ಸಿಯಾಚಿನ್ ಹೀರೋ ಕರ್ನಲ್ ನರೇಂದ್ರ ಕುಮಾರ್ ಇನ್ನಿಲ್ಲ
ನವದೆಹಲಿ, ಜನವರಿ 1: ಅತ್ಯಂತ ಕಠಿಣವಾದ ಸಿಯಾಚಿನ್ ನೀರ್ಗಲ್ಲು ಪ್ರದೇಶದಲ್ಲಿ ಭಾರತೀಯ ಸೇನೆಯು ಹಿಡಿತ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ದೇಶದ ಭದ್ರತೆಗೆ ಮಹತ್ವದ ಕೊಡುಗೆ ನೀಡಿದ್ದ ಕರ್ನಲ್ ನರೇಂದ್ರ 'ಬುಲ್' ಕುಮಾರ್ (ನಿವೃತ್ತ) ಅವರು ಗುರುವಾರ ನಿಧನರಾದರು.
ಈಗಿನ ಪಾಕಿಸ್ತಾನದಲ್ಲಿರುವ ರಾವಲ್ಪಿಂಡಿಯಲ್ಲಿ 1933ರಲ್ಲಿ ಜನಿಸಿದ ನರೇಂದ್ರ ಕುಮಾರ್ ಅವರು, 1984ರ ಏಪ್ರಿಲ್ನಲ್ಲಿ ಸಿಯಾಚಿನ್ ನೀರ್ಗಲ್ಲುವಿನಲ್ಲಿ ಭಾರತೀಯ ಸೇನೆಯನ್ನು ಮುನ್ನಡೆಸಿದ್ದರು. ಪರ್ವತಾರೋಹಣದಲ್ಲಿ ದಿಗ್ಗಜರೆನಿಸಿದ್ದ ಅವರು ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರ ಬಯಕೆಯಂತೆ ಕಾಶ್ಮೀರದ ಸಿಯಾಚಿನ್ ನೀರ್ಗಲ್ಲು ಪ್ರದೇಶವನ್ನು ಆಕ್ರಮಿಸಿಕೊಳ್ಳುವ ಆಪರೇಷನ್ ಮೇಘದೂತ್ನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಇದಕ್ಕೂ ಮುನ್ನ 1978ರಲ್ಲಿ ಅವರು ಜಗತ್ತಿನ ಮೂರನೇ ಅತಿ ಎತ್ತರದ ಪರ್ವತ ಕಾಂಚನಜುಂಗಾ ಅನ್ನು ಈಶಾನ್ಯ ಭಾಗದಿಂದ ಏರಿದ್ದರು. 45 ವರ್ಷ ವಯಸ್ಸಿನವರು ಯಾರೂ ಇಂತಹ ಸಾಹಸಕ್ಕೆ ಕೈಹಾಕಿರಲಿಲ್ಲ. 1965ರಲ್ಲಿ ಅವರು ಮೌಂಟ್ ಎವರೆಸ್ಟ್ ಏರುವ ಭಾರತದ ಮೊದಲ ತಂಡದ ಭಾಗವಾಗಿದ್ದರು.

87 ವರ್ಷದ ನರೇಂದ್ರ ಕುಮಾರ್ ಅವರನ್ನು 'ಬುಲ್' ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ದೆಹಲಿಯ ಬ್ರಾರ್ ಚೌಕದಲ್ಲಿ ಶುಕ್ರವಾರ ಅವರ ಅಂತ್ಯಕ್ರಿಯೆ ನಡೆಯಿತು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications