ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮ್ಮ ನಾಪತ್ತೆ ವದಂತಿಗೆ ಸ್ಪಷ್ಟನೆ ನೀಡಿದ ಶಶಿ ತರೂರ್

|
Google Oneindia Kannada News

ನವದೆಹಲಿ, ನವೆಂಬರ್ 07: ಶಶಿ ತರೂರ್ ಸಾರ್ವಜನಿಕ ಬದುಕಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳದೆ, ನಾಪತ್ತೆಯಾಗಿದ್ದಾರೆ ಎಂಬ ವದಂತಿಗೆ ಸಂಬಂಧಿಸಿದಂತೆ ಸ್ವತಃ ತರೂರ್ ಸ್ಪಷ್ಟನೆ ನೀಡಿದ್ದಾರೆ.

ಈ ವದಂತಿ ಎಲ್ಲವೂ ಸುಳ್ಳು. ನಾನು ನಾಪತ್ತೆಯಾಗುವ ಅಗತ್ಯವೇನಿದೆ? ಕೆಲವು ಆರೋಗ್ಯ ಸಮಸ್ಯೆಯಿಂದಾಗಿ ನಾನು ಕೆಲದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಬೇಕಾಗಿ ಬಂತು. ಆದ್ದರಿಂದ ನಾನು ಸಾರ್ವಜನಿಕ ಬದುಕಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಅವರು ಹೇಳಿದರು.

ಮೋದಿಯನ್ನು ಚೇಳು ಎಂದಿದ್ದ ತರೂರ್ ವಿರುದ್ಧ ಮಾನನಷ್ಟ ಮೊಕದ್ದಮೆಮೋದಿಯನ್ನು ಚೇಳು ಎಂದಿದ್ದ ತರೂರ್ ವಿರುದ್ಧ ಮಾನನಷ್ಟ ಮೊಕದ್ದಮೆ

Shashi Taroor clarifies his disappearance rumours

ಇತ್ತೀಚೆಗೆ ಶಶಿ ತರೂರ್ ನೀಡಿದ ಕೆಲ ವಿವಾದಾಸ್ಪದ ಹೇಳಿಕೆಯಿಂದಾಗಿ ಕಾಂಗ್ರೆಸ್ ಪಕ್ಷ ಇರಿಸುಮುರಿಸು ಅನುಭವಿಸುವಂತಾಗಿತ್ತು. ಆ ಕಾರಣದಿಂದ ಪಕ್ಷದ ಹಿರಿಯ ನಾಯಕರ ಒತ್ತಡದಿಂದಲೇ ಶಶಿ ತರೂರ್ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುತ್ತಿಲ್ಲವೇ ಎಂಬ ಪ್ರಶ್ನೆ ಎದುರಾಗಿತ್ತು. ಅವರು ಯಾವ ಫೋನ್ ಕರೆಗಳನ್ನೂ ಸ್ವೀಕರಿಸುತ್ತಿರಲಿಲ್ಲ.

ರಾಹುಲ್ ಗಾಂಧಿಗೆ ಈ ಬಾರಿಯೂ ಪ್ರಧಾನಿ ಯೋಗವಿಲ್ಲ! ಯಾಕಂತೀರಾ?ರಾಹುಲ್ ಗಾಂಧಿಗೆ ಈ ಬಾರಿಯೂ ಪ್ರಧಾನಿ ಯೋಗವಿಲ್ಲ! ಯಾಕಂತೀರಾ?

ಪ್ರಧಾನಿ ನರೇಂದ್ರ ಮೋದಿ ಅವರನ್ನು, 'ಶಿವಲಿಂಗದ ಮೇಲಿನ ಚೇಳಿನ ಹಾಗೆ ಮೋದಿ. ಅದನ್ನು ಕೈಯಿಂದ ಹೊಡೆಯುವುದೋ ಕಷ್ಟ, ಚಪ್ಪಲಿಯಿಂದ ಹೊಡೆಯುವ ಹಾಗೆಯೂ ಇಲ್ಲ' ಎಂಬ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದರು.

'ಸ್ಟಾಚ್ಯೂ ಪಾಲಿಟಿಕ್ಸ್! ಪಟೇಲ್ ಗೆ ಸಿಕ್ಕ ಗೌರವ ಗುರು ಗಾಂಧಿಗೆ ಯಾಕಿಲ್ಲ?''ಸ್ಟಾಚ್ಯೂ ಪಾಲಿಟಿಕ್ಸ್! ಪಟೇಲ್ ಗೆ ಸಿಕ್ಕ ಗೌರವ ಗುರು ಗಾಂಧಿಗೆ ಯಾಕಿಲ್ಲ?'

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಅಭ್ಯರ್ಥಿಯಲ್ಲ. ಪಿ.ಚಿದಂಬರಂ, ಪ್ರಣಬ್ ಮುಖರ್ಜಿ ಮುಂತಾದ ಹಲವು ಸಮರ್ಥರು ಇದ್ದಾರೆ. ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂದು ಮೈತ್ರಿಕೂಟ ನಿರ್ಧರಿಸಲಿದೆ ಎಂಬ ತರೂರ್ ಹೇಳಿಕೆಯಿಂದಲೂ ಅವರು ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿರಬಹುದು!

English summary
Congress leader Shashi Taroor issued a clarification over his disappearance from public eye, stating that he has been bed ridden and recovering from some health issues
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X