ಶಾಹಿನ್ ಬಾಗ್-ಅಮಿತ್ ಶಾ ನಿವಾಸದತ್ತ ಸಿಎಎ ವಿರೋಧಿ ಹೋರಾಟಗಾರರು
ನವದೆಹಲಿ, ಫೆಬ್ರವರಿ.16: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನೂರಾರು ಮಹಿಳಾ ಹೋರಾಟಗಾರರು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದತ್ತ ಹೊರಟಿದ್ದಾರೆ.
ಕಳೆದ ಗುರುವಾರ ಮಾತನಾಡಿದ್ದ ಅಮಿತ್ ಶಾ, ಪೌರತ್ವ ತಿದ್ದುಪಡಿ ವಿಚಾರದಲ್ಲಿ ಕೇಂದ್ರ ಸರ್ಕಾರವು ಯಾವುದೇ ರೀತಿ ರಾಜಿ ಮಾಡಿಕೊಳ್ಳುವುದಿಲ್ಲ. ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ. ನಿಮಗೆ ಅನುಮಾನಗಳು ಇದ್ದಲ್ಲಿ ನೇರವಾಗಿ ನಮ್ಮ ಮನೆಗೆ ಬನ್ನಿ, ನಾನೇ ಉತ್ತರ ನೀಡುತ್ತೇನೆ ಎಂದು ಆಹ್ವಾನ ನೀಡಿದ್ದರು.
ಕೇಂದ್ರ ಸಚಿವ ಅಮಿತ್ ಶಾ ನೀಡಿದ ಆಹ್ವಾನದ ಹಿನ್ನೆಲೆಯಲ್ಲಿ ಶಾಹಿನ್ ಬಾಗ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನೂರಾರು ಮಹಿಳಾ ಪ್ರತಿಭಟನಾಕಾರರು ಭಾನುವಾರ ಗೃಹ ಸಚಿವರ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

500 ಮೀಟರ್ ದೂರದಲ್ಲೇ ಮೆರವಣಿಗೆಗೆ ತಡೆ:
ಕೇಂದ್ರ ಸಚಿವ ಅಮಿತ್ ಶಾ ನಿವಾಸದತ್ತೆ ಹೊರಟ ಪ್ರತಿಭಟನಾ ಮೆರವಣಿಗೆಯನ್ನು ಅವರ ನಿವಾಸದಿಂದ 500 ಮೀಟರ್ ದೂರದಲ್ಲೇ ಪೊಲೀಸರು ತಡೆದಿದ್ದಾರೆ. ಮುಖ್ಯವಾಗಿ ಕೆಲವರಿಗೆ ಬೇಕಿದ್ದಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಾಗುತ್ತದೆ. ಅಮಿತ್ ಶಾ ಅವರ ನಿವಾಸಕ್ಕೆ ತೆರಳಲು ಒಂದು ತಂಡಕ್ಕೆ ಅನುಮತಿ ನೀಡಲು ಒಪ್ಪಿಗೆ ಸೂಚಿಸಲಾಯಿತು. ಆದರೆ, ಪ್ರತಿಭಟನಾನಿರತರೆಲ್ಲ ಒಟ್ಟಾಗಿ ತೆರಳುವುದಾಗಿ ಪಟ್ಟು ಹಿಡಿದಿದ್ದರಿಂದ ಅವರನ್ನು ತಡೆ ಹಿಡಿಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯಾವುದೇ ಚುನಾವಣೆಯಾಗಲಿ, ಒಂದು ವಿಚಾರದ ಮೇಲಷ್ಟೇ ತೀರ್ಮಾನವಾಗುವುದಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರವು ಇಂದಿಗೂ ತನ್ನ ನಿಲುವಿಗೆ ಬದ್ಧವಾಗಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಷ್ಟಾದರೂ ಪ್ರತಿಭಟನೆ ಮಾಡಿಕೊಳ್ಳಲಿ. ಕೇಂದ್ರ ಸರ್ಕಾರ ಮಾತ್ರ ಮುಂದಿಟ್ಟ ಹೆಜ್ಜೆಯನ್ನು ಹಿಂದೆ ಇಡುವುದಿಲ್ಲ ಎಂದು ಅಮಿತ್ ಶಾ ಗುಡುಗಿದ್ದರು.
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿಚಾರದಲ್ಲಿ ಕೇಂದ್ರ ಸರ್ಕಾರವು ಯಾವುದೇ ರಾಜಿಗೆ ಸಿದ್ಧವಿಲ್ಲ. ಸಿಎಎ ವಿರುದ್ಧ ಚರ್ಚೆ ನಡೆಸಲು ಯಾರೇ ಬರಲಿ. ನಮ್ಮ ಕಚೇರಿಯಲ್ಲೇ ಚರ್ಚೆಗೆ 3 ದಿನಗಳಲ್ಲೇ ಅವಕಾಶ ಕಲ್ಪಿಸಿ ಕೊಡುತ್ತೇವೆ. ಅವರ ಅನುಮಾನಗಳಿಗೆ ನಾವೇ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದರು.
ಇನ್ನು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಾಗಿನಿಂದ ಈವರೆಗೂ 74 ಮಂದಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಪಾಕಿಸ್ತಾನದಿಂದ ವಲಸೆ ಬಂದಿದ್ದ 74 ಮಂದಿಗೆ ಭಾರತೀಯ ಪೌರತ್ವವನ್ನು ಸಿಎಎ ಅಡಿಯಲ್ಲಿ ನೀಡಲಾಗಿದೆ. ಕಳೆದ 2019ರ ಡಿಸೆಂಬರ್.12ರಂದು ಸಂಸತ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿತ್ತು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications