ಬಿಜೆಪಿ ಸೇರ್ಪಡೆಯಾದ ಕೆಲವೇ ಗಂಟೆಯಲ್ಲಿ ಶಹೀನ್ ಬಾಗ್ ಶೂಟರ್ ಉಚ್ಚಾಟನೆ
ನವದೆಹಲಿ, ಡಿಸೆಂಬರ್ 30: ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ವೇಳೆ ದೆಹಲಿಯ ಶಹೀನ್ ಬಾಗ್ನಲ್ಲಿ ಗುಂಡು ಹಾರಿಸುವ ಮೂಲಕ ಕುಖ್ಯಾತನಾಗಿದ್ದ ಕಪಿಲ್ ಗುಜ್ಜರ್ ಎಂಬಾತನನ್ನು ಆತನ 'ಹಿಂದುತ್ವ' ಅಜೆಂಡಾಗಳ ಕಾರಣ ಪಕ್ಷಕ್ಕೆ ಸೇರಿಸಿಕೊಂಡಿದ್ದ ಬಿಜೆಪಿ, ಕೆಲವೇ ಗಂಟೆಗಳಲ್ಲಿ ಉಚ್ಚಾಟನೆ ಮಾಡಿದೆ.
ಶಹೀನ್ ಬಾಗ್ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳದ ಸಮೀಪ ಫೆಬ್ರವರಿಯಲ್ಲಿ ಗುಂಡು ಹಾರಿಸುವ ಮೂಲಕ ಕಪಿಲ್ ಗುಜ್ಜರ್ ಸುದ್ದಿಯಾಗಿದ್ದ. ಘಟನೆ ನಡೆದ ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಆತ ಬಿಡುಗಡೆಯಾಗಿದ್ದ.
ಪಕ್ಷದ ಘಾಜಿಯಾಬಾದ್ ಪದಾಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಆತ ಬಿಜೆಪಿ ಸೇರ್ಪಡೆಯಾಗಿದ್ದ. ಆದರೆ ಈ ಬೆಳವಣಿಗೆಯ ಮಾಧ್ಯಮ ವರದಿಗಳು ಪಕ್ಷದ ವರಿಷ್ಠರು ಹಾಗೂ ಹಿರಿಯ ನಾಯಕರ ಗಮನಕ್ಕೆ ಬರುತ್ತಿದ್ದಂತೆಯೇ ಕೆಲವೇ ಗಂಟೆಗಳಲ್ಲಿ ಆತನನ್ನು ಉಚ್ಚಾಟನೆ ಮಾಡಲಾಗಿದೆ.

ಘಾಜಿಯಾಬಾದ್ನ ಪದಾಧಿಕಾರಿಗಳಿಗೆ ಛೀಮಾರಿ ಹಾಕಿರುವ ಹಿರಿಯ ನಾಯಕತ್ವ, ಇದಕ್ಕೆ ವಿವರಣೆ ನೀಡುವಂತೆ ಸೂಚನೆ ನೀಡಿದೆ. ಕಪಿಲ್ ಗುಜ್ಜರ್ನ ಹಿನ್ನೆಲೆ ತನಗೆ ತಿಳಿದಿರಲಿಲ್ಲ. ತಪ್ಪಾಗಿ ಆತನನ್ನು ಪಕ್ಷಕ್ಕೆ ಸ್ವಾಗತಿಸಿದ್ದಾಗಿ ಘಾಜಿಯಾಬಾದ್ ಜಿಲ್ಲಾ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.
'ಬಹುಜನ ಸಮಾಜ ಪಕ್ಷದಿಂದ ಕೆಲವು ಜನರು ಬಿಜೆಪಿ ಸೇರ್ಪಡೆಯಾಗಿದ್ದರು. ಅವರಲ್ಲಿ ಕಪಿಲ್ ಕೂಡ ಒಬ್ಬ. ಆತ ವಿವಾದಾತ್ಮಕ ಶಹೀನ್ ಬಾಗ್ ಘಟನೆಯಲ್ಲಿ ಭಾಗಿಯಾಗಿದ್ದ ಎನ್ನುವುದೇ ನಮಗೆ ತಿಳಿದಿರಲಿಲ್ಲ. ಅದು ತಿಳಿಯುತ್ತಿದ್ದಂತೆಯೇ ತಕ್ಷಣದಿಂದ ಅನ್ವಯವಾಗುವಂತೆ ಆತನ ಸೇರ್ಪಡೆಯನ್ನು ರದ್ದುಗೊಳಿಸಲಾಗಿದೆ' ಎಂದು ಘಾಜಿಯಾಬಾದ್ ಬಿಜೆಪಿ ಮುಖ್ಯಸ್ಥ ಸಂಜೀವ್ ಶರ್ಮಾ ಹೇಳಿದ್ದಾರೆ.
ಇದಕ್ಕೂ ಮುನ್ನ ಸುದ್ದಿಗಾರರೊಂದಗೆ ಮಾತನಾಡಿದ್ದ ಕಪಿಲ್ ಗುಜ್ಜರ್, ಬಿಜೆಪಿಯು ಹಿಂದುತ್ವಕ್ಕಾಗಿ ಕೆಲಸ ಮಾಡುವುದರಿಂದ ಪಕ್ಷವನ್ನು ಸೇರಿಕೊಂಡಿರುವುದಾಗಿ ಆತ ತಿಳಿಸಿದ್ದ.
ಸಿಎಎ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕಪಿಲ್ ಗುಜ್ಜರ್ ಅಲಿಯಾಸ್ ಕಪಿಲ್ ಬೈಸಲಾ, 'ನಮ್ಮ ದೇಶವನ್ನು ಹಿಂದೂಗಳು ಮಾತ್ರವೇ ಆಳುತ್ತಾರೆ, ಬೇರೆ ಯಾರೂ ಆಳುವುದಿಲ್ಲ' ಎಂದು ಹೇಳಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications