ಟಿಪ್ಪುಗೆ ಸಲಾಂ ಎಂದ ಇಮ್ರಾನ್ ಖಾನ್ ಗೆ ಬಹುಪರಾಕ್ ಎಂದ ಶಶಿ ತರೂರ್!
ನವದೆಹಲಿ, ಮೇ 07: ವಿವಾದಾತ್ಮಕ ವ್ಯಕ್ತಿಯಾದ ಟಿಪು ಸುಲ್ತಾನ್ ನನ್ನು 'ಮಹಾನ್ ವೀರ' ಎಂದು ಕರೆದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ನಡೆಯನ್ನು ಶಶಿ ತರೂರ್ ಸ್ವಾಗತಿಸಿದ್ದಾರೆ.
ಈ ಮೂಲಕ ಅವರು ಹಲವು ಟಿಪು ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 4 ರಂದು ಟಿಪ್ಪು ಸುಲ್ತಾನ್ ನಿಧನರಾದ ದಿನವಾದ್ದರಿಂದ ಈ ದಿನವನ್ನು ಇಮ್ರಾನ್ ಖಾನ್ ಟ್ವಿಟ್ಟರ್ ನಲ್ಲಿ ಸ್ಮರಿಸಿದ್ದರು. "ಇಂದು ಟಿಪು ಸುಲ್ತಾನ್ ಅವರು ನಿಧನರಾದ ದಿನ. ಅವರೊಬ್ಬ ಮಹಾನ್ ನಾಯಕ. ಗುಲಾಮರಾಗಿ ಬದುಕುವ ಇಷ್ಟವಿಲ್ಲದೆ, ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ಪಣವಾಗಿಟ್ಟ ಧೀಮಂತ ನಾಯಕ ಆತ" ಎಂದು ಖಾನ್ ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದ ಶಶಿ ತರೂರ್, "ಇಮ್ರಾನ್ ಖಾನ್ ಅವರ ಬಗ್ಗೆ ನಾನು ಹೆಮ್ಮೆಯಿಂದ ಒಂದು ವಿಷಯ ಹೇಳಬಲ್ಲೆ. ಅವರು ಭಾರತೀಯ ಉಪಖಂಡಗಳ ಇತಿಹಾಸವನ್ನು ಅತ್ಯಂತ ಆಳವಾಗಿ ಅಧ್ಯಯನ ಮಾಡಿದ್ದಾರೆ" ಎಂದು ಖಾನ್ ಅವರನ್ನು ಹೊಗಳಿದ್ದರು.

ಪ್ರತಿ ವರ್ಷ ನವೆಂಬರ್ 10 ರಂದು ಟಿಪು ಜಯಂತಿ ಆಚರಿಸುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಕರ್ನಾಟಕದಲ್ಲಿ ಸಾಕಷ್ಟು ಪ್ರತಿಭಟನೆ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications