ಲಡಾಖ್ನಲ್ಲಿ ಪರಿಸ್ಥಿತಿ ಉದ್ವಿಗ್ನ: ಆತಂಕ ವ್ಯಕ್ತಪಡಿಸಿದ ಡಿಎಸ್ ಹೂಡಾ
ನವದೆಹಲಿ, ಜೂನ್ 17: ಲಡಾಖ್ನಲ್ಲಿ ಉಂಟಾಗಿರುವ ಉಗ್ವಿಗ್ನ ಪರಿಸ್ಥಿತಿ ಕುರಿತು ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ ಆತಂಕ ವ್ಯಕ್ತಪಡಿಸಿದ್ದಾರೆ.
Recommended Video
ಪೂರ್ವ ಲಡಾಕ್ ನಲ್ಲಿ ಕಳೆದ ಮೇ 5ರಂದು ಚೀನಾ ಸೇನಾಪಡೆಯನ್ನು ನಿಯೋಜಿಸಿದ ನಂತರ ಭಾರತ ಸಹ ತನ್ನ ಸೇನಾಪಡೆಯನ್ನು ನಿಯೋಜಿಸಿತ್ತು. ಬಳಿಕ ಗಡಿ ಸಮಸ್ಯೆಯನ್ನು ಶಾಂತಿ ಮಾತುಕತೆ ಮೂಲಕ ಬಗೆಹರಿಸೋಣವೆಂದು ಈಗಾಗಲೇ ಐದಾರು ಸುತ್ತಿನ ಮಾತುಕತೆ ಸಹ ಮುಗಿದಿತ್ತು.
ಆದರೆ ಸೋಮವಾರ-ಮಂಗಳವಾರ ಇದ್ದಕ್ಕಿದ್ದಂತೆ ಗಡಿಯಲ್ಲಿ ಘರ್ಷಣೆ ನಡೆದಿದೆ. ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಚೀನಾ ಕಡೆಯ ಯೋಧರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ವರದಿ ಬಂದಿದ್ದು ನಿಜಕ್ಕೂ ಆಘಾತಕಾರಿ ವಿಷಯ ಎಂದು ಹೂಡಾ ಅಭಿಪ್ರಾಯಪಟ್ಟಿದ್ದಾರೆ.

ಎರಡೂ ರಾಷ್ಟ್ರಗಳ ಬೇಡಿಕೆ ಏನು?
ಎರಡೂ ರಾಷ್ಟ್ರಗಳ ಬೇಡಿಕೆಗಳು ಏನೇನು?, ಎರಡೂ ದೇಶಗಳು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಿದೆಯೇ ಎಂಬುದರ ಮೇಲೆ ಮುಂದಿನ ವಿಷಯ ನಿರ್ಧಾರವಾಗುತ್ತದೆ.
ಭಾರತ-ಚೀನಾ ಸಮಸ್ಯೆಯನ್ನು ಬಗೆಹರಿಸಲು ಕೆಲವು ಕಠಿಣ ಮಾತುಕತೆಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮೊದಲಿಗೆ ಭಾವಿಸಲಾಗಿತ್ತು ಆದರೆ ಇತ್ತೀಚಿನ ಹಿಂಸಾಚಾರವು ಸಾವಿಗೆ ಕಾರಣವಾಗಿರುವುದರಿಂದ ಇನ್ನು ಮುಂದೆ ನಿರ್ಣಯಿಸುವುದು ಕಷ್ಟವಾಗಬಹುದು.

ಮೂಲ ಸ್ಥಾನಕ್ಕೆ ಮರಳಲು ಚೀನಾ ಒಪ್ಪಬೇಕು
ಗಡಿ ವಾಸ್ತವ ರೇಖೆಯ ಉದ್ದಕ್ಕೂ ಮೂಲ ಸ್ಥಾನಕ್ಕೆ ಮರಳಲು ಚೀನಾ ಒಪ್ಪಿದರೆ ಉದ್ವಿಗ್ನತೆ ಕಡಿಮೆಯಾಗಬಹುದು. ಆದರೆ, ಈ ಬಾರಿ ಚೀನಿಯರು ಆ ಪ್ರದೇಶದಿಂದ ಹಿಂದೆ ಸರಿಯಲು ಒಪ್ಪುವ ಹಾಗೆ ಕಾಣುತ್ತಿಲ್ಲ ಎಂದು ಲೆ.ಜ.ಡಿ ಎಸ್ ಹೂಡಾ ಅಭಿಪ್ರಾಯಪಟ್ಟಿದ್ದಾರೆ.

ಚೀನಾದ ಉದ್ದೇಶದ ಬಗ್ಗೆ ಹೆಚ್ಚು ತಿಳಿದಿಲ್ಲ
ಕಳೆದ ಬಾರಿಯ ಡೋಕ್ಲಾಮ್ ಅಥವಾ ಚುಮಾರ್ ಘಟನೆಗಳಿಗೆ ವಿರುದ್ಧವಾಗಿ ಈ ಬಾರಿ ಚೀನಾದ ಉದ್ದೇಶಗಳ ಬಗ್ಗೆ ನಮಗೆ ಹೆಚ್ಚು ತಿಳಿದಿಲ್ಲ. ಚೀನಾ ದೇಶ ಪೂರ್ವ ಲಡಾಕ್ ನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾದಾಗ ಅದನ್ನು ಭಾರತ ವಿರೋಧಿಸಿ ಘರ್ಷಣೆ ಆರಂಭವಾಗಿದೆ. ಚೀನಾದ ಆಕಾಂಕ್ಷೆಗಳಿಗೆ ಭಾರತ ಒಪ್ಪದಿದ್ದರೆ ಈ ಬಾರಿ ಹೆಚ್ಚಿನ ಉದ್ವಿಗ್ನತೆಗೆ ಕಾರಣವಾಗಬಹುದು.

ಚೀನಾ ಹೆಲಿಕಾಪ್ಟರ್ಗಳ ಹಾರಾಟ
ಸೋಮವಾರ ಹಾಗೂ ಮಂಗಳವಾರ (ಜೂನ್ 15,16 ) ನಡೆದ ಸಂಘರ್ಷದ ಬಳಿಕ, ಚೀನಾ ಸೇನೆಯ ಹೆಲಿಕಾಪ್ಟರ್ಗಳು ತನ್ನ ಸೇನೆಯ ಮೃತ ಯೋಧರ ಶವ ಸಾಗಿಸಲು ಹಾಗೂ ಗಾಯಗೊಂಡವರನ್ನು ರಕ್ಷಿಸಲು ಧಾವಿಸಿದೆ. ಚೀನಿ ಹೆಲಿಕಾಪ್ಟರ್ಗಳ ಹಾರಾಟವನ್ನು ಭಾರತೀಯ ಸೇನೆ ಗುರುತಿಸಿದೆ. ಗಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ಸೇನೆ ಮುಖಾಮುಖಿಯಾಗಿದ್ದು, ಎರಡೂ ಸೇನೆಗಳಿಗೆ ಈ ಗುದ್ದಾಟದಲ್ಲಿ ಅಪಾರ ಹಾನಿ ಸಂಭವಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications