'ವಿದೇಶಿ ಮಹಿಳೆ ಮಗನಿಗೆ ದೇಶಭಕ್ತಿ ಇರಲು ಸಾಧ್ಯವಿಲ್ಲ'
ನವದೆಹಲಿ, ಡಿಸೆಂಬರ್ 16: ವಿದೇಶಿ ಮಹಿಳೆಗೆ ಜನಿಸಿದ ಮಗುವಿಗೆ ದೇಶಭಕ್ತಿ ಇರಲು ಸಾಧ್ಯವಿಲ್ಲ ಅಥವಾ ಹೃದಯದಲ್ಲಿ ದೇಶದ ಹಿತಾಸಕ್ತಿಯೂ ಇರುವುದಿಲ್ಲ ಎಂದು ಬಿಜೆಪಿಯ ನಾಯಕರು ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ. ಹ್ಯಾಷ್ ಟ್ಯಾಗ್ #SaturdayMotivation ಮಾಡಿ, ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ವಿಚಾರವಾಗಿ ಮಾಡಿದ ಟೀಕೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ರಾಹುಲ್ ಅವರ ತಾಯಿ ಸೋನಿಯಾ ಗಾಂಧಿ ಮೂಲತಃ ಇಟಲಿಯವರು. ಆದರೆ ಅವರು ಭಾರತವನ್ನೇ ತಮ್ಮ ದೇಶ ಅಂದುಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದು, ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗಿಯ ಕ್ಷಮೆ ಕೇಳಿಲ್ಲ.
ವಿಜಯ ವರ್ಗಿಯ ಅವರಿಗೆ ತುರ್ತಾಗಿ ಮಾನಸಿಕ ಚಿಕಿತ್ಸೆ ಬೇಕಾಗಿದೆ. ಏಕೆಂದರೆ ಮಧ್ಯಪ್ರದೇಶ ಚುನಾವಣೆ ಸೋಲು ಅವರಿಗೆ ಭಾರೀ ಘಾಸಿ ಮಾಡಿದೆ ಎಂದು ಟ್ವೀಟ್ ಬಗ್ಗೆ ಕಾಂಗ್ರೆಸ್ ವಕ್ತಾರರಾದ ಪ್ರಿಯಾಂಕ ಚತುರ್ವೇದಿ ತಿರುಗೇಟು ನೀಡಿದ್ದಾರೆ. ವಿಜಯ್ ವರ್ಗಿಯ ಅವರು ಇಂದೋರ್ ನಿಂದ ಆಯ್ಕೆ ಆಗಿರುವ ಜನಪ್ರತಿನಿಧಿ.

ಮಧ್ಯಪ್ರದೇಶದಲ್ಲಿ ಕೆಲ ಭಾಗದ ಚುನಾವಣೆ ಪ್ರಚಾರ ಹೊಣೆಯನ್ನು ವಿಜಯ್ ವರ್ಗಿಯ ವಹಿಸಿಕೊಂಡಿದ್ದರು. ಆ ರಾಜ್ಯದಲ್ಲಿ ಬಿಜೆಪಿ 109 ಸ್ಥಾನ ಪಡೆದರೆ, ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಜಯ ಗಳಿಸಿ, ಕೈ ಪಕ್ಷದ ಕಮಲ್ ನಾಥ್ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಐದು ವರ್ಷದ ಹಿಂದೆ ಕೂಡ ಒಮ್ಮೆ ವಿಜಯ್ ವರ್ಗಿಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಒಂದು ಮಿತಿ ಇರುತ್ತದೆ. ಅದನ್ನು ಮೀರಿದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಅತ್ಯಾಚಾರ ಪ್ರಕರಣಗಳ ಬಗ್ಗೆ ಹೇಳಿಕೆ ನೀಡಿದ್ದರು. ಇನ್ನು ವ್ಯಾಪಂ ಹಗರಣ ದೊಡ್ಡ ಹಗರಣ ಅಲ್ಲವೇ ಅಲ್ಲ ಎಂದು ಹೇಳಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications