ಬಾಲ್ಯವಿವಾಹದಲ್ಲಿ ದಕ್ಷಿಣ ಭಾರತ ನಂ.1, ಕರ್ನಾಟಕ ದ್ವಿತೀಯ
ನವದೆಹಲಿ, ಆಗಸ್ಟ್, 20 : ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ (NCRB) ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಒಂದು ಸಮೀಕ್ಷೆ ಕೈಗೊಂಡಿದ್ದು, ಇದರಿಂದ ದೊರೆತ ಮಾಹಿತಿ ಪ್ರಕಾರ ದಕ್ಷಿಣ ಭಾರತಕ್ಕೆ ಪ್ರಥಮ ಸ್ಥಾನ. ರಾಜ್ಯಗಳಲ್ಲಿ ಕರ್ನಾಟಕಕ್ಕೆ ದ್ವಿತೀಯ ಸ್ಥಾನ.
ಇತಿಹಾಸದಿಂದಲೂ ಬಾಲ್ಯ ವಿವಾಹ ನಿಷೇಧ ಕುರಿತಾಗಿ ಹಲವಾರು ಮಹನೀಯರು ದನಿ ಎತ್ತುತ್ತಲೇ ಬರುತ್ತಿದ್ದಾರೆ. ಆದರೂ ಬಾಲ್ಯ ವಿವಾಹ ಪ್ರಕರಣದಲ್ಲಿ ಪ್ರಥಮ ಸ್ಥಾನ ಪಡೆದ ದಕ್ಷಿಣ ಭಾರತ, ಅದರಲ್ಲಿ 2ನೇ ಸ್ಥಾನ ಪಡೆದ ಕರ್ನಾಟಕ ಬಾಲ್ಯ ವಿವಾಹ ನಿಷೇಧದ ಕೂಗಿಗೆ ಎಚ್ಚರಗೊಂಡಂತೆ ಭಾಸವಾಗುತ್ತಿಲ್ಲ.[ರಾಯಚೂರು: ಬಾಲ್ಯ ವಿವಾಹ ತಡೆಗೆ ಹೊಸ ಕಾನೂನು]
2014 ರ ವರದಿಯಲ್ಲಿ ಕೆಲವು ಲೋಪದೋಷ ಕಂಡ ಎನ್ಸಿಆರ್ ಬಿ ತಂಡವು, ಈ ವರ್ಷ ಪುನಃ ಸಮೀಕ್ಷೆ ಕೈಗೊಂಡಿತು. ಇದರಿಂದ ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ ರಾಜ್ಯಗಳು ಮುಂಚೂಣಿಯಲ್ಲಿದ್ದು, ಬಳಿಕ ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ನಂತರದ ಸ್ಥಾನ ಗಳಿಸಿಕೊಂಡಿದೆ ಎಂದು ತನ್ನ ವರದಿಯಲ್ಲಿ ಹೇಳಿದೆ.
ಮಹಿಳೆ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವಾಲಯವು ಕಲೆಹಾಕಿದ ದತ್ತಾಂಶವನ್ನು ಒಪ್ಪಿಕೊಂಡಿದ್ದು, ಇದರ ಪ್ರಕಾರ 20 ರಿಂದ 24 ವರ್ಷ ವಯಸ್ಸಿನ 43% ರಷ್ಟು ಮಹಿಳೆಯರು 18 ವರ್ಷದೊಳಗೆ ವಿವಾಹವಾಗಿರುವುದನ್ನು ಒಪ್ಪಿಕೊಂಡಿದ್ದಾರೆ.
ತಮಿಳುನಾಡಿನಲ್ಲಿ ಈ ವರ್ಷ 47 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇನ್ನು 47 ಮಕ್ಕಳು ಬಾಲ್ಯವಿವಾಹದ ಕೂಪಕ್ಕೆ ಬಲಿಯಾಗಿದ್ದಾರೆ. ಕರ್ನಾಟಕದಲ್ಲಿ 44 ಪ್ರಕರಣಗಳು ದಾಖಲಾಗಿದ್ದು, 45 ಹೆಣ್ಣು ಮಕ್ಕಳು ವಿವಾಹ ಬಂಧನಕ್ಕೆ ಸಿಲುಕಿ ನರಳುತ್ತಿದ್ದಾರೆ.[ಬಾಲ್ಯವಿವಾಹದ ವಿರುದ್ಧ ಸಿಡಿದೆದ್ದ ಸಿಡಿಲ ಮರಿ]
ಶೈಕ್ಷಣಿಕ ಮಟ್ಟ ಹೆಚ್ಚಿರುವ ಕರ್ನಾಟಕ( 75.60), ತಮಿಳುನಾಡು(80.33) ರಾಜ್ಯಗಳಲ್ಲಿಯೇ ಈ ಘಟನೆ ಸಂಭವಿಸಿದ್ದು, ಕೇರಳ 19, ಆಂಧ್ರಪ್ರದೇಶ 16 ಮತ್ತು ತೆಲಂಗಾಣ 13 ಹೆಣ್ಣು ಮಕ್ಕಳು ಬಾಲ್ಯವಿವಾಹ ದೌರ್ಜನ್ಯಕ್ಕೆ ಬಲಿಯಾಗಿದ್ದಾರೆ.
ಕಳೆದ ವರ್ಷ ಪಶ್ಚಿಮ ಬಂಗಾಳದಲ್ಲಿ 37, ಗುಜರಾತ್ 21, ಹರಿಯಾಣ 15, ಮಧ್ಯ ಪ್ರದೇಶ 14, ದೆಹಲಿ 2 ಬಾಲ್ಯ ವಿವಾಹಗಳು ನಡೆದಿದ್ದು, ಜಮ್ಮು ಕಾಶ್ಮೀರ, ಗೋವಾ, ಉತ್ತರ ಖಂಡ ರಾಜ್ಯಗಳಲ್ಲಿ ಬಾಲ್ಯವಿವಾಹ ಆಗಿರುವುದರ ಕುರಿತಾಗಿ ಯಾವುದೇ ಮಾಹಿತಿ ತಿಳಿದು ಬಂದಿಲ್ಲ ಎನ್ಸಿಆರ್ ಬಿ ತಿಳಿಸಿದೆ.
ಭಾರತಾದ್ಯಂತ ಸುಮಾರು 280 ಬಾಲ್ಯವಿವಾಹಗಳು ನಡೆದಿದ್ದು, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತಾಗಿ ಯಾರೊಬ್ಬರೂ ನಿಗಾ ವಹಿಸದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ













Click it and Unblock the Notifications