ಸಿಕ್ಕಿಂನ ಎಸ್ ಡಿಎಫ್ 10 ಶಾಸಕರು ಬಿಜೆಪಿಗೆ; ಕೇಸರಿ ವಿಪಕ್ಷ
ನವದೆಹಲಿ, ಆಗಸ್ಟ್ 13: ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ನ ಶಾಸಕರು ಸೋಮವಾರದಂದು ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದೀಗ ಸಿಕ್ಕಿಂನಲ್ಲಿ ಬಿಜೆಪಿ ಅಧಿಕೃತ ವಿರೋಧ ಪಕ್ಷವಾಗಿದೆ. ಎಸ್ ಡಿಎಫ್ ಈ ಹಿಂದೆ ಬಿಜೆಪಿ ಮೈತ್ರಿ ಪಕ್ಷವಾಗಿತ್ತು. ಈ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಸ್ ಡಿಎಫ್ ಸೋಲನುಭವಿಸಿತ್ತು. ಅದಕ್ಕೂ ಮುನ್ನ ಇಪ್ಪತ್ತೈದು ವರ್ಷ ಪಕ್ಷ ಅಧಿಕಾರದಲ್ಲಿ ಇತ್ತು.
ಏಪ್ರಿಲ್ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹದಿನೈದು ಸ್ಥಾನಗಳಲ್ಲಿ ಎಸ್ ಡಿಎಫ್ ಜಯಿಸಿತ್ತು. ಪಕ್ಷದ ಇಬ್ಬರು ನಾಯಕರು ಎರಡು ಸ್ಥಾನಗಳಿಂದ ಜಯಿಸಿದ್ದರು. ಹಾಗೆ ಲೆಕ್ಕ ನೋಡಿದರೆ, ಎಸ್ ಡಿಎಫ್ ನ ಹದಿಮೂರು ಶಾಸಕರ ಪೈಕಿ ಹತ್ತು ಮಂದಿ ಬಿಜೆಪಿ ಸೇರಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.
ಈ ಮೂಲಕ ಬಿಜೆಪಿಯು ಸಿಕ್ಕಿಂನಲ್ಲಿ ಪ್ರಮುಖ ಪ್ರತಿಪಕ್ಷ ಆಗಲಿದೆ. ನಾವು ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ- ಸದ್ಯಕ್ಕೆ ವಿಪಕ್ಷ ನಾಯಕರಾಗಿರುವ ಪವನ್ ಚಾಮ್ಲಿಂಗ್ ಅವರು ಬಿಜೆಪಿಗೆ ಸೇರ್ಪಡೆ ಆಗಿಲ್ಲ.

ಮಾಜಿ ಸಚಿವರಾದ ದೋರ್ಜಿ ತ್ಸೆರಿಂಗ್ ಲೆಪ್ಚಾ ಮಾತನಾಡಿ, ಸಿಕ್ಕಿಂನಲ್ಲಿ ಬಿಜೆಪಿಯ ನೆಲೆ ವಿಸ್ತರಿಸಲು ನಾವು ಕೆಲಸ ಮಾಡಲಿದ್ದೇವೆ. ಸಿಕ್ಕಿಂನಲ್ಲಿ ಕಮಲ ಅರಳಬೇಕಿದೆ. ಪ್ರಧಾನಿ ಮೋದಿ ಅವರ ನೀತಿಗಳ ಬಗ್ಗೆ ಯುವ ಜನಾಂಗಕ್ಕೆ ಒಪ್ಪಿಗೆ ಇದೆ ಎಂದಿದ್ದಾರೆ.
ಇನ್ನು ಸದ್ಯಕ್ಕೆ ಸಿಕ್ಕಿಂನಲ್ಲಿ ಅಧಿಕಾರದಲ್ಲಿ ಇರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದಿಂದ ಕುಂಗಾ ನಿಮಾ ಲೆಪ್ಚಾ ಕೂಡ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿ, ಎರಡರಲ್ಲಿ ಗೆದ್ದಿದ್ದರು. ಅವರು ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ. ಇದೀಗ ಒಟ್ಟು ಮೂರು ಸ್ಥಾನಗಳಿಗೆ ಉಪ ಚುನಾವಣೆ ನಡೆಯಬೇಕಿದೆ.
ಒಂದು ವೇಳೆ ಈ ಮೂರೂ ಸ್ಥಾನಗಳಲ್ಲಿ ಬಿಜೆಪಿ ಗೆದ್ದರೆ ಮೂವತ್ತೆರಡು ಸದಸ್ಯ ಬಲದ ಸಿಕ್ಕಿಂ ವಿಧಾನಸಭೆಯಲ್ಲಿ ಹದಿಮೂರು ಸ್ಥಾನಗಳಲ್ಲಿ ಬಿಜೆಪಿ ಇದ್ದಂತಾಗುತ್ತದೆ. ಬಹುಮತಕ್ಕೆ ಹದಿನೇಳು ಸ್ಥಾನಗಳು ಇರಬೇಕು. ಒಂದು ಸ್ಥಾನದಲ್ಲಿ ಸಿಕ್ಕಿಂ ಕ್ರಾಂತಿ ಮೋರ್ಚಾ ಸೋತರೆ ಸಂಖ್ಯೆ ಹದಿನಾರಕ್ಕೆ ಇಳಿಕೆ ಆಗುತ್ತದೆ. ಸಿಕ್ಕಿಂನಲ್ಲಿ ಬಿಜೆಪಿ ನೇತೃತ್ವದ ಸರಕಾರ ರಚಿಸಲು ಸಾಧ್ಯವಿದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications