ಬಿಜೆಪಿಯೇತರ ಆಡಳಿತದ ಏಳು ರಾಜ್ಯಗಳಿಂದ ಜಿಎಸ್ಟಿ ನಷ್ಟ ಪರಿಹಾರ ಬೇಡಿಕೆ
ನವದೆಹಲಿ, ಮೇ 27: ಜಿಎಸ್ಟಿ ಕೌನ್ಸಿಲ್ ಸಭೆ ಮೇ 28 ರಂದು ನಡೆಯಲಿದ್ದು ಇದಕ್ಕೂ ಮುಂಚಿತವಾಗಿ ರಾಜಸ್ಥಾನ ಸಚಿವ ಶಾಂತಿ ಕುಮಾರ್ ಧರಿವಾಲ್ ಆಯೋಜಿಸಿದ್ದ ಸಭೆಯಲ್ಲಿ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಹಣಕಾಸು ಸಚಿವರುಗಳು ಜಿಎಸ್ಟಿ ನಷ್ಟ ಪರಿಹಾರ ಬೇಡಿಕೆ ಮುಂದಿಟ್ಟಿದ್ದಾರೆ.
ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಆಡಳಿತವಿರುವ ಏಳು ರಾಜ್ಯಗಳು ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ರಾಜ್ಯಗಳಿಗೆ ತೆರಿಗೆ ನಷ್ಟವನ್ನು ಸರಿದೂಗಿಸಬೇಕು ಮತ್ತು ರಾಜ್ಯ ದೇಶೀಯ ಉತ್ಪನ್ನಗಳಿಗೆ ಹೆಚ್ಚುವರಿ ಸಾಲ ಮಿತಿಯನ್ನು ಒಟ್ಟು ಶೇ. 5 ರಷ್ಟು ಹೆಚ್ಚಿಸಬೇಕು ಎಂದು ಒತ್ತಾಯಿಸಿದೆ.
ಮೇ 28 ರಂದು ನಡೆಯಲಿರುವ ಜಿಎಸ್ಟಿ ಕೌನ್ಸಿಲ್ ಸಭೆಗೆ ಮುಂಚಿತವಾಗಿ ಬಿಜೆಪಿ ಆಡಳಿತವಿಲ್ಲದ ರಾಜ್ಯಗಳ ಹಣಕಾಸು ಸಚಿವರುಗಳು ರಾಜಸ್ಥಾನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಶಾಂತಿ ಕುಮಾರ್ ಧರಿವಾಲ್ ಆಯೋಜಿಸಿದ್ದ ಸಭೆಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಈ ರಾಜ್ಯಗಳು ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿದ್ದು ಜಿಎಸ್ಟಿ ನಷ್ಟ ಪರಿಹಾರ ಬೇಡಿಕೆಯನ್ನು ಎತ್ತಿಹಿಡಿದೆ. ಹಾಗೆಯೇ ಕೋವಿಡ್ ಸಾಂಕ್ರಾಮಿಕ ವಿರುದ್ಧ ಹೋರಾಡಲು ಖರೀದಿಸಲಾದ ಸರಕುಗಳ ಮೇಲಿನ ಎಲ್ಲಾ ತೆರಿಗೆಗಳನ್ನು ಮನ್ನಾ ಮಾಡಲು ಈ ಏಳು ರಾಜ್ಯಗಳು ಆಗ್ರಹಿಸಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜಸ್ಥಾನದ ಹಣಕಾಸು ಖಾತೆಯನ್ನು ಹೊಂದಿದ್ದಾರೆ. ಆದರೆ ಜಿಎಸ್ಟಿ ಕೌನ್ಸಿಲ್ನಲ್ಲಿ ರಾಜಸ್ಥಾನ ಸರ್ಕಾರವನ್ನು ಧರಿವಾಲ್ ಪ್ರತಿನಿಧಿಸಲಿದ್ದಾರೆ. ಈ ಹಿನ್ನೆಲೆ ಧರಿವಾಲ್ ಸಭೆ ಆಯೋಜಿಸಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಪರಿಣಾಮಕಾರಿಯಾಗಿ ತಮ್ಮ ಬೇಡಿಕೆಯನ್ನು ಪ್ರಸ್ತಾಪಿಸಲು ಈ ಸಭೆಯಲ್ಲಿ ತೀರ್ಮಾನಿಸಿದ್ದಾರೆ.
"ಕೇಂದ್ರ ಸರ್ಕಾರವು ಸಹಕಾರಿ ಫೆಡರಲಿಸಂನ ಮನೋಭಾವವನ್ನು ಗೌರವಿಸಬೇಕು. ಜಿಎಸ್ಟಿ ಆದಾಯ ನಷ್ಟಗಳಿಗೆ ಪರಿಹಾರವನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಬೇಕು. ಇದು ಸಾಂಕ್ರಾಮಿಕ ರೋಗದಿಂದ ಉಂಟಾಗುವ ಕೆಲವು ತೆರಿಗೆ ನಷ್ಟವನ್ನು ತಗ್ಗಿಸಲು ರಾಜ್ಯಗಳಿಗೆ ಅನುವು ಮಾಡಿಕೊಡುತ್ತದೆ" ಎಂದು ಧರಿವಾಲ್ ಹೇಳಿದ್ದಾರೆ. ಹಾಗೆಯೇ ಪರಿಹಾರದ ನಿಯಮವನ್ನು 2022 ಮೀರಿ ಐದು ವರ್ಷಗಳವರೆಗೆ ವಿಸ್ತರಿಸಬೇಕು ಎಂದು ಕೂಡಾ ಒತ್ತಾಯಿಸಿದ್ದಾರೆ.
ಧರಿವಾಲ್ ಜೊತೆಗೆ ಹಣಕಾಸು ಸಚಿವರಾದ ಅಮಿತ್ ಮಿತ್ರಾ (ಪಶ್ಚಿಮ ಬಂಗಾಳ), ಮನ್ಪ್ರೀತ್ ಸಿಂಗ್ ಬಾದಲ್ (ಪಂಜಾಬ್), ರಾಮೇಶ್ವರ ಒರಾನ್ (ಜಾರ್ಖಂಡ್), ಟಿ.ಎಸ್. ಸಿಂಗ್ ಡಿಯೋ (ಛತ್ತೀಸ್ಗಢ), ಕೆ.ಎನ್. ಬಾಲಗೋಪಾಲ್ (ಕೇರಳ) ಮತ್ತು ಪಿ.ಟಿ.ಆರ್. ಪಳನಿವೇಲ್ ತ್ಯಾಗರಾಜನ್ (ತಮಿಳುನಾಡು) ಸಭೆಯಲ್ಲಿ ಭಾಗವಹಿಸಿದ್ದರು.
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications