ಸೋನಿಯಾ, ರಾಹುಲ್ ಸೇರಿ ಜಾಮೀನಿನ ಮೇಲಿರುವ ಕಾಂಗ್ರೆಸ್ ನಾಯಕರು ಯಾರ್ಯಾರು?
ನವದೆಹಲಿ, ಆಗಸ್ಟ್ 22: ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರು ಬಂಧನಕ್ಕೊಳಗಾದ ನಂತರ ಕಾಂಗ್ರೆಸ್ ನ ಹಲವು ನಾಯಕರ ನಿದ್ದೆಗೆಟ್ಟಿದೆ. ಏಕೆಂದರೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಘಟಾನುಘಟಿಗಳೆಲ್ಲ ಸದ್ಯಕ್ಕೆ ಜಾಮೀನಿನ ಮೇಲೆ ಹೊರಗಿರುವಂಥವರು!
ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಪಿ.ಚಿದಂಬರಂ ಅವರನ್ನು ಬುಧವಾರ ಸಿಬಿಐ ಪೊಲೀಸರು ನವದೆಹಲಿಯ ಅವರ ನಿವಾಸದಲ್ಲೇ ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಜಾಮೀನಿನ ಮೇಲಿರುವ ಕಾಂಗ್ರೆಸ್ ಮುಖಂಡರಲ್ಲಿ ಅತಂಕ ಆರಂಭವಾಗಿದೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಂಸದ ಶಶಿ ತರೂರ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್, ಉತ್ತರ ಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿ ಮುಖಂಡ ರಾಜ್ ಬಬ್ಬರ್ , ಪಂಜಾಬಿನ ಮಾಜಿ ಮಂತ್ರಿ ನವಜೋತ್ ಸಿಂಗ್ ಸಿಧು, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಈ ಎಲ್ಲ ನಾಯಕರೂ ಬೇರೆ ಬೇರೆ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಬಂಧನಕ್ಕೊಳಗಾಗದೆ ಉಳಿದಿದ್ದಾರೆ.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ವಂಚನೆ ಸಂಚಿನ ಪ್ರಯತ್ನ ಮತ್ತು ಹಣಕಾಸು ನಿಧಿಯ ದುರ್ಬಳಕೆ ಪ್ರಕರಣವನ್ನು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು 2012ರಲ್ಲಿ ದಾಖಲಿಸಿದ್ದರು. ನ್ಯಾಷನಲ್ ಹೆರಾಲ್ಡ್ ಸುದ್ದಿಪತ್ರಿಕೆಯ ಮಾಲೀಕರಾಗಿರುವ ಅಸೋಸಿಯೇಟೆಡ್ ಜರ್ನಲ್ಸ್ ಲಮಿಟೆಡ್ ಗೆ 90.25 ಕೋಟಿ ರೂಪಾಯಿ ಸಾಲವನ್ನು ಬಡ್ಡಿರಹಿತರವಾಗಿ ಕಾಂಗ್ರೆಸ್ ಪಕ್ಷ ನೀಡಿತ್ತು ಎಂಬುದು ಆರೋಪವಾಗಿತ್ತು. ಈ ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದ್ದು, ಸೋನಿಯಾ ಮತ್ತು ರಾಹುಲ್ ಗಾಂಧಿ ಇಬ್ಬರೂ ಜಾಮೀನಿನ ಮೇಲೆ ಹೊರಗುಳಿದಿದ್ದಾರೆ.
ಪತ್ನಿ ಸುನಂದಾ ಪುಷ್ಕರ್ ಅವರ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಶಶಿ ತರೂರ್ ಅವರು ಜಾಮೀನು ಪಡೆದಿದ್ದಾರೆ.

ಯೋಗಗುರು ಬಾಬಾ ರಾನದೇವ್ ಅವರ ವಿರುದ್ಧ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ನ ಹಿರಿಯ ನಾಯಕ, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಪಂಜಾಬಿನ ಪಟಿಯಾಲದ ರಸ್ತೆಯಲ್ಲಿ ಗಲಭೆಯೊಂದರಲ್ಲಿ 65 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು. ಅವರ ತಲೆಗೆ ಬಲವಾಗಿ ಏಟು ಬಿದ್ದಿತ್ತು. ಅದಕ್ಕೆ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಕಾರಣ ಎಂದು ದೂರಿ ಕೇಸು ದಾಖಲಿಸಲಾಗಿತ್ತು. ಆದರೆ ಅವರಿಗೆ ನಂತರ ಜಾಮೀನು ನೀಡಲಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications