ಸೊಹ್ರಾಬುದ್ದಿನ್ ಪ್ರಕರಣಕ್ಕೆ ಹೊಸ ತಿರುವು ನೀಡಲಿರುವ ಸಾಕ್ಷಿಯ ಹೇಳಿಕೆ
ಮುಂಬೈ, ಡಿಸೆಂಬರ್ 20: "ಕೆಲವು ರಾಜಕಾರಣಿಗಳು ಮತ್ತು ಅಧಿಕಾರಿಗಳ ಹೆಸರು ಹೇಳಲು ನನಗೆ ಆಗ ಭಯವಾಗಿತ್ತು. ಆದ್ದರಿಂದ ನನ್ನನ್ನು ಈಗ ಮತ್ತೊಮ್ಮೆ ವಿಚಾರಣೆ ಮಾಡಿ" ಎಂದು ಸೊಹ್ರಾಬುದ್ದಿನ್ ಎನ್ ಕೌಂಟರ್ ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರು ಹೇಳಿದ್ದಾರೆ.
ಸೊಹ್ರಾಬುದ್ದಿನ್ ನ ಸಹಚರರಾಗಿದ್ದ ಆಜಮ್ ಖಾನ್ ತನ್ನನ್ನು ಮರುವಿಚಾರಣೆ ನಡೆಸುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಾನು ಸಾಕ್ಷಿ ಹೇಳುವ ಇಪ್ಪತ್ತು ದಿನಗಳ ಮೊದಲಿನಿಂದಲೂ ನನಗೆ ತೀರಾ ಕಿರುಕುಳ ನೀಡಲಾಗುತ್ತಿತ್ತು. ಆದ್ದರಿಂದ ನಾನು ಈ ಪ್ರಕರಣದ ಕುರಿತಂತೆ ಕೆಲವು ಐಪಿಎಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳ ಹೆಸರನ್ನು ಹೇಳಲು ಹೆದರಿದೆ ಎಂದು ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 21 ರಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದ್ದು, ಈ ಸಮಯದಲ್ಲಿ ಆಜಮ್ ಖಾನ್ ಹೇಳಿಕೆ ತೀವ್ರ ಕುತೂಹಲ ಕೆರಳಿಸಿದೆ.

ನನಗೆ ಬೆದರಿಕೆ ಇದೆ
ನನ್ನ ವಿಚಾರಣೆ ನಡೆಯುವ ಸಂದರ್ಭದಲ್ಲಿ ನನ್ನ ಮೇಲೆ ಸಾಕಷ್ಟು ಒತ್ತಡವಿತ್ತು, ಸೊಹ್ರಾಬುದ್ದಿನ್, ಪ್ರಜಾಪತಿಯಂತೆ ನನ್ನನ್ನೂ ಸಾಯಿಸುವ ಬೆದರಿಕೆ ಇದ್ದಿದ್ದರಿಂದ ನಾನು ಆಗ ಎಲ್ಲರ ಹೆಸರನ್ನೂ ಹೇಳಲು ಸಾಧ್ಯವಾಗಿರಲಿಲ್ಲ. ನನ್ನನ್ನು ಮತ್ತೊಮ್ಮೆ ವಿಚಾರಣೆ ನಡೆಸಿ. ನನಗೆ ರಕ್ಷಣೆ ನೀಡಿ ಎಂದು ಆಜಮ್ ಖಾನ್ ಕೇಳಿಕೊಂಡಿದ್ದಾರೆ.

ತನಿಖೆ ಸರಿಯಾಗಿ ನಡೆದಿಲ್ಲ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾಗಿ ವಿಚಾರಣೆ ನಡೆದಿಲ್ಲ. ಒಟ್ಟು 500 ಸಾಕ್ಷಿಗಳನ್ನು ಪಟ್ಟಿ ಮಾಡಲಾಗಿತ್ತು. ಆದರೆ ವಿಚಾರಣೆ ನಡೆಸಿದ್ದು ಮಾತ್ರ 210 ಸಾಕ್ಷಿಗಳನ್ನು ಎಂದು ಖಾನ್ ಹೇಳಿದ್ದಾರೆ.

ಇವರನ್ನು ಏಕೆ ವಿಚಾರಣೆ ಮಾಡಿಲ್ಲ?
ಐಪಿಎಸ್ ಅಧಿಕಾರಿ ರಜನೀಶ್ ರೈ, ಮಹೇಂದ್ರ ಜಾಲಾ ಮುಂತಾದವರು ಪ್ರಮುಖ ಸಾಕ್ಷಿಗಳಾಗಿದ್ದರು. ಆದರೆ ನ್ಯಾಯಾಲಯವೇಕೆ ಇವರ ವಿಚಾರಣೆ ನಡೆಸಿಲ್ಲ ಎಂದು ಖಾನ್ ಪ್ರಶ್ನಿಸಿದರು.

ಪತ್ನಿಗೂ ಬೆದರಿಕೆ
ನಾನು ಸತ್ಯಾಂಶವನ್ನು ಮುಚ್ಚಿಡುವಂತೆ ಮತ್ತು ಕೆಲವರ ಹೆಸರು ಹೇಳದಂತೆ ನನ್ನ ಮೇಲೆ ಬಹಳ ಒತ್ತಡವಿತ್ತು. ಮಾತ್ರವಲ್ಲ, ನನ್ನ ಪತ್ನಿಗೂ ಬೆದರಿಕೆ ಒಡ್ಡಲಾಗಿತ್ತು. ಸೊಹ್ರಾಬುದ್ದಿನ್ ಮತ್ತು ಪ್ರಜಾಪತಿಯಂತೆ ನನ್ನನ್ನೂ ಮುಗಿಸುವ ಬೆದರಿಕೆ ಒಡ್ಡಲಾಗುತ್ತಿತ್ತು. ಈ ಭಯದಿಂದಲೇ ನಾನು ಕೆಲವರ ಹೆಸರನ್ನು ಹೇಳಲಿಲ್ಲ. ದಯವಿಟ್ಟು ನನ್ನನ್ನು ಮತ್ತೊಮ್ಮೆ ವಿಚಾರಣೆಗೊಳಪಡಿಸಿ ಎಂದು ಖಾನ್ ಮನವಿಮಾಡಿಕೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications