ಕನಿಷ್ಠ ಉಡುಪೇ ಮಹಿಳೆಯರ ತೊಂದರೆಗೆ ಕಾರಣ: ಅಜ್ಮಿ
ನವದೆಹಲಿ, ಜ. 3. ಮೈಮೇಲೆ ಕನಿಷ್ಠ ಉಡುಗೆ ತೊಡುವುದರಿಂದಲೇ ಮಹಿಳೆಯರು ಲೈಂಗಿಕ ಶೋಷಣೆಗೆ ಒಳಗಾಗುತ್ತಾರೆಂದು ಹೇಳುವ ಮೂಲಕ ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ.
ಬೆಂಗಳೂರಿನಲ್ಲಿ ಡಿ. 31ರ ಮಧ್ಯರಾತ್ರಿ ನಡೆದಿದ್ದ ವರ್ಷಾಚರಣೆ ಸಂಭ್ರಮಾಚರಣೆ ವೇಳೆ ಕೆಲ ಕಿಡಿಗೇಡಿಗಳು ಕೆಲವಾರು ಮಹಿಳೆಯರ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದರು. ಈ ಪ್ರಕರಣವೀಗ ರಾಷ್ಟ್ರಾದ್ಯಂತ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಅಜ್ಮಿ, ಇಂಥದ್ದೊಂದು ಹೇಳಿಕೆ ನೀಡಿದ್ದಾರೆ. [ಮಹಿಳೆ ಬಗ್ಗೆ ಹಗುರ ಮಾತಾಡಿದ ಪರಂ, ಅಬುಗೆ ನೋಟೀಸ್]

ಆದರೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಥದ್ದೇ ಹೇಳಿಕೆ ನೀಡಿದ್ದ ಕರ್ನಾಟಕದ ಗೃಹ ಸಚಿವ ಪರಮೇಶ್ವರ್ ವಿರುದ್ಧ ಈಗಾಗಲೇ ಹಲವಾರು ಟೀಕೆಗಳು ಬರುತ್ತಿವೆ. ಇದೀಗ, ಅಜ್ಮಿ ಕೂಡಾ ಮಹಿಳಾ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಬಹುದಾಗಿದೆ ಎಂದು ಹೇಳಲಾಗಿದೆ.
ತಮ್ಮ ವಾದಕ್ಕೆ ಪುಷ್ಟಿ ನೀಡುವ ಅವರು, "ನಮ್ಮ ಹೆಣ್ಣುಮಕ್ಕಳು ಪಾಶ್ಚಿಮಾತ್ಯ ಸಂಸ್ಕೃತಿ ಅನುಸರಿಸುವುದನ್ನು ಬಿಡಬೇಕು. ಅವರಂತೆ ಕನಿಷ್ಠ ಉಡುಪು ಧರಿಸುವುದು, ರಾತ್ರಿ ವೇಳೆ ಪಾರ್ಟಿಗಳಿಗೆ ಹೋಗುವುದು ಮುಂತಾದ ವಿಚಾರಗಳಿಂದ ದೂರವಿರಬೇಕು. ನನ್ನ ಮನೆಯ ಮಹಿಳಾ ಸದಸ್ಯೆಯೊಬ್ಬರು ರಾತ್ರಿ ಹೊತ್ತು ಅನಿವಾರ್ಯ ಕಾರಣಗಳಿಗೆ ಹೊರಹೋಗುವಾಗ ನಮ್ಮ ಮನೆಯ ಪುರುಷ ಸದಸ್ಯನೊಟ್ಟಿಗೇ ಹೋಗಬೇಕೆಂದು ನಿಯಮ ವಿಧಿಸಿದ್ದೇನೆ. ಒಬ್ಬರನ್ನೇ ಕಳುಹಿಸುವುದಿಲ್ಲ" ಎಂದು ಅವರು ವಿವರಿಸಿದ್ದಾರೆ.
ಇದೇ ವೇಳೆ, ಪೊಲೀಸರಿಗೆ ತಮ್ಮ ನೈತಿಕ ಬೆಂಬಲ ವ್ಯಕ್ತಪಡಿಸಿರುವ ಅವರು, "ಸಮಾಜದ ಪ್ರತಿಯೊಬ್ಬರ ಬೆನ್ನ ಹಿಂದಿದ್ದುಕೊಂಡು ಪೊಲೀಸರು ರಕ್ಷಣೆ ನೀಡಲು ಸಾಧ್ಯವಿಲ್ಲ. ಅಪಾಯ ಬರದಂತೆ ನಾಗರಿಕರೇ ಮುನ್ನಚ್ಚರಿಕೆ ವಹಿಸಬೇಕಿರುವುದು ಅವಶ್ಯ" ಎಂದಿದ್ದಾರೆ. [ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ತೀವ್ರ ಟೀಕೆಗೆ ಗುರಿಯಾದ ಪರಮೇಶ್ವರ ಹೇಳಿಕೆ]
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications