ಅತ್ಯಾಚಾರ ಪ್ರಕರಣ: ತರುಣ್ ತೇಜ್ಪಾಲ್ ಗೆ ಜಾಮೀನು
ನವದೆಹಲಿ, ಜು.1: ತೆಹೆಲ್ಕಾ ಸಂಸ್ಥೆಯ ಸಹದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಪತ್ರಿಕೆಯ ಸ್ಥಾಪಕ, ಮಾಜಿ ಸಂಪಾದಕ ತರುಣ್ ತೇಜಪಾಲ್ ಅವರಿಗೆ ಮಂಗಳವಾರ ಮಧ್ಯಾಹ್ನ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ತರುಣ್ ತೇಜ್ಪಾಲ್ ಅವರನ್ನು ಅತ್ಯಾಚಾರಿ ಎಂದು ಹೆಸರಿಸಿ ವಿರುದ್ಧ ಗೋವಾ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಮಂಗಳವಾರ ತರುಣ್ ತೇಜ್ಪಾಲ್ ಸಲ್ಲಿಸಿದ್ದ ಜಾಮೀನು ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜಸ್ಟೀಸ್ ವಿಕ್ರಮ್ ಜೀತ್ ಸಿಂಗ್ ಹಾಗೂ ಜಸ್ಟೀಸ್ ಎಸ್.ಕೆ ಸಿಂಗ್ ಅವರಿದ್ದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದ್ದಾರೆ.
ಆದರೆ, 51 ವರ್ಷದ ತರುಣ್ ಅವರ ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕಿದೆ. ಸಾಕ್ಷಿಗಳಿಗೆ ಬೆದರಿಕೆ, ಸಾಕ್ಷಿ ನಾಶಕ್ಕೆ ಯತ್ನ ಯಾವುದೇ ಒಂದು ಷರತ್ತನ್ನು ಮೀರಿ ನಡೆದರೆ ತಕ್ಷಣವೇ ಜೈಲುಶಿಕ್ಷೆಗೊಳಪಡಬೇಕಾಗುತ್ತದೆ ಎಂದು ಎಚ್ಚರಿಕೆ ವಿಧಿಸಲಾಗಿದೆ.
ಮಾಜಿ ಪತ್ರಕರ್ತ ತರುಣ್ ತೇಜ್ಪಾಲ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಎಂಟು ತಿಂಗಳಿನಲ್ಲಿ ಇತ್ಯರ್ಥಗೊಳಿಸುವಂತೆ ಕೆಳಹಂತದ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಕಳೆದ ಶುಕ್ರವಾರ ತೇಜ್ಪಾಲ್ ಗೆ ನೀಡಲಾಗಿದ್ದ ಮಧ್ಯಂತರ ಜಾಮೀನಿನ ಅವಧಿಯನ್ನು ಜುಲೈ.1ರ ತನಕ ವಿಸ್ತರಿಸಲಾಗಿತ್ತು.

ಮೇ.19ರಂದು ತೇಜ್ಪಾಲ್ ಗೆ ಮೂರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಝೂರು ಮಾಡಲಾಗಿತ್ತು. ತಮ್ಮ ತಾಯಿಯ ಅಂತ್ಯಸಂಸ್ಕಾರ ನೆರವೇರಿಸಲು ತೇಜ್ಪಾಲ್ ಗೆ ಅನುಮತಿ ನೀಡಲಾಗಿತ್ತು.
ಗೋವಾದ ಗ್ರ್ಯಾಂಡ್ ಹಯಾತ್ ಪಂಚತಾರ ಹೋಟೆಲೊಂದರಲ್ಲಿ ಆಯೋಜಿಸಲಾಗಿದ್ದ ತೆಹಲ್ಕಾ ಪತ್ರಿಕೆಯ ಕಾರ್ಯಕ್ರಮದ ವೇಳೆ ಕಿರಿಯ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಳೆದ ನವೆಂಬರ್ 30ರಂದು ತೇಜ್ಪಾಲ್ರನ್ನು ಗೋವಾ ಪೊಲೀಸರು ಬಂಧಿಸಿದ್ದರು.
ತೆಹೆಲ್ಕಾ ಸಂಸ್ಥೆಯ ಕಿರಿಯ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ ಬಂಧನಕ್ಕೊಳಗಾಗಿದ್ದ ತೆಹೆಲ್ಕಾ ಮಾಜಿ ಸಂಪಾದಕ ತರುಣ್ ತೇಜಪಾಲ್ ಅವರ ಪುರುಷತ್ವ ಪರೀಕ್ಷೆಯನ್ನು ನಡೆಸಲಾಗಿತ್ತು. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಡಿಎನ್ಎ ಹಾಗೂ ಪುರುಷತ್ವ ಪರೀಕ್ಷೆ ನಡೆಸಲಾಗಿದ್ದು,'ಪಾಸಿಟಿವ್' ಎಂದು ಫಲಿತಾಂಶ ಬಂದಿದೆ ಎಂದು ತಿಳಿದು ಬಂದಿತ್ತು.
ತೇಜಪಾಲ್ ಅವರ ಮೇಲೆ ಐಪಿಸಿ ಸೆಕ್ಷನ್ 354,354 ಎ, 376, 376(2) (ಕೆ), 376(2) (ಎಫ್) ಅನ್ವಯ ಪ್ರಕರಣ ದಾಖಲಾಗಿತ್ತು. ಫೆಬ್ರವರಿ ತಿಂಗಳಿನಲ್ಲಿ ಗೋವಾ ಪೊಲೀಸರು ಅರೋಪಪಟ್ಟಿ ಸಲ್ಲಿಸಿದ್ದರು.[ತೆಹೆಲ್ಕಾ ತೇಜಪಾಲ್ ರೇಪಿಸ್ಟ್: ಆರೋಪಪಟ್ಟಿ](ಪಿಟಿಐ)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications