ಭಾರತದ ಚಿರತೆಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ: ಮಾಹಿತಿ ನೀಡಿದ ಕೇಂದ್ರ
ನವದೆಹಲಿ, ಡಿಸೆಂಬರ್ 21: 2014 ರಲ್ಲಿ ಸುಮಾರು 8,000 ಭಾರತದ ಚಿರತೆಗಳ ಸಂಖ್ಯೆಯು, 2018 ರಲ್ಲಿ 12,000 ಕ್ಕಿಂತ ಹೆಚ್ಚಾಗಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ತಿಳಿಸಿದ್ದಾರೆ.
ಹುಲಿಗಳು, ಸಿಂಹಗಳ ಬಗ್ಗೆ ಇದೇ ರೀತಿಯ ವರದಿಗಳು ಬಂದಿದ್ದು, ಈಗ ಚಿರತೆಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಇದರಿಂದ ದೇಶವು ತನ್ನ ಪರಿಸರ ವಿಜ್ಞಾನ ಮತ್ತು ಜೀವವೈವಿಧ್ಯತೆಯನ್ನು ಚೆನ್ನಾಗಿ ರಕ್ಷಿಸುತ್ತಿದೆ ಎಂದು ತೋರಿಸುತ್ತದೆ ಎಂದರು.
"ಚಿರತೆಗಳ ಸ್ಥಿತಿ ಭಾರತ-2018' ವರದಿಯನ್ನು ಬಿಡುಗಡೆ ಮಾಡಿದ ಕೇಂದ್ರ ಪರಿಸಿರ ಸಚಿವ, ಚಿರತೆಗಳ ಜನಸಂಖ್ಯೆಯನ್ನು ಕ್ಯಾಮೆರಾ ಟ್ರ್ಯಾಪಿಂಗ್ ವಿಧಾನವನ್ನು ಬಳಸಿಕೊಂಡು ಅಂದಾಜಿಸಲಾಗಿದೆ ಎಂದು ಹೇಳಿದರು.

ವರದಿಯ ಪ್ರಕಾರ, 2018 ರಲ್ಲಿ ಭಾರತದ ಚಿರತೆ ಸಂಖ್ಯೆಯು 12,852 ಎಂದು ಅಂದಾಜಿಸಲಾಗಿದ್ದು, ಮಧ್ಯಪ್ರದೇಶದಲ್ಲಿ ಗರಿಷ್ಠ 3,421, ಮತ್ತು ಕರ್ನಾಟಕದಲ್ಲಿ 1,783 ಮತ್ತು ಮಹಾರಾಷ್ಟ್ರದಲ್ಲಿ 1,690 ಚಿರತೆಗಳಿವೆ.
ಪ್ರದೇಶವಾರು ಹಂಚಿಕೆಗೆ ಸಂಬಂಧಿಸಿದಂತೆ, ಮಧ್ಯ ಭಾರತ ಮತ್ತು ಪೂರ್ವ ಘಟ್ಟಗಳಲ್ಲಿ ಅತಿ ಹೆಚ್ಚು ಅಂದರೆ 8,071 ಚಿರತೆಗಳು ಕಂಡುಬಂದಿವೆ, ಇದರಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಒಡಿಶಾ, ಛತ್ತೀಸ್ಘಡ, ಜಾರ್ಖಂಡ್, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳು ಸೇರಿವೆ.

ಕರ್ನಾಟಕ, ತಮಿಳುನಾಡು, ಗೋವಾ ಮತ್ತು ಕೇರಳವನ್ನು ಒಳಗೊಂಡಿರುವ ಪಶ್ಚಿಮ ಘಾಟ್ ಪ್ರದೇಶದಲ್ಲಿ 3,387 ಚಿರತೆಗಳಿದ್ದರೆ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಬಿಹಾರ ರಾಜ್ಯಗಳ ಶಿವಾಲಿಕ್ ಮತ್ತು ಗಂಗಾ ಬಯಲು ಪ್ರದೇಶಗಳಲ್ಲಿ 1,253 ಚಿರತೆಗಳಿವೆ ಎಂದು ಅಂದಾಜಿಸಲಾಗಿದೆ. ಈಶಾನ್ಯ ಬೆಟ್ಟಗಳಲ್ಲಿ ಕೇವಲ 141 ಚಿರತೆಗಳಿವೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications