ದೆಹಲಿಯಲ್ಲಿ ಸಿದ್ದರಾಮಯ್ಯ: ಕೈ ಅಭ್ಯರ್ಥಿಗಳ ಪಟ್ಟಿ ಕುರಿತು ಅಂತಿಮ ಚರ್ಚೆ
ನವದೆಹಲಿ, ಮಾರ್ಚ್ 22: ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಿದ್ದು, ಲೋಕಸಭೆ ಚುನಾವಣೆ ಕರ್ನಾಟಕ ಕಾಂಗ್ರೆಸ್ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಹೈಕಮಾಂಡ್ ಜೊತೆ ಚರ್ಚೆ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆಯೇ ದೆಹಲಿಗೆ ತೆರಳಿದ್ದು, ಈಗಾಗಲೇ ಒಂದು ಹಂತದ ಮಾತುಕತೆ ಮುಗಿಸಿ ಅಂತಿಮ ಹಂತದ ಮಾತುಕತೆ ನಡೆಸಲು ಕಾಯುತ್ತಿದ್ದಾರೆ.
ಸಿದ್ದರಾಮಯ್ಯ ಹಠ ಕಾಂಗ್ರೆಸ್- ಜೆಡಿಎಸ್ ನ ಆಟ ಕೆಡಿಸಿದ್ದು ಹೇಗೆ?
ಇಂದೇ ಪಟ್ಟಿ ಅಂತಿಮಗೊಳಿಸಲಾಗುತ್ತಿದ್ದು, ಇಂದು ರಾತ್ರಿಯೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹೊರ ಬೀಳುವ ಎಲ್ಲ ಸಾಧ್ಯತೆಗೂ ಇವೆ. ಸಿದ್ದರಾಮಯ್ಯ ಅವರ ಜೊತೆಗೆ ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಹಾಗೂ ಇನ್ನೂ ಕೆಲವು ಕೆಪಿಸಿಸಿಯ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ.
ಸಿದ್ದರಾಮಯ್ಯ ಅವರ ಜೊತೆಗೆ ಜಮೀರ್ ಅಹ್ಮದ್ ಸಹ ದೆಹಲಿಗೆ ತೆರಳಿದ್ದು, ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಬಗ್ಗೆ ಅವರೂ ಸಹ ಚರ್ಚೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಹೈಕಮಾಂಡ್ನಿಂದ ತುರ್ತು ಕರೆ : ದೆಹಲಿಗೆ ತೆರಳಿದ ಸಿದ್ದರಾಮಯ್ಯ
ಕಾಂಗ್ರೆಸ್ ಪಟ್ಟಿಯಲ್ಲಿ ಕೆಲವು ಅಚ್ಚರಿಗಳಿದ್ದು, ಈಶ್ವರ್ ಖಂಡ್ರೆ, ಶಾಮನೂರು ಶಿವಶಂಕರಪ್ಪ ಅಥವಾ ಎಸ್.ಎಸ್.ಮಲ್ಲಿಕಾರ್ಜುನ್, ರಿಜ್ವಾನ್ ಅರ್ಷದ್, ಗೋವಿಂದರಾಜು ಅವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂಬ ಸುದ್ದಿ ಇದೆ.