ಬಿಜೆಪಿ ಸುದ್ದಿಗೋಷ್ಠಿ ವೇಳೆ ಬಿಜೆಪಿ ವಕ್ತಾರರ ಮೇಲೆ ಅಪರಿಚಿತನಿಂದ ಶೂ ಎಸೆತ
ನವದೆಹಲಿ, ಏ.18: ನವದೆಹಲಿಯಲ್ಲಿ ನಡೆಯುತ್ತಿದ್ದ ಬಿಜೆಪಿ ಸುದ್ದಿಗೋಷ್ಠಿಯಲ್ಲಿ ಅಪರಿಚಿತನೊಬ್ಬ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹರಾವ್ ಅವರ ಮೇಲೆ ಶೂ ಎಸೆದ ಘಟನೆ ಗುರುವಾರ ನಡೆದಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇಂದು ಬೆಳಗ್ಗೆ ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ವಕ್ತಾರರಾಗಿರುವ ಜಿವಿಎಲ್ ನರಸಿಂಹ ರಾವ್ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಅಪರಿಚಿತನೊಬ್ಬ ನರಸಿಂಹ ರಾವ್ ಅವರ ಮೇಲೆ ಶೂ ಎಸೆದಿದ್ದಾನೆ. ಇದೀಗ ಶೂ ಎಸೆದ ಶಕ್ತಿ ಭಾರ್ಗವ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ವೇಳೆ ಪ್ರಜ್ಞಾ ಸಿಂಗ್ಗೆ ಬಿಜೆಪಿಯಿಂದ ಟಿಕೆಟ್ ನೀಡಿರುವುದೇ ಶಕ್ತಿ ಭಾರ್ಗವ್ ಅವರ ಆಕ್ರೋಶಕ್ಕೆ ಕಾರಣ ಎನ್ನುವ ಮಾಹಿತಿ ಮೊದಲಿಗೆ ಲಭ್ಯವಾಗಿದೆ.
#WATCH Delhi: Shoe hurled at BJP MP GVL Narasimha Rao during a press conference at BJP HQs .More details awaited pic.twitter.com/7WKBWbGL3r
— ANI (@ANI) April 18, 2019












Click it and Unblock the Notifications