ಕೊಲೆ ಆರೋಪಿ ಎಂದಿದ್ದಕ್ಕೆ ರವಿಶಂಕರ್ಗೆ ಲೀಗಲ್ ನೋಟಿಸ್ ನೀಡಿದ ಶಶಿ ತರೂರ್
ನವದೆಹಲಿ, ನವೆಂಬರ್ 1: ತಮ್ಮನ್ನು ಕೊಲೆ ಆರೋಪಿ ಎಂದು ಕರೆದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬೇಷರತ್ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ.
'ಪತ್ನಿ ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣದಲ್ಲಿ ಶಶಿ ತರೂರ್ ಅವರ ವಿರುದ್ಧದ ಕ್ರಿಮಿನಲ್ ಕೇಸ್ಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಮಾಡಿರುವ ಆರೋಪದಲ್ಲಿ ಹತ್ಯೆ ಎಂದು ಪರಿಗಣಿಸಿಲ್ಲ ಮತ್ತು ಅವರ ವಿರುದ್ಧ ಕೋರ್ಟ್ ದೋಷಾರೋಪ ಇನ್ನೂ ನಿಗದಿಪಡಿಸಿಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿಸಿದೆ ಎಂದು ತರೂರ್ ಅವರ ವಕೀಲ ಸೂರಜ್ ಕೃಷ್ಣ ಅವರು ರವಾನಿಸಿರುವ ಲೀಗಲ್ ನೋಟಿಸ್ನಲ್ಲಿ ಹೇಳಲಾಗಿದೆ.
ಶಶಿ ತರೂರ್ ವಿರುದ್ಧ ಪೊಲೀಸರು ಸಲ್ಲಿಸಿರುವ ಚಾರ್ಜ್ಷೀಟ್ನಲ್ಲಿಯೂ ಕೊಲೆಯ ಯಾವ ಆರೋಪವೂ ಇಲ್ಲ. ತರೂರ್ ಅವರನ್ನು ಕೊಲೆ ಆರೋಪಿ ಎಂದು ಚಾರ್ಜ್ಷೀಟ್ನಲ್ಲಿ ಹೇಳಲಾಗಿದೆ ಎಂಬಂತಹ ನಿಮ್ಮ ಹೇಳಿಕೆ ಬೇರೆ ಉದ್ದೇಶಗಳನ್ನು ಹೊಂದಿರುವಂತಿದೆ ಎಂದು ನೋಟಿಸ್ ಹೇಳಿದೆ.

ರವಿಶಂಕರ್ ಪ್ರಸಾದ್ ಅವರು ನನ್ನ ವಿರುದ್ಧ ಮಾಡಿರುವ ಸುಳ್ಳು, ಕಟ್ಟುಕಥೆಯ ಮತ್ತು ಮಾನಹಾನಿಕರ ಹೇಳಿಕೆಯನ್ನು ಇನ್ನೂ ಹಿಂದಕ್ಕೆ ಪಡೆಯದ ಕಾರಣ ನೋಟಿಸ್ ನೀಡಿದ್ದೇನೆ. ಭಾರತದ ಕಾನೂನು ಸಚಿವರು ತಮ್ಮ ರಾಜಕೀಯ ವಿರೋಧಿ ವಿರುದ್ಧ ಕೊಲೆ ಪ್ರಕರಣವನ್ನು ಆರೋಪಿಸಿದರೆ ನ್ಯಾಯಮತ್ತು ಪ್ರಜಾಪ್ರಭುತ್ವಕ್ಕೆ ಯಾವ ಭರವಸೆ ಉಳಿಯುತ್ತದೆ? ಎಂದು ತರೂರ್ ಪ್ರಶ್ನಿಸಿದ್ದಾರೆ.

ಕಾನೂನಿನ ಅಡಿಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಲು ಯೋಗ್ಯವಾದಂತಹ ಮಾನಹಾನಿಯ ಅಪರಾಧವನ್ನು ಎಸಗಿರುವುದು ಸ್ಪಷ್ಟವಾಗಿದೆ. ಅವರು ನೀಡಿರುವ ಹೇಳಿಕೆಯ ವಿಡಿಯೊ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಬೇಕು ಎಂದು ನೋಟಿಸ್ನಲ್ಲಿ ಒತ್ತಾಯಿಸಲಾಗಿದೆ.
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ರವಿಶಂಕರ್ ಪ್ರಸಾದ್ ಅವರು ಶಶಿ ತರೂರ್ ಅವರನ್ನು ಕೊಲೆ ಆರೋಪಿ ಎಂದು ಕರೆದಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications