Breaking; ಸಿದ್ದರಾಮಯ್ಯ ಕಾರು ತಡೆದ ದೆಹಲಿ ಪೊಲೀಸರು!
ನವದೆಹಲಿ, ಜೂನ್ 22; ಕರ್ನಾಟಕ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರನ್ನು ದೆಹಲಿಯಲ್ಲಿ ಸಂಚಾರಿ ಪೊಲೀಸರು ತಡೆದಿದ್ದಾರೆ. ಕಾರ್ಯಕರ್ತರು ವಿವರಣೆ ನೀಡಿದ ಬಳಿಕ ಮುಂದೆ ಸಾಗಲು ಅನುಮತಿ ನೀಡಿದರು.
ಬುಧವಾರ ಬೆಳಗ್ಗೆ ಸಿದ್ದರಾಮಯ್ಯ ಎಐಸಿಸಿ ಕಚೇರಿಗೆ ಹೋಗುವಾಗ ದೆಹಲಿ ಪೊಲೀಸರು ಕಾರನ್ನು ತಡೆದರು. ಆಗ ಕಾಂಗ್ರೆಸ್ ಕಾರ್ಯಕರ್ತರು ಸಹ ಕಾರಿನತ್ತ ನುಗ್ಗಿ ಬಂದರು.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುವುದನ್ನು ವಿರೋಧಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ಸಿದ್ದರಾಮಯ್ಯ ದೆಹಲಿಗೆ ಆಗಮಿಸಿದ್ದಾರೆ.

ಕಾಂಗ್ರೆಸ್ ನಾಯಕರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಸೇರಿದಂತೆ ಕರ್ನಾಟಕದ ಶಾಸಕರು, ವಿಧಾನ ಪರಿಷತ್ ಸದಸ್ಯರು ದೆಹಲಿಗೆ ತೆರಳಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಎಲ್ಲರೂ ಸಭೆ ನಡೆಸಲಿದ್ದಾರೆ.
ಸಿದ್ದರಾಮಯ್ಯ ಈ ಸಭೆಗಾಗಿಯೇ ದೆಹಲಿಯ ಎಐಸಿಸಿ ಕಚೇರಿಗೆ ಆಗಮಿಸುತ್ತಿದ್ದರು. ಆಗ ದೆಹಲಿ ಪೊಲೀಸರು ಕಾರನ್ನು ತಡೆದರು. ಪೊಲೀಸರು ಕಾರನ್ನು ಬಿಟ್ಟ ಬಳಿಕ ಅವರು ಎಐಸಿಸಿ ಕಚೇರಿಗೆ ಆಗಮಿಸಿ ಪಕ್ಷದ ರಾಜ್ಯ ನಾಯಕರು, ಶಾಸಕರು, ಮುಖಂಡರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿ; ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ರಾಹುಲ್ ಗಾಂಧಿ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿದ್ದಾರೆ. ಇದೇ ಪ್ರರಣದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಸಹ ಇಡಿ ವಿಚಾರಣೆ ನಡೆಸಬೇಕಿದೆ.
ಇಡಿ ವಿಚಾರಣೆ ನೆಪದಲ್ಲಿ ಕೇಂದ್ರ ಸರ್ಕಾರ ರಾಹುಲ್ ಗಾಂಧಿಗೆ ಕಿರುಕುಳ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ವಿವಿಧ ರಾಜ್ಯಗಳು, ಇಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು.
ಬುಧವಾರ ದೆಹಲಿಯ ಎಐಸಿಸಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ರಾಹುಲ್ ಗಾಂಧಿ ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಕರ್ನಾಟಕ ಕಾಂಗ್ರೆಸ್ನ ನಾಯಕರು ಸಹ ಭಾಗವಹಿಸಿದ್ದರು.
Recommended Video
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications