆಗೆ ಅಥವಾ ಸರ್ಕಾರವು ಅದರ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದಿರುವವರೆಗೆ ಈ ಎಲ್ಲಾ ಆದೇಶಗಳು ಜಾರಿಯಲ್ಲಿರುತ್ತವೆ ಎಂದಿದೆ.
ಬುಧವಾರ ಮಹತ್ವದ ನಿರ್ಧಾರವನ್ನು ನೀಡಿದ ಸುಪ್ರೀಂ ಕೋರ್ಟ್, ದೇಶದ್ರೋಹದ ಕಾನೂನಿನಡಿಯಲ್ಲಿ ಯಾವುದೇ ಹೊಸ ಪ್ರಕರಣದ ನೋಂದಣಿಗೆ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್ವಿ ರಾಮನ್ ಅವರ ಪೀಠ, ದೇಶದ್ರೋಹ ಕಾಯ್ದೆಯ ಸೆಕ್ಷನ್ 124 ಎ ಅನ್ನು ಮರುಪರಿಶೀಲಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವಾಗ, ಈ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಈ ನಿಬಂಧನೆಯನ್ನು ಬಳಸುವುದು ಸೂಕ್ತವಲ್ಲ ಎಂದು ಹೇಳಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications