ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಜಯ್ ಮಲ್ಯಗೆ ಆ. 27ರ ಗಡುವು: ಆಸ್ತಿ ಮುಟ್ಟುಗೋಲು ಎಚ್ಚರಿಕೆ

|
Google Oneindia Kannada News

ನವದೆಹಲಿ, ಜೂನ್ 30: ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಮಸೂದೆ ಅಡಿಯಲ್ಲಿ ರಚನೆಯಾದ ವಿಶೇಷ ನ್ಯಾಯಾಲಯವು ತನ್ನ ಮುಂದೆ ಆಗಸ್ಟ್ 27ರಂದು ಹಾಜರಾಗುವಂತೆ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಬ್ಯಾಂಕ್‌ಗಳಿಗೆ ವಂಚನೆ ಮಾಡಿ ಪರಾರಿಯಾದ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ಹಾಗೂ ಇತರರಿಗೆ ಈ ನೋಟಿಸ್ ಕಳುಹಿಸಲಾಗಿದೆ.

ಮೋದಿಗೆ ಪತ್ರ ಬರೆದು ನೋವು ತೋಡಿಕೊಂಡ ಮಲ್ಯಮೋದಿಗೆ ಪತ್ರ ಬರೆದು ನೋವು ತೋಡಿಕೊಂಡ ಮಲ್ಯ

ಮಲ್ಯ ಅವರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಬೇಕು ಹಾಗೂ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ನೀಡಬೇಕು ಎಂದು ಕೋರಿ ಜೂನ್ 22ರಂದು ಜಾರಿ ನಿರ್ದೇಶನಾಲಯವು ಅರ್ಜಿ ಸಲ್ಲಿಸಿತ್ತು.

special court summons mallya on august 27

ಒಂದು ವೇಲೆ ಮಲ್ಯ ಅವರು ನೀಡಿದ ಅವಧಿಯಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದರೆ ಅವರನ್ನು ದೇಶಭ್ರಷ್ಟ ಎಂದು ಘೋಷಿಸಲಾಗುತ್ತದೆ ಮತ್ತು ಅವರ 12,500 ಕೋಟಿ ರೂ ಮೌಲ್ಯದ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂಬುದಾಗಿ ಕೋರ್ಟ್ ಎಚ್ಚರಿಕೆ ನೀಡಿದೆ.

ಚೌಕಾಸಿ ನಿರಾಕರಣೆ
ಲಂಡನ್‌ನಲ್ಲಿರುವ ವಿಜಯ್ ಮಲ್ಯ, ಇ.ಡಿ. ಅಧಿಕಾರಿಗಳು ಆರೋಪಿಸಿರುವಂತೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತಾವು ಚೌಕಾಸಿ ವ್ಯವಹಾರಕ್ಕೆ ಇಳಿದಿಲ್ಲ ಎಂದು ಹೇಳಿದ್ದಾರೆ.

ಕಿಂಗ್ ಫಿಷರ್ ಉದ್ಯೋಗಿಗಳಿಗೆ ಮದ್ಯದ ದೊರೆ ಮಲ್ಯ 'ಪ್ರೇಮ'ದ ಪತ್ರ!ಕಿಂಗ್ ಫಿಷರ್ ಉದ್ಯೋಗಿಗಳಿಗೆ ಮದ್ಯದ ದೊರೆ ಮಲ್ಯ 'ಪ್ರೇಮ'ದ ಪತ್ರ!

ನಾನು ಚೌಕಾಸಿ ಪ್ರಯತ್ನ ಮಾಡಿದ್ದೇನೆ ಎಂದು ಅಧಿಕಾರಿ ಹೇಳಿರುವ ವರದಿಯನ್ನು ಓದಿದ್ದೇನೆ. ಅಧಿಕಾರಿಗಳು ದಯಮಾಡಿ ಇ.ಡಿ. ದೋಷಾರೋಪವನ್ನು ಮೊದಲು ಓದಲಿ ಎಂದು ಕೋರುತ್ತೇನೆ ಎಂದು ಹೇಳಿದ್ದಾರೆ.

English summary
Special Court designated under Fugitive Economic Offenders summoned Vijay Mallya to appear before it on August 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X