ಜೈಲಿಗೆ ಹೋಗೋಕೆ ಭಾರ್ತಿಗೆ ಭಯಾನಾ? ಕೇಜ್ರಿವಾಲ್ ಟ್ವೀಟ್
ನವದೆಹಲಿ, ಸೆಪ್ಟೆಂಬರ್ 23 : "ಸೋಮನಾಥ್ ಭಾರ್ತಿ ಯಾಕೆ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ. ಜೈಲಿಗೆ ಹೋಗಲು ಅವರಿಗೇಕೆ ಹೆದರಿಕೆ? ಸೋಮನಾಥ್ ಪೊಲೀಸರಿಗೆ ಶರಣಾಗಲೇಬೇಕು. ಆಮ್ ಆದ್ಮಿ ಪಕ್ಷ ಮತ್ತು ಅವರ ಕುಟುಂಬ ಅವರಿಂದ ಸಾಕಷ್ಟು ಮುಜುಗರ ಅನುಭವಿಸಿದೆ" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಸೋಮನಾಥ್ ಭಾರ್ತಿ ಶರಣಾಗಿ ಪೊಲೀಸರೊಂದಿಗೆ ಸಹಕರಿಸಬೇಕು ಎಂದಿದ್ದಾರೆ. ದೆಹಲಿ ಹೈಕೋರ್ಟ್ ಭಾರ್ತಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ್ದರಿಂದ ಅವರ ಬಂಧನ ಅನಿವಾರ್ಯವಾಗಿದೆ.
Somnath shud surrender.Why is he running away?Why is he so scared of gng to jail? Now he is becoming embarasment for party n his family(1/2)
— Arvind Kejriwal (@ArvindKejriwal) September 23, 2015 ಸೋಮನಾಥ್ ಭಾರ್ತಿ ಅವರ ಹೆಂಡತಿ ಲಿಪಿಕಾ ಮಿತ್ರಾ ಅವರು ತಮ್ಮ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯ ಮತ್ತು ಹತ್ಯೆಗೆ ಯತ್ನಿಸಿದ್ದಾರೆಂದು ಆರೋಪಿಸಿ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ. ಅವರ ವಿರುದ್ಧ ಮಾಡಲಾಗಿರುವ ಆರೋಪಗಳು ಗಂಭೀರವಾಗಿದ್ದರಿಂದ ನಿರೀಕ್ಷಣಾ ಜಾಮೀನು ನೀಡುವುದಿಲ್ಲ ಎಂದು ಕೋರ್ಟ್ ಹೇಳಿದೆ. [ಸೋಮನಾಥ್ ಕಿರುಕುಳದ ಕಥೆ ಬಿಚ್ಚಿಟ್ಟ ಲಿಪಿಕಾ]

ಸೆಪ್ಟೆಂಬರ್ 17ರವರೆಗೆ ದೆಹಲಿಯ ಮಾಜಿ ಕಾನೂನು ಸಚಿವ ಭಾರ್ತಿ ಅವರನ್ನು ಬಂಧಿಸಬಾರದೆಂದು ಕೋರ್ಟ್ ಆದೇಶಿಸಿತ್ತು. ನಂತರ 22ರವರೆಗೆ ಈ ಆದೇಶವನ್ನು ವಿಸ್ತರಿಸಿತ್ತು. ಆದರೆ, ಕೋರ್ಟ್ ನೀಡಿದ್ದ ರಕ್ಷಣೆಯನ್ನು ಸೋಮನಾಥ್ ಭಾರ್ತಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
ನಿರೀಕ್ಷಣಾ ಜಾಮೀನು ತಿರಸ್ಕೃತವಾದ ನಂತರ ಪೊಲೀಸರು ಸೋಮನಾಥ್ ಭಾರ್ತಿ ಅವರ ಕಚೇರಿ ಮತ್ತು ಮನೆಯ ಮೇಲೆ ಮಂಗಳವಾರ ದಾಳಿ ಮಾಡಿದ್ದರು. ಆದರೆ, ಎರಡು ಸ್ಥಳಗಳಲ್ಲಿಯೂ ಅವರು ಪತ್ತೆಯಾಗಿಲ್ಲ, ತಲೆಮರೆಸಿಕೊಂಡಿದ್ದಾರೆ. ಈ ನಡುವೆ, ಭಾರ್ತಿ ಅವರ ಕಾರ್ಯದರ್ಶಿ ಮತ್ತು ಸಹೋದರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications