ಫಲಿತಾಂಶದ ಬೆನ್ನಲ್ಲೇ ಆಘಾತಕಾರಿ ಘಟನೆ: ಶಾಸಕನ ವಾಹನದ ಮೇಲೆ ಗುಂಡಿನ ದಾಳಿ, ಒಬ್ಬ ಸಾವು
Recommended Video
ನವದೆಹಲಿ, ಫೆಬ್ರವರಿ 12: ವಿಧಾನಸಭೆ ಚುನಾವಣೆಯಲ್ಲಿ ಎಎಪಿ ದಿಗ್ವಿಜಯ ಸಾಧಿಸಿದ ಬೆನ್ನಲ್ಲೇ ಮಂಗಳವಾರ ರಾತ್ರಿ ಆಘಾತಕಾರಿ ಘಟನೆ ನಡೆದಿದೆ. ಎಎಪಿಯ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆದಿದ್ದು, ಒಬ್ಬ ಕಾರ್ಯಕರ್ತ ಮೃತಪಟ್ಟಿದ್ದಾರೆ.
ನೈರುತ್ಯ ದೆಹಲಿಯ ಕಿಶನ್ಗಡ ಗ್ರಾಮದ ಸಮೀಪ ಅಪರಿಚಿತ ವ್ಯಕ್ತಿಗಳಿಂದ ಈ ಗುಂಡಿನ ದಾಳಿ ನಡೆದಿದೆ. ನರೇಶ್ ಯಾದವ್ ಅವರಿಗೆ ಯಾವುದೇ ಅಪಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತ ಅಶೋಕ್ ಮನ್ ಎಂಬುವವರು ಹತ್ಯೆಗೊಳಗಾದ ದುರ್ದೈವಿ. ಗಾಯಗೊಂಡ ಕಾರ್ಯಕರ್ತನನ್ನು ಹರಿಂದರ್ ಎಂದು ಗುರುತಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚುನಾವಣೆಯಲ್ಲಿ ಗೆದ್ದ ಬಳಿಕ ಸಂಭ್ರಮಾಚರಣೆ ಮುಗಿಸಿ, ತಮ್ಮ ಮೆಹ್ರೌಲಿ ಕ್ಷೇತ್ರದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶಾಸಕರು ಮತ್ತು ಅವರ ಬೆಂಬಲಿಗರು ಊರಿಗೆ ಮರಳುತ್ತಿದ್ದ ವೇಳೆ ಈ ಗುಂಡಿನ ದಾಳಿ ನಡೆದಿದೆ. ಮೆಹ್ರೌಲಿ ಕ್ಷೇತ್ರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ನರೇಶ್ ಯಾದವ್ ಅವರು ಬಿಜೆಪಿಯ ಕುಸುಮ್ ಖತ್ರಿ ಅವರನ್ನು ಸುಮಾರು 9,000 ಮತಗಳಿಂದ ಸೋಲಿಸಿದ್ದಾರೆ.

ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ
ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ಏಳು ಸುತ್ತಿನಲ್ಲಿ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಎಎಪಿ ಕಾರ್ಯಕರ್ತ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸ್ವಗ್ರಾಮಕ್ಕೆ ತೆರಳುತ್ತಿರುವಾಗ ನಡೆದ ಘಟನೆ
ಘಟನೆ ವೇಳೆ ನರೇಶ್ ಯಾದವ್ ಅವರು ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಅವರ ಹಿಂದ ಎರಡು ಪ್ರತ್ಯೇಕ ಕಾರುಗಳಲ್ಲಿ ಬೆಂಬಲಿಗರು ಹೋಗುತ್ತಿದ್ದರು. ಫೋರ್ಟಿಸ್ ಆಸ್ಪತ್ರೆ ಸಮೀಪ ರೆಡ್ ಸಿಗ್ನಲ್ ಇದ್ದಿದ್ದರಿಂದ ಕಾರು ನಿಲ್ಲಿಸಲಾಗಿತ್ತು. ಆಗ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಕಾರಿನೊಳಗೆ ಕುಳಿತೇ ಗುಂಡು ಹಾರಿಸಲಾಗಿದೆ. ಅದರಲ್ಲಿ ಯಾವ ಗುಂಡೂ ಶಾಸಕರ ಕಾರಿಗೆ ತಾಗಿಲ್ಲ. ಒಂದು ಗುಂಡು ಕಾರಿನ ಹಿಂಬದಿಯ ಗಾಜನನ್ನು ಪುಡಿ ಮಾಡಿ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಕಾರ್ಯಕರ್ತನಿಗೆ ತಗುಲಿದೆ. ಅವರು ಮೃತಪಟ್ಟರೆ, ಮತ್ತೊಂದು ಗುಂಡು ಇನ್ನೊಬ್ಬ ಕಾರ್ಯಕರ್ತನಿಗೆ ತಗುಲಿ ಅವರಿಗೆ ಗಾಯವಾಗಿದೆ.

ವೈಯಕ್ತಿಕ ದ್ವೇಷದಿಂದ ನಡೆದಿರುವ ದಾಳಿ
ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದು ವೈಯಕ್ತಿಕ ದ್ವೇಷದಿಂದ ನಡೆದಿರುವ ದಾಳಿ ಎಂದು ಪೊಲೀಸರು ಶಂಕಿಸಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಎಎಪಿ ಕಾರ್ಯಕರ್ತನ ಮೇಲೆ ಕ್ರಿಮಿನಲ್ ಕೇಸ್ ಇತ್ತು. ಇದು ಗುಂಪುಗಳ ನಡುವಿನ ವೈರತ್ವದ ಕಾರಣದಿಂದ ನಡೆದಿರುವ ಘಟನೆ ಆಗಿರಬಹುದೇ ಹೊರತು ಚುನಾವಣೆಗೆ ಸಂಬಂಧಿಸಿದ್ದಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಯಾಮಗಳಲ್ಲಿಯೂ ತನಿಖೆ
ಅಥವಾ ನರೇಶ್ ಯಾದವ್ ಅವರ ಮೇಲೆಯೇ ದಾಳಿ ನಡೆಸುವ ಸಲುವಾಗಿ ದುಷ್ಕರ್ಮಿಗಳು ಬಂದಿರಬಹುದು. ಅವರು ಯಾವ ಕಾರ್ನಲ್ಲಿ ಎಂದು ಗೊತ್ತಾಗದೆ ಗುಂಡು ಹಾರಿಸಿರುವ ಸಾಧ್ಯತೆಯೂ ಇದೆ. ನಾವು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications