ಬಿಜೆಪಿ ಸೇರ್ಪಡೆಯಾದ ಕೆಲವೇ ಗಂಟೆಯಲ್ಲಿ ಶಹೀನ್ ಬಾಗ್ ಶೂಟರ್ ಉಚ್ಚಾಟನೆ
ನವದೆಹಲಿ, ಡಿಸೆಂಬರ್ 30: ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ವೇಳೆ ದೆಹಲಿಯ ಶಹೀನ್ ಬಾಗ್ನಲ್ಲಿ ಗುಂಡು ಹಾರಿಸುವ ಮೂಲಕ ಕುಖ್ಯಾತನಾಗಿದ್ದ ಕಪಿಲ್ ಗುಜ್ಜರ್ ಎಂಬಾತನನ್ನು ಆತನ 'ಹಿಂದುತ್ವ' ಅಜೆಂಡಾಗಳ ಕಾರಣ ಪಕ್ಷಕ್ಕೆ ಸೇರಿಸಿಕೊಂಡಿದ್ದ ಬಿಜೆಪಿ, ಕೆಲವೇ ಗಂಟೆಗಳಲ್ಲಿ ಉಚ್ಚಾಟನೆ ಮಾಡಿದೆ.
ಶಹೀನ್ ಬಾಗ್ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳದ ಸಮೀಪ ಫೆಬ್ರವರಿಯಲ್ಲಿ ಗುಂಡು ಹಾರಿಸುವ ಮೂಲಕ ಕಪಿಲ್ ಗುಜ್ಜರ್ ಸುದ್ದಿಯಾಗಿದ್ದ. ಘಟನೆ ನಡೆದ ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಆತ ಬಿಡುಗಡೆಯಾಗಿದ್ದ.
ಪಕ್ಷದ ಘಾಜಿಯಾಬಾದ್ ಪದಾಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಆತ ಬಿಜೆಪಿ ಸೇರ್ಪಡೆಯಾಗಿದ್ದ. ಆದರೆ ಈ ಬೆಳವಣಿಗೆಯ ಮಾಧ್ಯಮ ವರದಿಗಳು ಪಕ್ಷದ ವರಿಷ್ಠರು ಹಾಗೂ ಹಿರಿಯ ನಾಯಕರ ಗಮನಕ್ಕೆ ಬರುತ್ತಿದ್ದಂತೆಯೇ ಕೆಲವೇ ಗಂಟೆಗಳಲ್ಲಿ ಆತನನ್ನು ಉಚ್ಚಾಟನೆ ಮಾಡಲಾಗಿದೆ.

ಘಾಜಿಯಾಬಾದ್ನ ಪದಾಧಿಕಾರಿಗಳಿಗೆ ಛೀಮಾರಿ ಹಾಕಿರುವ ಹಿರಿಯ ನಾಯಕತ್ವ, ಇದಕ್ಕೆ ವಿವರಣೆ ನೀಡುವಂತೆ ಸೂಚನೆ ನೀಡಿದೆ. ಕಪಿಲ್ ಗುಜ್ಜರ್ನ ಹಿನ್ನೆಲೆ ತನಗೆ ತಿಳಿದಿರಲಿಲ್ಲ. ತಪ್ಪಾಗಿ ಆತನನ್ನು ಪಕ್ಷಕ್ಕೆ ಸ್ವಾಗತಿಸಿದ್ದಾಗಿ ಘಾಜಿಯಾಬಾದ್ ಜಿಲ್ಲಾ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.
'ಬಹುಜನ ಸಮಾಜ ಪಕ್ಷದಿಂದ ಕೆಲವು ಜನರು ಬಿಜೆಪಿ ಸೇರ್ಪಡೆಯಾಗಿದ್ದರು. ಅವರಲ್ಲಿ ಕಪಿಲ್ ಕೂಡ ಒಬ್ಬ. ಆತ ವಿವಾದಾತ್ಮಕ ಶಹೀನ್ ಬಾಗ್ ಘಟನೆಯಲ್ಲಿ ಭಾಗಿಯಾಗಿದ್ದ ಎನ್ನುವುದೇ ನಮಗೆ ತಿಳಿದಿರಲಿಲ್ಲ. ಅದು ತಿಳಿಯುತ್ತಿದ್ದಂತೆಯೇ ತಕ್ಷಣದಿಂದ ಅನ್ವಯವಾಗುವಂತೆ ಆತನ ಸೇರ್ಪಡೆಯನ್ನು ರದ್ದುಗೊಳಿಸಲಾಗಿದೆ' ಎಂದು ಘಾಜಿಯಾಬಾದ್ ಬಿಜೆಪಿ ಮುಖ್ಯಸ್ಥ ಸಂಜೀವ್ ಶರ್ಮಾ ಹೇಳಿದ್ದಾರೆ.
ಇದಕ್ಕೂ ಮುನ್ನ ಸುದ್ದಿಗಾರರೊಂದಗೆ ಮಾತನಾಡಿದ್ದ ಕಪಿಲ್ ಗುಜ್ಜರ್, ಬಿಜೆಪಿಯು ಹಿಂದುತ್ವಕ್ಕಾಗಿ ಕೆಲಸ ಮಾಡುವುದರಿಂದ ಪಕ್ಷವನ್ನು ಸೇರಿಕೊಂಡಿರುವುದಾಗಿ ಆತ ತಿಳಿಸಿದ್ದ.
ಸಿಎಎ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕಪಿಲ್ ಗುಜ್ಜರ್ ಅಲಿಯಾಸ್ ಕಪಿಲ್ ಬೈಸಲಾ, 'ನಮ್ಮ ದೇಶವನ್ನು ಹಿಂದೂಗಳು ಮಾತ್ರವೇ ಆಳುತ್ತಾರೆ, ಬೇರೆ ಯಾರೂ ಆಳುವುದಿಲ್ಲ' ಎಂದು ಹೇಳಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications