ಲೋಕಸಭೆ ಚುನಾವಣೆಗೂ ಮುನ್ನ ಸುಬ್ರಮಣಿಯನ್ ಸ್ವಾಮಿ ಶಾಕಿಂಗ್ ಹೇಳಿಕೆ
ನವದೆಹಲಿ, ಮಾರ್ಚ್ 01: "ಕಳೆದ ಐದು ವರ್ಷಗಳಲ್ಲಿ ವಿತ್ತ ಸಚಿವಾಲಯ ಭಾರತದ ಆರ್ಥಿಕ ನೀತಿಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ನನಗೆ ಸಮಾಧಾನವಿಲ್ಲ, ಅಪನಗದೀಕರಣವನ್ನು ಸರಿಯಾಗಿ ಜಾರಿಗೊಳಿಸಲಾಗಿಲ್ಲ" ನ್ನುವ ಮೂಲಕ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಚುನಾವಣೆ ಹೊತ್ತಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
"ಅರುಣ್ ಜೇಟ್ಲಿ ಅರ್ಥಶಾಸ್ತ್ರವನ್ನೇ ಓದಿಲ್ಲ. ಅಪನಗದೀಕರಣದ ಉದ್ದೇಶ ಒಳ್ಳೆಯದೇ ಆಗಿತ್ತು. ಆದರೆ ಅದನ್ನು ಜಾರಿಗೊಳಿಸುವಲ್ಲಿ ಅರುಣ್ ಜೇಟ್ಲಿ ಎಡವಿದರು" ಎಂದು ಸ್ವಾಮಿ ಹೇಳಿದರು.
"2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ಆದರೆ ಅರುಣ್ ಜೇಟ್ಲಿ ಅವರ ಬಗ್ಗೆ ನನಗೆ ಯಾವುದೇ ಅಕ್ಕರೆ ಇಲ್ಲ" ಎಂದು ಅವರು ಹೇಳಿದರು.

ಜೇಟ್ಲಿ, ಚಿದಂಬರಂಗೆ ಅರ್ಥಶಾಸ್ತ್ರ ಗೊತ್ತಿಲ್ಲ
"ನನಗೆ ಅರುಣ್ ಜೇಟ್ಲಿ ಗೊತ್ತಿಲ್ಲ. ಅರ್ಥಶಾಸ್ತ್ರವೇ ಗೊತ್ತಿಲ್ಲದ ಹಲವರು ವಿತ್ತ ಸಚಿವರಾಗಿದ್ದಾರೆ. ಜೇಟ್ಲಿಗಾಗಲೀ, ಚಿದಂಬರಂಗಾಗಲೀ ಅರ್ಥಶಾಸ್ತ್ರದ ಪರಿಚಯವಿಲ್ಲ. ಮನಮೋಹನ್ ಸಿಂಗ್ ಅವರಿಗೆ ಅರ್ಥಶಾಸ್ತ್ರ ಗೊತ್ತಿತ್ತು" ಎಂದು ಅವರು ಹೇಳಿದರು.

ನರೇಂದ್ರ ಮೋದಿಯೇ ಮತ್ತೆ ಪ್ರಧಾನಿ
ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂಬ ನಂಬಿಕೆ ನನಗಿದೆ. ಅವರಿಗೆ ಈ ಬಾರಿ ಯಾವುದೇ ಸವಾಲಿಲ್ಲ. ಬ್ರಾಂಡ್ ಮೋದಿ ಎಂಬುದಕ್ಕಿಂತ ಬಿಜೆಪಿಯ ಹಿಂದುತ್ವ ಮತ್ತು ರಾಷ್ಟ್ರೀಯತೆಯ ಸಿದ್ಧಾತದಿಂದಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು.

ಅಪನಗದೀಕರಣದ ಉದ್ದೇಶ ಒಳ್ಳೆಯದೆ
ಅಪನಗದೀಕರಣದ ಉದ್ದೇಶ ಒಳ್ಳೆಯದೆ. ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಜಾರಿಗೆ ತಂದ ಅದನ್ನು ಸರಿಯಾಗಿ ಜಾರಿಗೆ ತರಲು ಅರ್ಥಶಾಸ್ತ್ರವನ್ನೇ ಓದಿರದ ಅರುಣ್ ಜೇಟ್ಲಿ ವಿಫಲರಾಗಿದ್ದಾರೆ ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆ ಯಾವಾಗ?
ಲೋಕಸಭಾ ಚುನಾವಣೆ ಏಪ್ರಿಲ್ 11 ರಂದು ಆರಂಭವಾಗಿ ಮೇ 19 ರವರೆಗೆ ನಡೆಯಲಿದೆ. ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications