ದೆಹಲಿ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶೀಲಾ ದೀಕ್ಷಿತ್ ಆಯ್ಕೆ
ನವದೆಹಲಿ, ಜನವರಿ 10: ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ(ಡಿಪಿಸಿಸಿ) ಅಧ್ಯಕ್ಷೆಯಾಗಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಆಯ್ಕೆಯಾಗಿದ್ದಾರೆ. ಅಜಯ್ ಮಕೇನ್ ಅವರಿಂದ ತೆರವಾದ ಸ್ಥಾನಕ್ಕೆ ಶೀಲಾ ದೀಕ್ಷಿತ್ ಅವರನ್ನು ನೇಮಿಸಲಾಗಿದೆ.
ಹಿರಿಯ ನಾಯಕಿ ಶೀಲಾ ದೀಕ್ಷಿತ್ ಅವರ ನಾಯಕತ್ವದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಸಮರ್ಥ ವಿಪಕ್ಷವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಅಜಯ್ ಮಕೇನ್ ಅವರು ಹೇಳಿದ್ದಾರೆ. ಅನಾರೋಗ್ಯದ ಕಾರಣ ಅಜಯ್ ಅವರು ತಮ್ಮ ಹುದ್ದೆ ತೊರೆದಿದ್ದರು.

ಶೀಲಾ ದೀಕ್ಷಿತ್ ನೇಮಕದ ಬಗ್ಗೆ ಅಧಿಕೃತ ಹೇಳಿಕೆ ಇನ್ನೂ ಹೊರ ಬಂದಿಲ್ಲ. ಆದರೆ, ಕಾಂಗ್ರೆಸ್ ನಾಯಕ ಪಿಸಿ ಚಾಕೋ ಅವರು ಈ ಬೆಳವಣಿಗೆಯನ್ನು ದೃಢಪಡಿಸಿದ್ದು, ಕೆಲವು ಕಾರ್ಯಕಾರಿ ಅಧ್ಯಕ್ಷರು ಅವರಿಗೆ ನೆರವಾಗಲಿದ್ದಾರೆ ಎಂದಿದ್ದಾರೆ.
Former DPCC Chief Ajay Maken: I congratulate Shiela Dikshit ji for being appointed the DPCC (Delhi Pradesh Congress Committee) President. I am confident that under her leadership, we will play the role of strong opposition to Modi&Kejriwal governments. (File pic) pic.twitter.com/fGbufGFfLn
— ANI (@ANI) January 10, 2019
ಮೂರು ಬಾರಿ ದೆಹಲಿಯ ಸಿಎಂ ಆಗಿರುವ 80 ವರ್ಷ ವಯಸ್ಸಿನ ದೀಕ್ಷಿತ್ ಅವರಲ್ಲದೆ, ಎಐಸಿಸಿ ಕಾರ್ಯದರ್ಶಿ ದೇವೇಂದ್ರ ಯಾದವ್, ಹರೂನ್ ಯಾದವ್ ಹಾಗೂ ರಾಜ್ ಕುಮಾರ್ ಚೌಹಾಣ್ ಅವರ ಹೆಸರುಗಳು ಕೂಡಾ ಅಧ್ಯಕ್ಷ ಸ್ಥಾನಕ್ಕಾಗಿ ಕೇಳಿ ಬಂದಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications