ಮಹಾರಾಷ್ಟ್ರ ವಿಶ್ವಾಸ ಮತದಲ್ಲಿ ಗೆಲುವು ನಮ್ಮದೇ: ಸೋನಿಯಾ ಗಾಂಧಿ
ನವದೆಹಲಿ, ನವೆಂಬರ್ 26: ಮಹಾರಾಷ್ಟ್ರದಲ್ಲಿ ವಿಶ್ವಾಸಮತ ಯಾಚನೆಗೆ 24 ಗಂಟೆಗಳ ಗಡುವು ನೀಡಿದ ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಶ್ವಾಸಮತದಲ್ಲಿ ಗೆಲುವು ನಮದೇ ಎಂದು ಹೇಳಿದ್ದಾರೆ.
ಶರದ್ ಪವಾರ್ ಅವರ ನ್ಯಾಷನಾಲಿಸ್ಟ್ ಕಾಂಗ್ರೆಸ್ ಪಕ್ಷ, ಶಿವಸೇನಾ ಹಾಗೂ ಕಾಂಗ್ರೆಸ್ ಸೇರಿ ಉತ್ತಮ ಸರ್ಕಾರವನ್ನು ಕಟ್ಟುತ್ತೇವೆ ಎಂದು ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ 145 ಮತಗಳು ಬೇಕು, 162 ಶಾಸಕರು ನಮಗೆ ಬೆಂಬಲ ನೀಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡುವ ವಿಶ್ವಾಸ ನಮಗಿದೆ ಎಂದರು.
ಒಂದೊಮ್ಮೆ ವಿಶ್ವಾಸಮತ ಯಾಚನೆ ಮಾಡುವುದು ವಿಳಂಬವಾದರೆ ಮತ್ತೆ ಕುದುರೆ ವ್ಯಾಪಾರ ಮಾಡುವ ಎಲ್ಲಾ ಸಾಧ್ಯತೆಗಳಿವೆ 24 ಗಂಟೆಗಳಲ್ಲಿ ವಿಶ್ವಾಸಮತ ಯಾಚನೆ ನಡೆದರೆ ಉತ್ತಮ ಎಂದು ಹೇಳಿದ್ದಾರೆ.

ಬುಧವಾರ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಯಾಚನೆ ಮಾಡಬೇಕಿದೆ. ತಕ್ಷಣವೇ ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ಸೇರಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಹಾಕಿತ್ತು.
ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಬಿಜೆಪಿ ನಡುವೆ ಇದ್ದ ಗೊಂದಲದಿಂದಾಗಿ ರಾಷ್ಟ್ರಪತಿ ಆಡಳಿತವಿತ್ತು. ಬಳಿಕ ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾರ್ ಸೇರಿ ತಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿ ರಾಜ್ಯಪಾಲರಲ್ಲಿ ಮನವಿ ಮಾಡಿದ್ದರು ಬಳಿಕ ರಾಜ್ಯಪಾಲರು ರಾಷ್ಟ್ರಪತಿಗೆ ಶಿಫಾರಸು ಮಾಡಿದ್ದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications