5000 ಅಡಿ ಎತ್ತರದಲ್ಲಿ ಮೇಲೆ ವಿಮಾನದೊಳಗೆ ಹೊಗೆ, ಪ್ರಯಾಣಿಕರು ಹೈರಾಣ
ನವದೆಹಲಿ, ಜು.2: ದೆಹಲಿಯಿಂದ ಜಬಲ್ಪುರಕ್ಕೆ ಹಾರುತ್ತಿದ್ದ ಸ್ಪೈಸ್ಜೆಟ್ ವಿಮಾನದ ಕ್ಯಾಬಿನ್ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಶನಿವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ವಾಪಾಸ್ ಆದ ಘಟನೆ ನಡೆದಿದೆ. ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಯಾವುದೇ ಯಾರಿಗೂ ತೊಂದರೆ ಕಂಡು ಬಂದಿಲ್ಲ ಎನ್ನಲಾಗಿದೆ.
ವಿಮಾನವು 5,000 ಅಡಿ ಎತ್ತರದಲ್ಲಿದ್ದಾಗ ವಿಮಾನದ ಕ್ಯಾಬಿನ್ನಲ್ಲಿ ಹೊಗೆ ಕಾಣಿಸಿಕೊಂಡಿತು. ಸ್ಪೈಸ್ ಜೆಟ್ ವಿಮಾನವು ಶನಿವಾರ ಬೆಳಗ್ಗೆ ದೆಹಲಿಯಿಂದ ಜಬಲ್ಪುರ್ಗೆ ಹಾರಾಟ ನಡೆಸುತ್ತಿತ್ತು. 5000 ಅಡಿ ಮೇಲೆ ಹಾರುವಾಗ ಕ್ಯಾಬಿನ್ನಲ್ಲಿ ಹೊಗೆಯನ್ನು ಗಮನಿಸಿದ ನಂತರ ವಿಮಾನ ಸಿಬ್ಬಂದಿ ಸುರಕ್ಷಿತವಾಗಿ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿಸಿದರು. ಪ್ರಯಾಣಿಕರು ಸುರಕ್ಷಿತವಾಗಿ ಇಳಿದಿದ್ದಾರೆ ಎಂದು ಸ್ಪೈಸ್ಜೆಟ್ ವಕ್ತಾರರು ತಿಳಿಸಿದ್ದಾರೆ.
#WATCH | A SpiceJet aircraft operating from Delhi to Jabalpur returned safely to the Delhi airport today morning after the crew noticed smoke in the cabin while passing 5000ft; passengers safely disembarked: SpiceJet Spokesperson pic.twitter.com/R1LwAVO4Mk
— ANI (@ANI) July 2, 2022

ಸುದ್ದಿ ಸಂಸ್ಥೆ ಎಎನ್ಐ ಟ್ವೀಟ್ ಮಾಡಿರುವ ದೃಶ್ಯವು ಹೊಗೆ ತುಂಬಿದ ಕ್ಯಾಬಿನ್ ಅನ್ನು ತೋರಿಸಿದ್ದು, ವಿಮಾನವು ದೆಹಲಿಗೆ ಹಿಂದಿರುಗಿದ ನಂತರ ಪ್ರಯಾಣಿಕರು ನಿರ್ಗಮಿಸುತ್ತಿರುವ ದೃಶ್ಯಗಳನ್ನು ತೋರಿಸಿವೆ. 15 ದಿನಗಳಲ್ಲಿ ಸ್ಪೈಸ್ ಜೆಟ್ ವಿಮಾನಕ್ಕೆ ಇದು ಎರಡನೇ ತುರ್ತು ಲ್ಯಾಂಡಿಂಗ್ ಆಗಿದೆ. ಜೂನ್ 19 ರಂದು 185 ಪ್ರಯಾಣಿಕರೊಂದಿಗೆ ದೆಹಲಿಗೆ ಹೊರಟಿದ್ದ ವಿಮಾನವು ಟೇಕ್-ಆಫ್ ಆದ ತಕ್ಷಣ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಏಕೆಂದರೆ ಅದರ ಎಡ ಇಂಜಿನ್ಗೆ ಹಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿತ್ತು.

ಆಗ ವಿಮಾನದಲ್ಲಿದ್ದ ಪ್ರಯಾಣಿಕ ಸೌರಭ್ ಛಾಬ್ರಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಮಾನದೊಳಗೆ ನಡೆದ ಘಟನೆಯನ್ನು ವಿವರಿಸಿದ್ದರು. ಸ್ಪೈಸ್ಜೆಟ್ ಅಸುರಕ್ಷಿತವಾಗಿದೆ ಎಂದು ತೋರುತ್ತಿದೆ. ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದರಿಂದ ಒಮ್ಮೆಗೆ ಪ್ರಯಾಣಿಕರು ಭಯಭೀತರಾಗಲು ಪ್ರಾರಂಭಿಸಿದರು. ಬಳಿಕ ಅವರು ದೆಹಲಿಗೆ ಹಿಂತಿರುಗಿದರು. ಅದೃಷ್ಟವಶಾತ್ ನಾವು ಸುರಕ್ಷಿತವಾಗಿದ್ದೇವೆ ಎಂದು ಅವರು ಬರೆದಿದ್ದರು.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications