ಜೈಲಿಗೆ ಹೋಗೋಕೆ ಭಾರ್ತಿಗೆ ಭಯಾನಾ? ಕೇಜ್ರಿವಾಲ್ ಟ್ವೀಟ್
ನವದೆಹಲಿ, ಸೆಪ್ಟೆಂಬರ್ 23 : "ಸೋಮನಾಥ್ ಭಾರ್ತಿ ಯಾಕೆ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ. ಜೈಲಿಗೆ ಹೋಗಲು ಅವರಿಗೇಕೆ ಹೆದರಿಕೆ? ಸೋಮನಾಥ್ ಪೊಲೀಸರಿಗೆ ಶರಣಾಗಲೇಬೇಕು. ಆಮ್ ಆದ್ಮಿ ಪಕ್ಷ ಮತ್ತು ಅವರ ಕುಟುಂಬ ಅವರಿಂದ ಸಾಕಷ್ಟು ಮುಜುಗರ ಅನುಭವಿಸಿದೆ" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಸೋಮನಾಥ್ ಭಾರ್ತಿ ಶರಣಾಗಿ ಪೊಲೀಸರೊಂದಿಗೆ ಸಹಕರಿಸಬೇಕು ಎಂದಿದ್ದಾರೆ. ದೆಹಲಿ ಹೈಕೋರ್ಟ್ ಭಾರ್ತಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ್ದರಿಂದ ಅವರ ಬಂಧನ ಅನಿವಾರ್ಯವಾಗಿದೆ.
Somnath shud surrender.Why is he running away?Why is he so scared of gng to jail? Now he is becoming embarasment for party n his family(1/2)
— Arvind Kejriwal (@ArvindKejriwal) September 23, 2015 ಸೋಮನಾಥ್ ಭಾರ್ತಿ ಅವರ ಹೆಂಡತಿ ಲಿಪಿಕಾ ಮಿತ್ರಾ ಅವರು ತಮ್ಮ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯ ಮತ್ತು ಹತ್ಯೆಗೆ ಯತ್ನಿಸಿದ್ದಾರೆಂದು ಆರೋಪಿಸಿ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ. ಅವರ ವಿರುದ್ಧ ಮಾಡಲಾಗಿರುವ ಆರೋಪಗಳು ಗಂಭೀರವಾಗಿದ್ದರಿಂದ ನಿರೀಕ್ಷಣಾ ಜಾಮೀನು ನೀಡುವುದಿಲ್ಲ ಎಂದು ಕೋರ್ಟ್ ಹೇಳಿದೆ. [ಸೋಮನಾಥ್ ಕಿರುಕುಳದ ಕಥೆ ಬಿಚ್ಚಿಟ್ಟ ಲಿಪಿಕಾ]

ಸೆಪ್ಟೆಂಬರ್ 17ರವರೆಗೆ ದೆಹಲಿಯ ಮಾಜಿ ಕಾನೂನು ಸಚಿವ ಭಾರ್ತಿ ಅವರನ್ನು ಬಂಧಿಸಬಾರದೆಂದು ಕೋರ್ಟ್ ಆದೇಶಿಸಿತ್ತು. ನಂತರ 22ರವರೆಗೆ ಈ ಆದೇಶವನ್ನು ವಿಸ್ತರಿಸಿತ್ತು. ಆದರೆ, ಕೋರ್ಟ್ ನೀಡಿದ್ದ ರಕ್ಷಣೆಯನ್ನು ಸೋಮನಾಥ್ ಭಾರ್ತಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
ನಿರೀಕ್ಷಣಾ ಜಾಮೀನು ತಿರಸ್ಕೃತವಾದ ನಂತರ ಪೊಲೀಸರು ಸೋಮನಾಥ್ ಭಾರ್ತಿ ಅವರ ಕಚೇರಿ ಮತ್ತು ಮನೆಯ ಮೇಲೆ ಮಂಗಳವಾರ ದಾಳಿ ಮಾಡಿದ್ದರು. ಆದರೆ, ಎರಡು ಸ್ಥಳಗಳಲ್ಲಿಯೂ ಅವರು ಪತ್ತೆಯಾಗಿಲ್ಲ, ತಲೆಮರೆಸಿಕೊಂಡಿದ್ದಾರೆ. ಈ ನಡುವೆ, ಭಾರ್ತಿ ಅವರ ಕಾರ್ಯದರ್ಶಿ ಮತ್ತು ಸಹೋದರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications