ಸಂಸತ್ನಲ್ಲಿ ಧಾರ್ಮಿಕ ಘೋಷಣೆಗಳಿಗೆ ಅವಕಾಶ ನೀಡೊಲ್ಲ: ಸ್ಪೀಕರ್ ಬಿರ್ಲಾ
ನವದೆಹಲಿ, ಜೂನ್ 20: ಸಂಸತ್ನಲ್ಲಿ ಧಾರ್ಮಿಕ ಘೋಷಣೆಗಳನ್ನು ಜಪಿಸುವುದಕ್ಕೆ ಮತ್ತೆ ಅವಕಾಶ ನೀಡುವುದಿಲ್ಲ ಎಂದು ಲೋಕಸಭೆಯ ನೂತನ ಸಭಾಧ್ಯಕ್ಷ ಓಂ ಬಿರ್ಲಾ ಹೇಳಿದ್ದಾರೆ.
ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದರು ಸೇರಿದಂತೆ ವಿರೋಧಪಕ್ಷದ ಮುಖಂಡರಿದ್ದ ಭಾಗದಿಂದ ಆಡಳಿತಪಕ್ಷದವರ ಘೋಷಣೆಗಳಿಗೆ ಪ್ರತಿಯಾಗಿ ಬಂದ ಘೋಷಣೆಗಳಿಗೆ ತಡೆಯೊಡ್ಡುವ ಮೂಲಕ ಸರಿಯಾದ ಕೆಲಸ ಮಾಡಿದ್ದರು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಆಡಳಿತ ಪಕ್ಷದವರ ಘೋಷಣೆಗಳಿಗೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ನ ಕೆಲವು ಸಂಸದರು ತಮ್ಮದೇ ಶೈಲಿಯಲ್ಲಿ ಘೋಷಣೆ ಕೂಗಿದ್ದರು.

ಸಂಸತ್ತು, ಘೋಷಣೆಗಳನ್ನು ಕೂಗಲು, ಫಲಕಗಳನ್ನು ಪ್ರದರ್ಶಿಸಲು ಅಥವಾ ಬಾವಿಗಿಳಿದು ಗದ್ದಲ ಎಬ್ಬಿಸಲು ಇರುವ ಸ್ಥಳವಲ್ಲ. ಅವರು ಪ್ರತಿಭಟನೆ ಮತ್ತು ಪ್ರದರ್ಶನಗಳನ್ನು ನಡೆಸಲು ಬೇರೆ ದಾರಿಯಿದೆ. ಜನರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಬೇಕಿದ್ದರೆ, ಯಾವುದಾದರೂ ಆರೋಪ ಮಾಡಬೇಕಿದ್ದರೆ ಅಥವಾ ಏನನ್ನಾದರೂ ಹೇಳಬೇಕಿದ್ದರೆ ಅವಕಾಶವಿದೆ. ಆದರೆ, ಗ್ಯಾಲರಿಗೆ ಬಂದು ಅದನ್ನು ಮಾಡುವಂತಿಲ್ಲ ಎಂದು ಬಿರ್ಲಾ ಹೇಳಿದ್ದಾರೆ.
ಈ ರೀತಿಯ ಘಟನೆ ಮತ್ತೆ ಮರುಕಳಿಸುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ನಿಯಮಗಳಿಗೆ ಅನುಗುಣವಾಗಿ ಸಂಸತ್ ಅಧಿವೇಶನ ನಡೆಸಲು ಪ್ರಯತ್ನಿಸುತ್ತೇವೆ. ಜೈ ಶ್ರೀರಾಮ್, ಜೈ ಭಾರತ್, ವಂದೇ ಮಾತರಂ ಮುಂತಾದ ಘೋಷಣೆಗಳು ಹಳೆಯ ವಿವಾದ. ಚರ್ಚೆಯ ವೇಳೆ ಅದು ವಿಭಿನ್ನ. ಪ್ರತಿ ಬಾರಿಯೂ ವಿಭಿನ್ನ ಸಂದರ್ಭವಿರುತ್ತದೆ. ಯಾವ ಸಂದರ್ಭದಲ್ಲಿ ಹೇಗೆ ಎಂಬುದನ್ನು ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಂಡಿರುವವರು ನಿರ್ಧರಿಸುತ್ತಾರೆ ಎಂದಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications