ಸೋನಿಯಾ ಗಾಂಧಿ ಭದ್ರತಾ ಸಿಬ್ಬಂದಿ ನಿಗೂಢವಾಗಿ ನಾಪತ್ತೆ
ನವದೆಹಲಿ, ಸೆ. 06 : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬೆಂಗಾವಲು ಪಡೆಯ ಕಮಾಂಡೋ ಒಬ್ಬರು ಸಂಶಯಾಸ್ಪದ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ. ಸೋನಿಯಾ ಅವರಿಗೆ ಭದ್ರತೆ ಒದಗಿಸಲು ನಿಯುಕ್ತರಾಗಿದ್ದ ಎಸ್ ಪಿಜಿ ಕಮಾಂಡೋ ರಾಕೇಶ್ ಕುಮಾರ್ ಎಂಬುವವರು ಕರ್ತವ್ಯ ನಿರತರಾಗಿದ್ದಾಗಲೇ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಸೆಪ್ಟೆಂಬರ್ 01ರಂದು ಬೆಳಗ್ಗೆ ವೇಳೆಗೆ ರಾಕೇಶ್ ಕುಮಾರ್ ಅವರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಆದರೆ, ತಡವಾಗಿ ಕರ್ತವ್ಯಕ್ಕೆ ಹಾಜರಾದರು.

31 ವರ್ಷ ವಯಸ್ಸಿನ ರಾಕೇಶ್ ಅವರು ಬೆಳಗ್ಗೆ ಸುಮಾರು 11 ಗಂಟೆ ವೇಳೆಗೆ ಸೋನಿಯಾ ಗಾಂಧಿ ಅವರ ನಿವಾಸವನ್ನು ತೊರೆದಿದ್ದಾರೆ. ನಂತರ ಕೆಲ ಹೊತ್ತು ತನ್ನ ಗೆಳೆಯರೊಂದಿಗೆ ಕಾಲ ಕಳೆದಿದ್ದಾರೆ. ಆದರೆ, ಅವರು ಬಳಸುತ್ತಿದ್ದ ಮೊಬೈಲ್ ಫೋನ್ ಹಾಗೂ ಸರ್ವೀಸ್ ರಿವಾಲ್ವರ್ ಗಳನ್ನು ಸೋನಿಯಾ ಅವರ ನಿವಾಸದಲ್ಲೇ ಇರಿಸಿ ಹೋಗಿದ್ದಾರೆ.
ಸೆಪ್ಟೆಂಬರ್ 02ರಂದು ರಾಕೇಶ್ ಅವರ ಕುಟುಂಬಸ್ಥರು, ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇನ್ನೂ ಕರ್ತವ್ಯದಲ್ಲಿರಬೇಕು ಎಂದುಕೊಂಡು ಸುಮ್ಮನಾಗಿದ್ದಾರೆ. ಮರುದಿನ ಕೂಡಾ ಯಾವುದೇ ಸುಳಿವು ಸಿಗದ ಕಾರಣ, ಕುಟುಂಬಸ್ಥರು ಕಂಗಾಲಾಗಿದ್ದಾರೆ. ರಾಕೇಶ್ ಅವರ ತಂದೆ ನೇರವಾಗಿ ನಂ 10, ಜನಪಥ್ ನಿವಾಸಕ್ಕೆ ಬಂದು ಮಾಹಿತಿ ಪಡೆದು, ಪೊಲೀಸ್ ಕಚೇರಿಗೆ ತೆರಳಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ. (ಒನ್ಇಂಡಿಯಾ ಸುದ್ದಿ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications