Breaking:ಸ್ಮೃತಿ ಇರಾನಿ ಮಾನನಷ್ಟ ಪ್ರಕರಣ;ಕಾಂಗ್ರೆಸ್ಸಿಗರಿಗೆ ನೋಟಿಸ್
ನವದೆಹಲಿ, ಜುಲೈ, 29: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮಾಡಿರುವ ಟ್ವೀಟ್ಗಳನ್ನು 24 ಗಂಟೆಗಳ ಒಳಗೆ ಡಿಲೀಟ್ ಮಾಡುವಂತೆ ಮೂವರು ಕಾಂಗ್ರೆಸ್ ನಾಯಕರಿಗೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ.
ಸ್ಮೃತಿ ಇರಾನಿ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟಾ ಡಿಸೋಜಾ ಅವರು ಆಗಸ್ಟ್ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಕಾಂಗ್ರೆಸ್ ನಾಯಕರು ತಮ್ಮ ಟ್ವೀಟ್ಗಳನ್ನು ತೆಗೆದುಹಾಕದಿದ್ದರೇ, ಟ್ವಿಟ್ಟರ್ ಅವುಗಳನ್ನು ತೆಗೆದು ಹಾಕುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಜೈರಾಮ್ ರಮೇಶ್ ಅವರು ಸಮನ್ಸ್ ಬಂದಿರುವುದನ್ನು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. "ಸ್ಮೃತಿ ಇರಾನಿ ಅವರು ದಾಖಲಿಸಿರುವ ಪ್ರಕರಣಕ್ಕೆ ಔಪಚಾರಿಕವಾಗಿ ಉತ್ತರಿಸುವಂತೆ ದೆಹಲಿ ಹೈಕೋರ್ಟ್ ನಮಗೆ ನೋಟಿಸ್ ನೀಡಿದೆ. ನ್ಯಾಯಾಲಯದ ಮುಂದೆ ಸತ್ಯವನ್ನು ಪ್ರಸ್ತುತಪಡಿಸಲು ನಾವು ಎದುರು ನೋಡುತ್ತೇವೆ. ಇರಾನಿ ಅವರು ಮಾಡುತ್ತಿರುವ ವಾದವನ್ನು ನಾವು ಪ್ರಶ್ನಿಸುತ್ತೇವೆ ಮತ್ತು ನಿರಾಕರಿಸುತ್ತೇವೆ" ಎಂದು ಸಂಸದ ಟ್ವೀಟ್ ಮಾಡಿದ್ದಾರೆ.
ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಗೋವಾದಲ್ಲಿ "ಅಕ್ರಮ ಬಾರ್" ನಡೆಸುತ್ತಿದ್ದಾಳೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಕಳೆದ ವಾರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೂವರು ಕಾಂಗ್ರೆಸ್ ನಾಯಕರು ಮತ್ತು ಅವರ ಪಕ್ಷಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದರು. ಅವರು ಲಿಖಿತವಾಗಿ ಕ್ಷಮೆಯಾಚಿಸಲು ಮತ್ತು ತಮ್ಮ ಮಗಳ ಮೇಲಿನ ಆರೋಪಗಳನ್ನು ತಕ್ಷಣವೇ ಹಿಂಪಡೆಯಲು ಆಗ್ರಹಿಸಿದ್ದರು.

ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ತಾನು ಗಟ್ಟಿಯಾಗಿ ಧ್ವನಿ ಎತ್ತುತ್ತಿರುವುದರಿಂದ ಗಾಂಧಿ ಕುಟುಂಬದವರು ಈ ಸುಳ್ಳು ಆರೋಪಗಳನ್ನು ಹೇಳಿಸುತ್ತಿದ್ದಾರೆ. ತಾನು ಇದನ್ನು ಇಲ್ಲಿಗೇ ಬಿಡುವುದಿಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದರು.
"ಅವರು ತಮ್ಮ ಆರೋಪಗಳನ್ನು ವಾಪಸ್ ಪಡೆದು ಬೇಷರತ್ ಕ್ಷಮೆ ಕೋರದೇ ಹೋದರೆ ಇರಾನಿಯವರು ಕಾನೂನು ಪ್ರಕಾರ ಕ್ರಿಮಿನಲ್ ಮೊಕದ್ದಮೆ ಹಾಕುತ್ತಾರೆ" ಎಂದು ಲೀಗಲ್ ನೋಟೀಸ್ನಲ್ಲಿ ಎಚ್ಚರಿಕೆ ನೀಡಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications